ಕಾರವಾರ, ಜೂನ್ 01, 2025: ಕಾರವಾರ ತಾಲೂಕಿನ ಸಂಚಾರ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ಇಂದು ಮುಂಬರುವ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ತಾಲೂಕಿನ ಪ್ರಮುಖ ಧಾರ್ಮಿಕ ಮುಖಂಡರನ್ನು ಕರೆಯಿಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಸಲಹೆ-ಸೂಚನೆಗಳನ್ನು ನೀಡಲಾಯಿತು.



ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶ್ರೀ ಕೃಷ್ಣಮೂರ್ತಿ ಜಿ. ಹಾಗೂ ಕಾರವಾರ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
Leave a Reply