ಉಡುಪಿ: ಅರ್ಹ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಉಡುಪಿ, ಮೇ 30, 2025: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟೊಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲೆರೋಸಿಸ್, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಅಂಧತ್ವ/ ಡೆಫ್ ಬ್ಲೈಂಡ್) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ಮಾಹೆ 1,000 ರೂ. ಪ್ರೋತ್ಸಾಹಧನ ನೀಡಲು ಆದೇಶಿಲಾಗಿದ್ದು, ಸದರಿ ಯೋಜನೆಯ ಫಲಾನುಭವಿಗಳನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು.

ಮೇಲ್ಕಂಡ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳು ಕಡ್ಡಾಯವಾಗಿ ವಿಶಿಷ್ಟ ಗುರುತಿನ ಚೀಟಿ ಹೊಂದಿರಬೇಕು ಹಾಗೂ ಅಂಗವಿಕಲತೆಯ ಪ್ರಮಾಣ ಶೇ. 75 ಮತ್ತು ಅದಕ್ಕಿಂತ ಹೆಚ್ಚಿರಬೇಕು. ವಯಸ್ಸಿನ ಹಾಗೂ ಆದಾಯ ಮಿತಿ ಇರುವುದಿಲ್ಲ. ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಆರೈಕೆದಾರರ ಬ್ಯಾಂಕ್ ಖಾತೆಗೆ ಪ್ರೋತ್ಸಾಹಧನವನ್ನು ಜಮೆ ಮಾಡಲಾಗುವುದು. ಅರ್ಹ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810 ಹಾಗೂ ಜಿಲ್ಲಾ ಕಛೇರಿಯ ಎಂ.ಆರ್. ಡಬ್ಲ್ಯೂ ಅಥವಾ ವಿ.ಆರ್. ಡಬ್ಲ್ಯೂ/ ಯು.ಆರ್. ಡಬ್ಲ್ಯೂ ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Comments

Leave a Reply

Your email address will not be published. Required fields are marked *