ಮಾದಕದ್ರವ್ಯ ಸಾಗಾಟ ಆರೋಪ; ಲಿಂಗರಾಜ ಕಣ್ಣಿ ಕಾಂಗ್ರೆಸ್‌ನಿಂದ ಉಚ್ಚಾಟನೆ

ಲಬುರಗಿ, ಜುಲೈ 14, 2025: ಮಾದಕದ್ರವ್ಯ ಸಾಗಾಟ ಆರೋಪದಲ್ಲಿ ಮಹಾರಾಷ್ಟ್ರದ ಕಲ್ಯಾಣ ಪೊಲೀಸರಿಂದ ಬಂಧನಗೊಂಡ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. 2023ರಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಸದಸ್ಯರಾಗಿದ್ದ ಲಿಂಗರಾಜ್ ಕಣ್ಣಿ ಕಾಂಗ್ರೆಸ್‌ಗೆ ಸೇರಿದ್ದರು.

ಈ ಬಗ್ಗೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ಎಂಎಲ್ಸಿ ಜಗದೇವ್ ಗುತ್ತೇದಾರ್ ಅವರು ಆದೇಶ ಹೊರಡಿಸಿದ್ದು, ಲಿಂಗರಾಜ್ ಕಣ್ಣಿ ಮಾದಕದ್ರವ್ಯ ಸಾಗಾಟದಲ್ಲಿ ಭಾಗವಹಿಸಿದ ಆರೋಪದ ಕಾರಣದಿಂದ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಲಿಂಗರಾಜ ಕಣ್ಣಿ ಸಿಕ್ಕಿ ಬಿದ್ದಿದ್ದರು. ಅವರ ಬಳಿ ನಿಷೇಧಿತ 120 ಕೊಡೆನೈನ್ ಸಿರಪ್ ಪತ್ತೆಯಾಗಿದ್ದು, ಈ ಆರೋಪದಡಿ ಬಂಧನಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *