ಮಹಮ್ಮದ್ ಸುಭಾನ್ ಗಡಿಪಾರು

ಉಡುಪಿ: ದನ ಕಳವು, ಅಕ್ರಮ ಜಾನುವಾರು ಸಾಗಾಟ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪಿ ಮಹಮ್ಮದ್ ಸುಭಾನ್ ಎಂಬಾತನನ್ನು 6 ತಿಂಗಳು ಚಳ್ಳಕೆರೆ ಉಪ ವಿಭಾಗಕ್ಕೆ ಗಡಿ ಪಾರು ಮಾಡಲಾಗಿದೆ.

ಮಹಮ್ಮದ್ ಸುಭಾನ್‌ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದು, ಜೈಲು ಶಿಕ್ಷೆ ಅನುಭವಿಸಿದ್ದಾನೆ. ಹಲವು ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರಬಂದ ಬಳಿಕವೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಶಾಂತಿ ಸುವ್ಯವಸ್ಥೆಗೆ ಭಂಗ ತಂದಿದ್ದ.

ಗಂಗೊಳ್ಳಿ ಪಿಎಸ್‌ಐ ನೀಡಿದ ವರದಿ ಆಧರಿಸಿ ಕುಂದಾಪುರ ಉಪ ವಿಭಾಗದ ದಂಡಾಧಿಕಾರಿ ಮಹಮ್ಮದ್ ಸುಭಾನ್‌ಗೆ ಗಡಿ ಪಾರು ಮಾಡಿದ್ದಾರೆ. ಸಂಬಂಧಪಟ್ಟ ಪ್ರಾಧಿಕಾರದ ಅನುಮತಿ ಪಡೆಯದೆ ಕುಂದಾಪುರ ಉಪ ವಿಭಾಗದಲ್ಲಿ ಆರೋಪಿಯು ಕಾಣಿಸಿಕೊಂಡರೆ ಬಂಧಿಸುವಂತೆ ಆದೇಶಿಸಲಾಗಿದೆ.

Comments

Leave a Reply

Your email address will not be published. Required fields are marked *