ಮಣಿಪಾಲ: ಗಾಂಜಾ ಸೇವನೆ ಆರೋಪ; ಒಬ್ಬನ ಬಂಧನ

ಮಣಿಪಾಲ, ಮೇ 01, 2025: ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ನೇತೃತ್ವದಲ್ಲಿ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಸಿಬ್ಬಂದಿ, ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ಟ್ಯಾಪ್ಮಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಶಂಕಾಸ್ಪದವಾಗಿ ಕಂಡ ಶ್ರೇಯಾಂಕ್ ಸಂಜಯ್ (21) ಎಂಬ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಮಾದಕ ವಸ್ತು ಗಾಂಜಾ ಸೇವಿಸಿರುವ ಶಂಕೆಯ ಮೇರೆಗೆ, ಅವನನ್ನು ಮಣಿಪಾಲದ ಕೆ.ಎಂ.ಸಿ. ಫೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ತಪಾಸಣೆಗೆ ಹಾಜರುಪಡಿಸಲಾಯಿತು. ವೈದ್ಯಕೀಯ ವರದಿಯಲ್ಲಿ ಆರೋಪಿಯು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 78/2025ರ ಅಡಿಯಲ್ಲಿ ಕಲಂ 27(b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

Comments

Leave a Reply

Your email address will not be published. Required fields are marked *