ಕುಂದಾಪುರ : ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಬಾರಿ ಗಾಳಿ ಮಳೆಗೆ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ ಹಾಗೂ ಹೊಳೆ ಸಮುದ್ರಕ್ಕೆ ಇಳಿಯದಂತೆ ಆದೇಶ ಹೊರಡಿಸಿದೆ, ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ತ್ರಾಸಿ ಮರವಂತೆ ಬೀಚಿಗೆ ಬೈಂದೂರು ತಹಸಿಲ್ದಾರ್ ಭೀಮ್ ಸೇನ್ ಕುಲಕರ್ಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮರವಂತೆ ವರಹ ಸ್ವಾಮಿ ದೇವಸ್ಥಾನದ ಎದುರುಗಡೆ ಇರುವ ಬೀಚಿನಲ್ಲಿ ಒಂದಷ್ಟು ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದ ಪ್ರವಾಸಿಗರನ್ನು ಕೈಬೀಸಿ ಕರೆದು ಸಮುದ್ರದ ಅಲೆಗಳು ಹೆಚ್ಚಾಗಿರುವುದರಿಂದ ಸಮುದ್ರದಲ್ಲಿ ಹುಚ್ಚಾಟ ಮಾಡುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡು ಬುದ್ಧಿ ಮಾತು ಹೇಳಿ ಕಳಿಸಲಾಗಿದೆ.
ತ್ರಾಸಿ ಮರವಂತೆ ಬೀಚಿನಲ್ಲಿ ಇಂತಹ ತುರ್ತು ಪರಿಸ್ಥಿತಿಯಲ್ಲಿ ಯಾರೊಬ್ಬ ಸೆಕ್ಯುರಿಟಿ ಗಾರ್ಡ್ ಇಲ್ಲದಿರುವುದು ಕಂಡು ಬಂದಿದೆ ಎನ್ನಲಾಗಿದೆ, ಈ ವೇಳೆ ಕೋಸ್ಟಲ್ ನ್ಯೂಸ್ ವರದಿಗಾರರ ಜೊತೆ ಮಾತನಾಡಿ ಮಳೆಗಾಲದ ಸಮಯದಲ್ಲಿ ತ್ರಾಸಿ ಮರವಂತೆ ಬೀಚಿನಲ್ಲಿ ಹೆಚ್ಚಿನ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆ, ಹಾಗೂ ಹೆಚ್ಚಿನ ಭದ್ರತೆಗಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಿದರು.
Leave a Reply