ಉಡುಪಿ ಜುಲೈ. 10, 2025: ಕಲ್ಯಾಣಪುರ ಮೀನು ಮಾರುಕಟ್ಟೆ ಬಳಿ ಕಳೆದ ಮೂರು ನಾಲ್ಕು ದಿನಗಳಿಂದ ಮಳೆಗಾಳಿಗೆ ಅಸಹಾಯಕರಾಗಿದ್ದ ವೃದ್ಧರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ ದಾಖಲಿಸಿದ್ದಾರೆ. ವೃದ್ಧರು ತನ್ನ ಹೆಸರು ಲಕ್ಷ್ಮಣ ಪೂಜಾರಿ, ಮಕ್ಕಳು ಬರುತ್ತಾರೆ ಎಂದು ಕಾಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.
ಮೇಲ್ನೋಟಕ್ಕೆ ಮರೆವು ಕಾಯಿಲೆಯಂತೆ ಕಾಣುತ್ತಾರೆ. ಈ ಬಗ್ಗೆ ಮೀನು ಮಾರಾಟ ಮಾಡುವ ಮಹಿಳೆಯೋರ್ವರಿಂದ ಮಾಹಿತಿ ಪಡೆದ ವಿಶು ಶೆಟ್ಟಿಯವರು, ರಕ್ಷಿಸಿ ಆಶ್ರಮಕ್ಕೆ ದಾಖಲಿಸಿದ್ದಾರೆ.
Leave a Reply