ಗಂಗೊಳ್ಳಿ, ಮೇ 20: ಉಡುಪಿ ಜಿಲ್ಲೆಯ ಕರಾವಳಿ ಗ್ರಾಮವಾದ ಗಂಗೊಳ್ಳಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಇಂದು (ಮಂಗಳವಾರ) ಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದೆ. ಈ ಭಾರೀ ಮಳೆಯಿಂದಾಗಿ ಹಲವು ಕಡೆ ರಸ್ತೆಗಳಲ್ಲಿ ನೀರು ತುಂಬಿಕೊಂಡಿದೆ.
ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ನಾಗರಿಕರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದೆ ಮತ್ತು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಗಂಗೊಳ್ಳಿ ಗ್ರಾಮ ಪಂಚಾಯತ್ ತಂಡವು ಪರಿಸ್ಥಿತಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದೆ. ಅವರ ಅವಿಶ್ರಾಂತ ಪ್ರಯತ್ನಗಳು ಶ್ಲಾಘನೀಯ.
Leave a Reply