ಕಾರ್ಕಳದಲ್ಲಿ ಮತ್ತೆರಡು ಕಲ್ಲು ತೂರಾಟ ಪ್ರಕರಣಗಳು ವರದಿ

ಕಾರ್ಕಳ, ಮೇ 03: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬಳಿಕ ಕಾರ್ಕಳ ತಾಲೂಕಿನಲ್ಲಿ ಮತ್ತೆರಡು ಕಲ್ಲು ತೂರಾಟ ಪ್ರಕರಣಗಳು ವರದಿಯಾಗಿವೆ.

ಮೊದಲ ಘಟನೆಯಲ್ಲಿ, ಇಬ್ಬರು ಮುಸುಕುಧಾರಿ ವ್ಯಕ್ತಿಗಳು ತಮಿಳುನಾಡು ನೋಂದಾಯಿತ ಮೀನುಗಾರಿಕಾ ಟ್ರಕ್‌ನ ಮುಂಭಾಗದ ಗಾಜಿಗೆ ಕಲ್ಲು ತೂರಿದ್ದಾರೆ. ಈ ಟ್ರಕ್ ಮಲ್ಪೆಯಿಂದ ಮೀನು ತುಂಬಿಸಿಕೊಂಡು ತಮಿಳುನಾಡಿಗೆ ತೆರಳುತ್ತಿತ್ತು. ಕೆಮರು ಪರ್ಪಲೆ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಸುಮಾರು 15,000 ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಇನ್ನೊಂದು ಘಟನೆಯಲ್ಲಿ, ಕಾರ್ಕಳದಿಂದ ಬೆಳ್ಮಣ್‌ಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಮುಂಭಾಗದ ಗಾಜಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿ ಹಾನಿಗೊಳಿಸಿದ್ದಾರೆ. ಈ ಘಟನೆಯಲ್ಲಿ ಸುಮಾರು 45,000 ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *