ತೋಟಗಾರಿಕೆ ಇಲಾಖೆಯ ಯೋಜನೆಯಡಿ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ, ಜೂನ್ 02 : ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕುಂದಾಪುರ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಲಭ್ಯವಿದ್ದು, ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ರೈತರಿಗೆ ಕಾಳುಮೆಣಸು, ಅನಾನಸ್ಸು, ಅಂಗಾಂಶಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂಟಾನ್, ಮ್ಯಾಂಗೋಸ್ಟೀನ್ ಮತ್ತು ಡ್ರಾ್ಯಗನ್ ಫ್ರೂಟ್ ತೋಟಗಳ ಸ್ಥಾಪನೆಗೆ ಶೇ. 40 ರ ಸಹಾಯಧನ, ನೀರು ಸಂಗ್ರಹಣ ಘಟಕ ನಿರ್ಮಾಣಕ್ಕೆ, ಗರಿಷ್ಠ 0.75 ಲಕ್ಷ ರೂ.ಗಳ ಸಹಾಯಧನ, ವಿವಿಧ ತೋಟಗಾರಿಕೆ ಬೆಳೆಗಳಿಗೆ ಹಾನಿಯುಂಟು ಮಾಡುವ ರೋಗ/ಕೀಟಗಳ ನಿಯಂತ್ರಣಕ್ಕಾಗಿ ಸಸ್ಯ ಸಂರಕ್ಷಣಾ ಔಷಧಿಗಳಿಗೆ ಪ್ರತಿ ಹೆಕ್ಟೇರಿಗೆ 1,500 ಹಾಗೂ ಅಡಿಕೆ ತೋಟ ಹೊಂದಿರುವ ರೈತರಿಗೆ ಅಡಿಕೆ ಸಂರಕ್ಷಣೆ/ ಒಣಗಿಸಲು ಸೋಲಾರ್ ಶೀಟ್ ಖರೀದಿಗೆ ಶೇ.40 ರ ಸಹಾಯಧನ ಲಭ್ಯವಿದೆ.

ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ.40 ರ ದರದಲ್ಲಿ (ಗರಿಷ್ಠ 12.25 ಲಕ್ಷಗಳವರೆಗೆ), ಪ್ಯಾಕ್ ಹೌಸ್ಗಳ ನಿರ್ಮಾಣಕ್ಕೆ ಗರಿಷ್ಠ 2.40 ಲಕ್ಷಗಳವರೆಗೆ ಶೇ.50 ರ ವರೆಗೆ ಹಾಗೂ ರೈತರ ಯಾಂತ್ರೀಕರಣ ಅವಶ್ಯಕತೆಗೆ 20 hಠಿ ಗಿಂತ ಕಡಿಮೆ ಸಾಮರ್ಥ್ಯದ ಟ್ರ್ಯಾಕ್ಟರ್ ಖರೀದಿಗೆ ರೂ. 1.6 ರಿಂದ 2.45 ಲಕ್ಷ ರೂ. ವರೆಗೆ ಸಹಾಯಧನ ಲಭ್ಯವಿದೆ.

ಕೃಷಿ ಯಾಂತ್ರೀಕರಣ ಉಪಅಭಿಯಾನ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಡಿ ತೋಟಗಾರಿಕೆ ಯಾಂತ್ರಿಕರಣ ಕಾರ್ಯಕ್ರಮದಡಿ ಅನುಮೋದಿತ ವಿವಿಧ ಯಂತ್ರೋಪಕರಣಗಳಿಗೆ ಶೇ. 40/50 ರ ಸಹಾಯಧನ ಹಾಗೂ ದೊಡ್ಡ ಗಾತ್ರದ ನೀರು ಸಂಗ್ರಹಣಾ ಘಟಕ, ಪ್ಯಾಕಿಂಗ್ ಮತ್ತು ಸಂಗ್ರಹಣಾ ಘಟಕಗಳ ನಿರ್ಮಾಣಕ್ಕೆ ಹಾಗೂ ನೀರಿನಲ್ಲಿ ಕರಗುವ ರಸಗೊಬ್ಬರ ಮತ್ತು ಲಘುಪೋಷಕಾಂಶಗಳ ಖರೀದಿಗೆ ಸಹಾಯಧನ ಪಡೆಯಲು ಅವಕಾಶವಿದೆ.

ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ /ತುಂತುರು ನೀರಾವರಿ ಅಳವಡಿಕೆಗೆ ರೈತರಿಗೆ ಶೇ.90 ರಷ್ಟು ಸಹಾಯಧನ, ಭವಿಷ್ಯದ ಬೆಳೆಯಾದ ತಾಳೆ ಬೆಳೆಗಾಗಿ ತಾಳೆಬೆಳೆ ಯೋಜನೆಯಡಿ ಹೊಸದಾಗಿ ತಾಳೆಬೆಳೆ ಪ್ರದೇಶ ವಿಸ್ತರಣೆಗೆ ಹಾಗೂ ತಾಳೆ ಬೆಳೆ ಬೆಳೆಯುವ ರೈತರಿಗೆ ಬೋರ್ವೆಲ್, ಬಾವಿ ನಿರ್ಮಿಸಿಕೊಳ್ಳಲು, ವಿದ್ಯುತ್/ಡೀಸೆಲ್ ಪಂಪ್ ಮತ್ತು ಯಂತ್ರೋಪಕರಣ ಖರೀದಿಗೆ ಸಹಾಯಧನ ಮತ್ತು ಜೇನು ಸಾಕಾಣಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2 ದಿನಗಳ ತರಬೇತಿಯೊಂದಿಗೆ ಜೇನು ಕುಟುಂಬ ಸಹಿತ ಗರಿಷ್ಠ 4 ಪೆಟ್ಟಿಗೆ ಖರೀದಿಗೆ ಶೇ.75 ರಿಂದ 90 ರ ಸಹಾಯಧನ ಪಡೆಯಬಹುದಾಗಿದೆ.

ಮಹಾತ್ಮಾಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಹಾಗೂ ಪೌಷ್ಠಿಕ ತೋಟಗಳ ನಿರ್ಮಾಣಕ್ಕೆ ಅವಕಾಶವಿದ್ದು, ಈ ಯೋಜನೆಯ ಪ್ರಯೋಜನೆ ಪಡೆಯಲಿಚ್ಚಿಸುವವರು ಕೂಡಲೆ ಅರ್ಜಿ ಸಲ್ಲಿಸಿ, ಯೋಜನೆಯ ಫಲಾನುಭವಿಯಾಗಬಹುದಾಗಿದೆ.

ಈ ಎಲ್ಲಾ ಯೋಜನೆಗಳ ಪ್ರಯೋಜನೆ ಪಡೆಯಲು ಆಸಕ್ತ ರೈತರು ಪ್ರಥಮ ಹಂತದಲ್ಲಿ ನೋಂದಣಿ ಅರ್ಜಿಯೊಂದಿಗೆ ಬೆಳೆ ನಮೂದಿಸಿರುವ ಇತ್ತೀಚಿನ ಪಹಣಿ ಪತ್ರ ಮತ್ತು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಇಲಾಖಾ ಮಾರ್ಗಸೂಚಿಯನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗಧಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು ಎಂದು ಕುಂದಾಪುರ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ರಕಟಣೆ ತಿಳಿಸಿದೆ.

Comments

Leave a Reply

Your email address will not be published. Required fields are marked *