ಗಂಗೊಳ್ಳಿ: ‘ಮನೆ ಮನೆಗೆ ಪೊಲೀಸ್-2025’ ಕಾರ್ಯಕ್ರಮಕ್ಕೆ ಚಾಲನೆ; ಸೈಬರ್ ಅಪರಾಧ, ಸಹಾಯವಾಣಿ ಬಗ್ಗೆ ಅರಿವು

ಗಂಗೊಳ್ಳಿ, ಜುಲೈ 13, 2025: ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಪೊಲೀಸ್-2025’ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಕಾರ್ಯಕ್ರಮ ಆರಂಭದ ಬಳಿಕ ಸೈಬರ್ ಅಪರಾಧದ ಸ್ವರೂಪ, NCRP ಪೋರ್ಟಲ್, 1930 ಮತ್ತು 112 ಸಹಾಯವಾಣಿಗಳು, NDPS ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಈ ವಿನೂತನ ಯೋಜನೆಯಡಿ, ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ದೂರುಗಳನ್ನು ಸ್ವೀಕರಿಸಲು ಮನೆ ಬಾಗಿಲಿಗೆ ತೆರಳುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಶುಕ್ರವಾರ ಆರಂಭಗೊಂಡಿದ್ದು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪೊಲೀಸ್ ಸೇವೆ ಎಲ್ಲ ಮನೆಗಳಿಗೂ ತಲುಪಬೇಕು. ಈ ಕಾರ್ಯಕ್ರಮ ಯಶಸ್ವಿಯಾಗಲಿ,” ಎಂದು ಶುಭ ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಧಾಕರ್ ಎಸ್. ನಾಯ್ಕ, ಪರಮೇಶ್ವರ ಹೆಗಡೆ, ಡಿವೈಎಸ್‌ಪಿ ಪ್ರಭು ಡಿ. ಟಿ., ಪಿಎಸ್ಐಗಳಾದ ಭರತೇಶ್, ನಾರಾಯಣ, ಪ್ರಕಾಶ್ ಸಾಲಿಯಾನ್, ಹುಸೇನ್ ಸಾಬ್ ಮತ್ತು ಇತರ ಸಿಬ್ಬಂದಿ ಭಾಗವಹಿಸಿದ್ದರು. ಉಡುಪಿ ನಗರ, ಮಣಿಪಾಲ, ಬ್ರಹ್ಮಾವರ ಮತ್ತು ಕೋಟ ಠಾಣೆಗಳಲ್ಲಿ ಈ ಕಾರ್ಯಕ್ರಮ ಆರಂಭಗೊಂಡಿದ್ದು, ‘ಮನೆಮನೆ ಪೊಲೀಸ್’ ಅಭಿಯಾನ ಜಾರಿಗೆ ತಂದಿದೆ.

ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮಗಳಿಗೆ “ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮದ ಪ್ರಯುಕ್ತ ಭೇಟಿ ನೀಡಿ ಸೈಬರ್‌ ಅಪರಾಧ ‌,112, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು.
ಕುಂದಾಪುರ ಪೊಲೀಸ್ ಠಾಣಾ ಸರಹದಿನ ಕಾರ್ವಿ ಕೇರಿ ಶ್ರೀ ಮಹಾಕಾಳಿ ದೇವಸ್ಥಾನ ಬಳಿ “ಮನೆ ಮನೆಗೆ ಪೊಲೀಸ್ ” 2025 ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದಭ೯ದಲ್ಲಿ ಪೊಲೀಸ್ ಉಪಾಧಿಕ್ಷಕರು ಕುಂದಾಪುರ ಉಪ ವಿಭಾಗ, ಪೊಲೀಸ್ ಉಪ ನೀರಿಕ್ಷಕರು (ಕಾ &ಸು ),
ಪೊಲೀಸ್ ಉಪ ನೀರಿಕ್ಷಕರು (ತನಿಖೆ ) ಹಾಗೂ ಕುಂದಾಪುರ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿಗಳು ಹಾಗೂ ಠಾಣಾ ವ್ಯಾಪ್ತಿಯ ಸಾರ್ವಜನಿಕರು ಉಪಸ್ಥಿತರಿದ್ದರು

ಈ ಅಭಿಯಾನದಡಿ ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, POCSO ಕಾಯ್ದೆ, ಮನೆಯಿಂದ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಮನೆಯಲ್ಲಿರುವವರ ಹೆಸರು, ಮೊಬೈಲ್ ಸಂಖ್ಯೆಯನ್ನು ದಾಖಲಿಸಲಾಗಿದ್ದು, ಸಾರ್ವಜನಿಕರ ದೂರು ಮತ್ತು ಕೋರಿಕೆಗಳನ್ನು ಸ್ವೀಕರಿಸಲಾಗಿದೆ. ಈಗಾಗಲೇ ಉಡುಪಿ ನಗರ ಠಾಣೆಯ 28, ಮಣಿಪಾಲ ಠಾಣೆಯ 45, ಬ್ರಹ್ಮಾವರ ಠಾಣೆಯ 30 ಮತ್ತು ಕೋಟ ಠಾಣೆಯ 25 ಮನೆಗಳಿಗೆ ಭೇಟಿ ನೀಡಲಾಗಿದೆ.

ಅಮಾಸೆಬೈಲು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ “ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮದ ಪ್ರಯುಕ್ತ ಮನೆಗಳಿಗೆ ಭೇಟಿ ನೀಡಿ ಸೈಬರ್‌ ಅಪರಾಧ ‌,112, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಮನೆಯವರಿಗೆ ಅರಿವು ಮೂಡಿಸಲಾಯಿತು.

ಈ ಅರಿವು ಕಾರ್ಯಕ್ರಮವನ್ನು ಜಾರಿಗೆ ತರುವುದಕ್ಕಾಗಿ ಠಾಣೆಯಿಂದ ರಚಿಸಲಾದ ತಂಡದಲ್ಲಿ ಪಿಐ/ಪಿಎಸ್ಐ, ಎಎಸ್ಐ, ಮಹಿಳಾ ಮತ್ತು ಪುರುಷ ಸಿಬ್ಬಂದಿಗಳು ಒಳಗೊಂಡಿದ್ದಾರೆ.

Comments

Leave a Reply

Your email address will not be published. Required fields are marked *