ಉಡುಪಿಯಲ್ಲಿ ದುರಂತ: ಒಂದು ವರ್ಷದ ಮಗುವಿನ ದಾರುಣ ಸಾವು

ಉಡುಪಿ, ಜೂನ್ 05, 2025: ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ವಾಸಿಸುತ್ತಿದ್ದ ಪಿರ್ಯಾದಿದಾರ ಅಯ್ಯಪ್ಪ (27), ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಗಂಗಾಧರ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ದಿನಾಂಕ 04/06/2025 ರಂದು ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕೆ ತೆರಳಿದ ಅಯ್ಯಪ್ಪ, ತಮ್ಮ ಒಂದು ವರ್ಷದ ಮಗುವನ್ನು ಜೋಲಿಯಲ್ಲಿ ಮಲಗಿಸಿ, ಹೆಂಡತಿಯೊಂದಿಗೆ ಬೆಳಿಗ್ಗೆ 9:30 ಗಂಟೆಗೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದರು.

ಮಧ್ಯಾಹ್ನ 11:30 ಗಂಟೆಗೆ ಮನೆಗೆ ವಾಪಸ್ ಬಂದಾಗ, ಮಗುವಿನ ಕುತ್ತಿಗೆಗೆ ಜೋಲಿಗೆ ಕಟ್ಟಿದ್ದ ಸೀರೆ ಸುತ್ತಿಕೊಂಡು ನೇತಾಡುವ ಸ್ಥಿತಿಯಲ್ಲಿ ಕಂಡುಬಂದಿದೆ. ತಕ್ಷಣ ಮಗುವನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದೊಯ್ದಾಗ, ವೈದ್ಯಾಧಿಕಾರಿಗಳು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮಗು ಜೋಲಿಯಿಂದ ಇಳಿಯಲು ಯತ್ನಿಸುವಾಗ ಅಥವಾ ನಿದ್ರೆಯ ಸ್ಥಿತಿಯಲ್ಲಿ ಜೋಲಿಯಿಂದ ಬಿದ್ದು, ಸೀರೆ ಕುತ್ತಿಗೆಗೆ ಸುತ್ತಿಕೊಂಡು ಉಸಿರುಕಟ್ಟಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 53/2025, ಕಲಂ 194 BNSS ರಂತೆ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

Comments

Leave a Reply

Your email address will not be published. Required fields are marked *