ಉತ್ತರ ಕನ್ನಡ: ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಸಮಸ್ಯೆಗಳ ಕುರಿತು ಸಭೆ

ಉತ್ತರ ಕನ್ನಡ, 28 ಮೇ,2025: ಜಿಲ್ಲಾ ಪೊಲೀಸ್ ಇಲಾಖೆಯಿಂದ ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದ ಸಮಸ್ಯೆಗಳನ್ನು ಆಲಿಸುವ ಸಲುವಾಗಿ ಸಭೆಯೊಂದನ್ನು ಆಯೋಜಿಸಲಾಗಿದೆ. ಈ ಸಭೆಯು ಮೇ 29, 2025ರಂದು ಬೆಳಿಗ್ಗೆ 11:00 ಗಂಟೆಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.

ಸಮುದಾಯದ ಸದಸ್ಯರು ತಮ್ಮ ಕುಂದುಕೊರತೆಗಳು ಮತ್ತು ಸಮಸ್ಯೆಗಳೊಂದಿಗೆ ಸಭೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ವಿನಮ್ರ ಆಹ್ವಾನಿಸಲಾಗಿದೆ. ಈ ಸಭೆಯ ಮೂಲಕ ಸಮುದಾಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಗುರಿಯನ್ನು ಇಲಾಖೆ ಹೊಂದಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪೊಲೀಸ್ ಕಚೇರಿಯನ್ನು ಸಂಪರ್ಕಿಸಬಹುದು.

Comments

Leave a Reply

Your email address will not be published. Required fields are marked *