ಹೆಬ್ರಿ, ಜೂನ್ 07, 2025: ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ)ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿನ್ ದಾಖಲಿಸಿದ ದೂರಿನ ಆಧಾರದ ಮೇಲೆ, ಸಂಘದ ಸಿಬ್ಬಂದಿಯಾದ ಶಂಕರ್ ವಿರುದ್ಧ ಆರ್ಥಿಕ ದುರುಪಯೋಗ ಮತ್ತು ವಿಶ್ವಾಸ ದ್ರೋಹದ ಆರೋಪದಡಿ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, ಶಂಕರ್ ರವರು ಸಂಘದ 88,150 ರೂಪಾಯಿಗಳನ್ನು ಸುಂದರ ಕುಲಾಲ ಎಂಬವರಿಗೆ ಕೂಲಿ ಬಾಬ್ತು ನೀಡಲಾಗಿದೆ ಎಂದು ಸುಳ್ಳು ಮಾಹಿತಿ ನೀಡಿ, ಆ ಮೊತ್ತವನ್ನು ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕೃತ್ಯದಿಂದ ಸಂಘಕ್ಕೆ ಮೋಸ ಮತ್ತು ವಿಶ್ವಾಸಭಂಗವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 409 ಮತ್ತು 420ರ ಅಡಿಯಲ್ಲಿ ಅಪರಾಧ ಕ್ರಮಾಂಕ 37/2025 ರಂತೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
Leave a Reply