ಹೊನ್ನಾವರ: ಅಕ್ರಮ ಜಾನುವಾರು ಸಾಗಾಟ: ಮೂವರು ಬಂಧನ, 19 ಜಾನುವಾರುಗಳ ವಶ

ಹೊನ್ನಾವರ, ಮೇ 25, 2025: ಶನಿವಾರ ಬೆಳಗಿನ ಜಾವದಲ್ಲಿ ಹೊನ್ನಾವರದಿಂದ ಭಟ್ಕಳದ ಕಡೆಗೆ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರನ್ನು ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಶಿರಾಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ ಭರಮಪ್ಪ ಬೆಳಗಲಿ ನೇತೃತ್ವದ ತಂಡವು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದೆ. ಸುಮಾರು 5.70 ಲಕ್ಷ ರೂಪಾಯಿ ಮೌಲ್ಯದ 19 ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಾಗಾಟಕ್ಕೆ ಬಳಸಿದ ವಾಹನವನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿಗಳು ಹಾವೇರಿಯ ಚೇತನ ನಂದೀಶ ಕಡ್ಲಿ (26), ಸಂತೋಷ ದ್ಯಾನಪ್ಪ ಬೋರದ (25) ಮತ್ತು ಗದಗ ನಿವಾಸಿ ದುರ್ಗಪ್ಪ ಫಕ್ಕೀರಪ್ಪ ಛಲವಾದಿ (50). ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಯಾದ ಅಣ್ಣಪ್ಪ ನಾಯ್ಕ, ರಾಮಯ್ಯ ನಾಯ್ಕ, ಬಸವನಗೌಡ ಪಾಟೀಲ ಮತ್ತು ಚಾಲಕ ದೇವರಾಜ ಮೊಗೇರ ಪಾಲ್ಗೊಂಡಿದ್ದರು.

ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.

Comments

Leave a Reply

Your email address will not be published. Required fields are marked *