ಕಾಪು, ಜೂನ್ 8, 2025: ಕಾಪು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ತೇಜಸ್ವಿ ಟಿ. (ಕಾನೂನು ಮತ್ತು ಸುವ್ಯವಸ್ಥೆ) ದಿನಾಂಕ 06/06/2025ರಂದು ಹಗಲು ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಕಾಪು ತಾಲೂಕಿನ ಮೂಳೂರು ಗ್ರಾಮದ ನಾರಾಯಣಗುರು ಸಭಾಭವನದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ಯುವಕ ಗಾಂಜಾ ಎಂಬ ಮಾದಕ ದ್ರವ್ಯವನ್ನು ಸೇವಿಸಿ ಅಮಲಿನಲ್ಲಿರುವ ಬಗ್ಗೆ ಮಾಹಿತಿ ಬಂದಿತು.
ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಒಬ್ಬ ಯುವಕ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅದರ ಅಮಲಿನಲ್ಲಿರುವುದು ಕಂಡುಬಂದಿತು. ವಿಚಾರಣೆಯಲ್ಲಿ ಆತ ತನ್ನ ಹೆಸರು ಅನಿಲ್ (23) ಎಂದು ತಿಳಿಸಿದನು. ಆತನನ್ನು ಠಾಣೆ ಸಿಬ್ಬಂದಿಯೊಂದಿಗೆ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗಕ್ಕೆ ವೈದ್ಯಕೀಯ ಪರೀಕ್ಷೆಗೆ ಕರೆತರಲಾಯಿತು.
ದಿನಾಂಕ 07/06/2025ರಂದು ಕೆ.ಎಂ.ಸಿ. ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ತಜ್ಞರ ವರದಿಯ ಪ್ರಕಾರ, ಆರೋಪಿತ ಅನಿಲ್ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 83/2025, ಕಲಂ 27(b) NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Leave a Reply