ಶಿರೂರು: ಅಂಬುಲೆನ್ಸ್ ಡಿಕ್ಕಿ; ಟೋಲ್ ಸಿಬ್ಬಂದಿಗೆ ಗಂಭೀರ ಗಾಯ

ಬೈಂದೂರು, ಮೇ 20, 2025: ದಿನಾಂಕ 17/05/2025 ರಂದು ರಾತ್ರಿ 10:38 ಗಂಟೆಗೆ ಬೈಂದೂರು ತಾಲೂಕು ಶಿರೂರು ಗ್ರಾಮದ ಶಿರೂರು ಟೋಲ್‌ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಂದೀಪ್ ಬಾಲಸೋ ಸೂರ್ಯವಂಶಿ (25) ಅವರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಂದೀಪ್ ಅವರು ಟೋಲ್‌ನ W1 ಲೇನ್ ಬದಿಯ ರಸ್ತೆಯಲ್ಲಿ ನಿಂತಿದ್ದಾಗ, ಬೈಂದೂರಿನಿಂದ ಭಟ್ಕಳ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬರುತ್ತಿದ್ದ KL-20-G-3236 ಸಂಖ್ಯೆಯ ಅಂಬುಲೆನ್ಸ್ ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಸಂದೀಪ್ ರಸ್ತೆಗೆ ಬಿದ್ದು, ಅವರ ಕೆನ್ನೆ, ಕಿವಿ ಮತ್ತು ಮೂಗಿನ ಭಾಗಕ್ಕೆ ಗಂಭೀರ ಒಳಗಾಯವಾಗಿ ರಕ್ತಸ್ರಾವವಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮೊದಲು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 103/2025, ಕಲಂ 281, 125(b) BNS ರಂತೆ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *