ಬೈಂದೂರು, ಫೆಬ್ರವರಿ 3, 2025: ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ನಾವುಂದ ಅರೆಹೊಳೆಯಲ್ಲಿ ರೈಲ್ವೆ ಹಳಿಯಲ್ಲಿ ಸುಮಾರು 30 ವರ್ಷದ ಯುವಕನ ಶವ ದೊರಕಿದ ಘಟನೆ ನಡೆದಿದೆ. ಶವದ ಅವಶೇಷಗಳು ಸುಮಾರು ಅರ್ಧ ಕಿಲೋಮೀಟರ್ ತನಕ ಚದರಿವೆಯಾಗಿದ್ದವು.
ತಕ್ಷಣ ಸ್ಥಳಕ್ಕೆ ಧಾವಿಸಿದ ಗಂಗೊಳ್ಳಿಯ 24×7 ಆಂಬ್ಯುಲೆನ್ಸ್ ತಂಡದ ಸದಸ್ಯರಾದ ಇಬ್ರಾಹಿಂ, ಮೌಲಾನ ಶಕೀಲ್, ಸಮೀ ಉಲ್ಲಾ ಕಾಝೀ ಮತ್ತು ಮಗ್ದೂಮ್ ಅರೆಹೊಳೆ ಅವರು ಶವದ ಅವಶೇಷಗಳನ್ನು ಗುರುತಿಸಿ, ಸಂಗ್ರಹಿಸಿ ಶವಾಗಾರಕ್ಕೆ ಒಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು
Leave a Reply