ಕೊಲ್ಲೂರು, ಮೇ 21, 2025: ಕುಂದಾಪುರ ತಾಲೂಕಿನ ಇಡೂರು ಕುಂಜಾಡಿ ಗ್ರಾಮದ ಜನ್ನಲ್ ಎಂಬಲ್ಲಿ ದಿನಾಂಕ 19/05/2025 ರಂದು ಮಧ್ಯಾಹ್ನ 3:45 ಗಂಟೆಗೆ ಘೋರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಿತ್ತೂರು ಕಡೆಯಿಂದ ಕೊಲ್ಲೂರು ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ KA-20-N-2119ನೇ ಅಲ್ಟೋ ಕಾರನ್ನು ಚಲಾಯಿಸಿಕೊಂಡು ಬಂದ ಜೋಸ್ ಪಿಟಿ ಎಂಬುವವರು, ಜಡ್ಕಲ್ ಕಡೆಯಿಂದ ಚಿತ್ತೂರು ಕಡೆಗೆ KA-51-AE-7503ನೇ ಮಿನಿ ಗೂಡ್ಸ್ ವಾಹನವನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ಶಬರೀಶ (29), ಚಿತ್ತೂರು ಗ್ರಾಮ, ಕುಂದಾಪುರ ಇವರಿಗೆ ಎದುರುಗಡೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಈ ಡಿಕ್ಕಿಯ ಪರಿಣಾಮ ಶಬರೀಶ ಅವರ ತಲೆಗೆ ರಕ್ತಗಾಯವಾಗಿದ್ದು, ಕಾರಿನ ಚಾಲಕ ಜೋಸ್ ಪಿಟಿ ಹಾಗೂ ಕಾರಿನಲ್ಲಿದ್ದ ಮಹಿಳೆಗೂ ರಕ್ತಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಕುಂದಾಪುರದ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯಲ್ಲಿ ಶಬರೀಶ ಅವರಿಗೆ ಚಿಕಿತ್ಸೆ ನೀಡಿ ಒಳರೋಗಿಯಾಗಿ ದಾಖಲಿಸಿಕೊಳ್ಳಲಾಗಿದೆ. ಆದರೆ, ಕಾರಿನ ಚಾಲಕ ಜೋಸ್ ಪಿಟಿ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಈ ಘಟನೆಯ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 41/2025ರಂತೆ ಕಲಂ 281, 125(b), 106 BNS ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.
Leave a Reply