ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ವಾರ್ತಾಭಾರತಿಯ ಕಿರುಹೊತ್ತಿಗೆ ಲೋಕಾರ್ಪಣೆ

ಬೆಂಗಳೂರು, ಮೇ 22: ವಾರ್ತಾಭಾರತಿ ಪತ್ರಿಕೆಯ “ಸ್ವಾವಲಂಬಿ ಬದುಕು ಕೊಟ್ಟ ಗ್ಯಾರಂಟಿ ಸರ್ಕಾರ” ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು.

ವಾರ್ತಾಭಾರತಿ ಪತ್ರಿಕೆಯು ರಾಜ್ಯಾದ್ಯಂತ ಸಂಚರಿಸಿ, ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ರಾಜ್ಯದ ಬಡವರು, ಮಧ್ಯಮ ವರ್ಗದವರು ಹಾಗೂ ಶ್ರಮಿಕ ಸಮುದಾಯದ ಅಭಿಪ್ರಾಯಗಳನ್ನು ಸಂಗ್ರಹಿಸಿ, ಅದರ ಸಾರಸಂಗ್ರಹವನ್ನು ಈ ಪುಸ್ತಕದಲ್ಲಿ ದಾಖಲಿಸಿದೆ.

ಸರ್ಕಾರ ಅಥವಾ ವಾರ್ತಾ ಇಲಾಖೆಯಿಂದ ಯಾವುದೇ ಆರ್ಥಿಕ ನೆರವು ಪಡೆಯದೇ, ವಾರ্তಾಭಾರತಿ ಪತ್ರಿಕೆಯು ತನ್ನ ಸ್ವಂತ ಆಸಕ್ತಿ ಮತ್ತು ಜನಪರ ಕಾಳಜಿಯಿಂದ ಈ ಸಮೀಕ್ಷೆಯನ್ನು ನಡೆಸಿ ಜನಾಭಿಪ್ರಾಯ ಸಂಗ್ರಹಿಸಿರುವುದಕ್ಕೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ವಾರ್ತಾಭಾರತಿ ಪತ್ರಿಕಾ ತಂಡದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Comments

Leave a Reply

Your email address will not be published. Required fields are marked *