ಮಣಿಪಾಲ, ಮೇ 29, 2025: ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಕಾಯಿನ್ ಸರ್ಕಲ್ ಬಳಿಯ ಮಣಿಪಾಲ ಕೆಎಂಸಿ ಆಸ್ಪತ್ರೆಯ ವಸತಿಗೃಹದ ನಂ. ಬಿ 235ರಲ್ಲಿ ವಾಸವಾಗಿರುವ ಸೆಲ್ವಂ ಎಂಬ ವ್ಯಕ್ತಿಯ ಮನೆಯಲ್ಲಿ ಕಳ್ಳತನದ ಘಟನೆ ನಡೆದಿದೆ.
ಸೆಲ್ವಂ ಅವರು ಕೆಲಸದ ನಿಮಿತ್ತ ಚೆನ್ನೈಗೆ ತೆರಳಿದ್ದ ವೇಳೆ, ಮನೆಗೆ ಬೀಗ ಹಾಕಿ ಖಾಲಿಯಾಗಿತ್ತು. ದಿನಾಂಕ 26/05/2025ರ ರಾತ್ರಿ, ಅಪರಿಚಿತ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿ, ಸುಮಾರು 10,00,000 ರೂಪಾಯಿ ಮೌಲ್ಯದ ಬೆಳ್ಳಿ ಮತ್ತು ಚಿನ್ನದ ಆಭರಣಗಳು ಹಾಗೂ 15,000 ರೂಪಾಯಿ ನಗದನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.
ಈ ಘಟನೆಯ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 87/2025ರಡಿ, ಕಲಂ 331(3), 33(4), 305 BNS ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
Leave a Reply