ಉಡುಪಿ ಜಿಲ್ಲೆ: ಪೆಟ್ರೋಲ್ ಬಂಕ್‌ಗಳಿಗೆ ಜಿಲ್ಲಾಧಿಕಾರಿಗಳಿಂದ ಕಟ್ಟುನಿಟ್ಟಿನ ಸೂಚನೆ

ಉಡುಪಿ, ಜೂನ್ 11, 2025: ಉಡುಪಿ ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್‌ ಮಾಲೀಕರಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಮಹತ್ವದ ಸೂಚನೆಯೊಂದನ್ನು ಹೊರಡಿಸಲಾಗಿದೆ. ಪೆಟ್ರೋಲ್ ಬಂಕ್‌ಗಳಲ್ಲಿನ ಶೌಚಾಲಯಗಳ ಸ್ವಚ್ಛತೆಯ ಕೊರತೆ ಮತ್ತು ದುರಸ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಈ ಕೆಳಗಿನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಾದ ಜಾಕಿ ಡಾ. ಕೆ ವಿದ್ಯಾಕುಮಾರಿ ಅವರು ಆದೇಶಿಸಿದ್ದಾರೆ.

  1. ಶೌಚಾಲಯಗಳ ಸ್ವಚ್ಛತೆ: ಎಲ್ಲಾ ಪೆಟ್ರೋಲ್ ಬಂಕ್‌ಗಳ ಶೌಚಾಲಯಗಳು ಕಡ್ಡಾಯವಾಗಿ ಸ್ವಚ್ಛವಾಗಿರಬೇಕು. ಸ್ಯಾನಿಟೈಸರ್, ಟಾಯ್ಲೆಟ್ ಪೇಪರ್ ಮತ್ತು ಇತರ ಅಗತ್ಯ ವಸ್ತುಗಳು ಯಾವಾಗಲೂ ಲಭ್ಯವಿರುವಂತೆ ನೋಡಿಕೊಳ್ಳಬೇಕು.
  2. ನೀರಿನ ಸಂಪರ್ಕ: ಶೌಚಾಲಯಗಳಲ್ಲಿ ಸುಸಜ್ಜಿತ ನೀರಿನ ಸಂಪರ್ಕವಿರಬೇಕು.
  3. ಮುಕ್ತ ಪ್ರವೇಶ: ಪೆಟ್ರೋಲ್ ಬಂಕ್‌ಗೆ ಬರುವ ಗ್ರಾಹಕರಿಗೆ ಶೌಚಾಲಯಗಳಿಗೆ ಮುಕ್ತ ಪ್ರವೇಶವನ್ನು ಕಲ್ಪಿಸಬೇಕು.
  4. ಪ್ರತ್ಯೇಕ ಶೌಚಾಲಯಗಳು: ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾದ ಶೌಚಾಲಯಗಳನ್ನು ಒದಗಿಸಬೇಕು.

ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಸಾರ್ವಜನಿಕ ಜಾಗೃತಿಗಾಗಿ ಸರ್ಕಾರಕ್ಕೆ ಯಾವುದೇ ವೆಚ್ಚವಿಲ್ಲದಂತೆ ದಿನಪತ್ರಿಕೆಗಳು ಮತ್ತು ಟಿವಿ ಮಾಧ್ಯಮಗಳಲ್ಲಿ ಪ್ರಕಟಣೆಯನ್ನು ಪ್ರಸಾರ ಮಾಡಲು ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಪ್ರಚಾರ ಇಲಾಖೆ, ಉಡುಪಿಗೆ ಸೂಚಿಸಲಾಗಿದೆ.

Comments

Leave a Reply

Your email address will not be published. Required fields are marked *