ಮೃತ ವ್ಯಕ್ತಿಯ ವಾರಸುದಾರರಿಗೆ ಸೂಚನೆ

ಉಡುಪಿ, ಜುಲೈ 8, 2025: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಸಿಟಿ ಬಸ್ ನಿಲ್ದಾಣದ ಉಡುಪಿ-ಮಣಿಪಾಲ ಕಡೆ ಹೋಗುವ ಬಸ್ ನಿಲ್ದಾಣದಲ್ಲಿ ಅಸ್ವಸ್ಥರಾಗಿದ್ದ ಶಿರ್ವ ಮಂಚ್ಕಲ್ ನಿವಾಸಿ ರಮೇಶ್ ಶೆಟ್ಟಿ (57) ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಜುಲೈ 2 ರಂದು ಮೃತಪಟ್ಟಿರುತ್ತಾರೆ.

ಮೃತಶರೀರವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಿಸಿ ಇಡಲಾಗಿದ್ದು, ಸದ್ರಿ ಮೃತವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.ನಂ: 9480805445, ಪಿ.ಐ ಮೊ.ನಂ: 9480805408, ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಹಾಗೂ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

Comments

Leave a Reply

Your email address will not be published. Required fields are marked *