ಉಡುಪಿ, ಜೂಲೈ 9, 2025 : ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರ ಅನೂಕೂಲಕ್ಕಾಗಿ ಆಗಸ್ಟ್ 7 ರವರೆಗೂ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ.
ಕರ್ನಾಟಕ ಒನ್, ಗ್ರಾಮ ಒನ್ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ನೋಂದಣಿ ಹಾಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು, 2024-2025 ನೇ ಸಾಲಿನ ಪದವಿ ಸ್ನಾತಕೋತ್ತರ ಪದವಿ, ಡಿಪ್ಲೋಮ, ಪಡೆದು ನಿರುದ್ಯೋಗಿಯಾಗಿರುವವರು ಅರ್ಹರು.ಯುವನಿಧಿ ಯೋಜನೆಯ ಫಲಾನುಭವಿಗಳು ತ್ರೈಮಾಸಿಕ ಆನ್ಲೈನ್ ಲಾಗಿನ್ ಆಗಿ ಸ್ವ ಘೋಷಣೆ ನೀಡಬೇಕು, ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಲು ಪ್ರಕಟಣೆ ತಿಳಿಸಿದೆ
Leave a Reply