ಬೈಂದೂರು, ಮೇ 26, 2025: ತನ್ನ ಮನೆಯಲ್ಲಿ ಸಾಕಿ ಬೆಳೆಸಿದ ನಾಯಿಯನ್ನು ಬೈಕಿನ ಹಿಂಬದಿಯಲ್ಲಿ ಸರಪಳಿಯಿಂದ ಕಟ್ಟಿ ದರದರನೇ ಎಳೆದೊಯ್ಯುತ್ತಿರುವ ಅಮಾನವೀಯ ಘಟನೆ ಬೈಂದೂರಿನಲ್ಲಿ ನಡೆದಿದೆ.

ಬೈಂದೂರು ಪೇಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವ್ಯಕ್ತಿಯೊರ್ವ ತನ್ನ ಸಾಕು ನಾಯಿಯನ್ನು ಅತ್ಯಂತ ಕ್ರೂರವಾಗಿ ಬೈಕಿನ ಹಿಂಬದಿಯಲ್ಲಿ ಸರಪಳಿಯಿಂದ ಕಟ್ಟಿ 2ಕಿ.ಮೀ. ದೂರದವರೆಗೆ ಎಳೆದೊಯ್ಯಿದಿದ್ದಾನೆ.
ನಾಯಿಯನ್ನು ಅತ್ಯಂತ ಕ್ರೂರವಾಗಿ ರಸ್ತೆಯ ಮೇಲೆ ಎಳೆದೊಯ್ಯುತ್ತಿರುವುದನ್ನು ನೋಡಿದ ಸಾರ್ವಜನಿಕರು ತಕ್ಷಣ ನಿಲ್ಲಿಸಿ ವಿಚಾರಿಸಿದಾಗ ನಾನು ಮನೆಯಲ್ಲಿ ಸಾಕಿದ ನಾಯಿ ನೀವ್ಯಾರು ಕೇಳುವವರು ಎಂಬ ಹುದ್ದಾಟತನ ತೋರಿದ್ದಾನೆ.
ನಾಯಿಯನ್ನು ಎಳೆದೊಯ್ದ ರಭಸಕ್ಕೆ ನಾಯಿಯ ಕಾಲಿನಲ್ಲಿ ಗಾಯವಾಗಿ ರಕ್ತ ದರದರನೇ ಸುರಿದೆ. ರಸ್ತೆಯ ಮೇಲೆ ಬಿದ್ದಿರುವ ರಕ್ತವನ್ನು ನೋಡಿದ ನೆಟ್ಟಿಗರು ವ್ಯಕ್ತಿಯನ್ನು ತರಾಟೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Leave a Reply