ಪುತ್ತೂರು: ಕಾರು-ಖಾಸಗಿ ಬಸ್‌ ಡಿಕ್ಕಿ; ಮೂವರಿಗೆ ಗಂಭೀರ ಗಾಯ

ಪುತ್ತೂರು, ಮೇ 27, 2025: ಮುರಾ ಸಮೀಪ ಇಂದು ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕಾರು ಮತ್ತು ಖಾಸಗಿ ಬಸ್‌ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೂಲಗಳ ಪ್ರಕಾರ, ಆಂಡೆಪುನಿಯ ಈಶ್ವರ ಭಟ್‌ ಅವರ ಮನೆಯಲ್ಲಿ ಇಂದು ಶ್ರಾದ್ಧ ಕಾರ್ಯಕ್ರಮ ನಡೆಯುತ್ತಿತ್ತು. ಅವರ ಪುತ್ರಿ ಅಪೂರ್ವ ಮತ್ತು ಮೊಮ್ಮಗಳು ಈ ಕಾರ್ಯಕ್ರಮಕ್ಕಾಗಿ ಬೆಂಗಳೂರಿನಿಂದ ಪುತ್ತೂರಿಗೆ ಬಂದಿದ್ದರು. ಈಶ್ವರ ಭಟ್‌ ಅವರು ತಮ್ಮ ಕಾರಿನಲ್ಲಿ ಪುತ್ತೂರು ಪಟ್ಟಣದಿಂದ ಮನೆಗೆ ಕರೆತರುವಾಗ ಮುರಾ ಜಂಕ್ಷನ್‌ ಸಮೀಪ ಖಾಸಗಿ ಬಸ್‌ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಗಾಯಾಳುಗಳನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ. ಪುತ್ತೂರು ಟ್ರಾಫಿಕ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯರು ಅಪಘಾತದ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ರಕ್ಷಿಸಿದ್ದಾರೆ. ಪೀಡಿತ ಕಾರಿನಿಂದ ಗಾಯಾಳುಗಳನ್ನು ರಕ್ಷಿಸಲು ಕಬ್ಬಿಣದ ರಾಡ್‌ ಬಳಸಿ ಕಾರಿನ ಬಾಗಿಲನ್ನು ತೆರೆಯಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *