ನಾಪತ್ತೆಯಾದ ಮೀನುಗಾರ ಪತ್ತೆಗೆ ತುರ್ತು ಕ್ರಮದ ಜೊತೆಗೆ ತುರ್ತು ಪರಿಹಾರದ ವ್ಯವಸ್ಥೆ-ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು,ಜುಲೈ 15, 2025: ಗಂಗೊಳ್ಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಒರ್ವ ಮೀನುಗಾರ ಅಪಾಯದಿಂದ ಪಾರಾಗಿದ್ದು ಮೂವರು ಮೀನುಗಾರರು ನಾಪತ್ತೆಯಾಗಿರುವ ಮಾಹಿತಿ ತಿಳಿದು ಬಂದಿದೆ. ಕಾಣೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ ತುರ್ತು ಕ್ರಮಕ್ಕೆ ಈಗಾಗಲೇ ನಿರ್ದೇಶಿಸಲಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ತಿಳಿಸಿದ್ದಾರೆ.

ಮೀನುಗಾರ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಡಿ ಅಗತ್ಯ ಪರಿಹಾರ ಒದಗಿಸಲು ಶಾಸಕರಾದ ಯಶ್ ಪಾಲ್ ಸುವರ್ಣ ಸಹಿತ ಜಿಲ್ಲೆಯ ಶಾಸಕರ ಮೂಲಕ ಮೀನುಗಾರಿಕೆ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ಇಲಾಖೆಯಿಂದ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ತುರ್ತಾಗಿ ಒದಗಿಸುವ ವ್ಯವಸ್ಥೆ ಆಗಿದೆ.

ಮಳೆಗಾಲದಲ್ಲಿ ಸಮುದ್ರದ ಅಲೆಗಳ ಅಬ್ಬರವೂ ಜೋರಾಗಿರುತ್ತದೆ. ಹೀಗಾಗಿ ನಾಡದೋಣಿ, ಟ್ರಾಲ್ ದೋಣಿ ಮೀನುಗಾರರು ವಿಶೇಷ ಎಚ್ಚರಿಕೆ ವಹಿಸಬೇಕು ಮತ್ತು ಲೈಫ್ ಜಾಕೇಟ್ ಬಳಸುವುದನ್ನು ಆದಷ್ಟು ಕಡ್ಡಾಯ ಮಾಡಿಕೊಳ್ಳುವುದು ಉತ್ತಮ. ಲೈಫ್ ಜಾಕೇಟ್ ಬಳಸುವುದರಿಂದ ಜೀವ ಹಾನಿ ತಪ್ಪಿಸಲು ಸಾಧ್ಯವಿದೆ ಎಂದು ಶಾಸಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ದೋಣಿಯು ಇಂದು ಸಮುದ್ರದ ಅಲೆಗೆ ಸಿಲುಕಿ ಮಗುಚಿ ಬಿದ್ದಿರುವ ಸುದ್ದಿ ಗಮನಕ್ಕೆ ಬಂದಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲು ಸೂಚೊಸಲಾಯಿತು.

ಅವಘಡದಲ್ಲಿ ಒಬ್ಬ ಮೀನುಗಾರ ಸುರಕ್ಷಿತವಾಗಿ ದಡ ಸೇರಿದ್ದು, ಉಳಿದ ಮೂವರ ರಕ್ಷಣೆಗೆ ಮೀನುಗಾರರು ಸೇರಿದಂತೆ ಜಿಲ್ಲಾಡಳಿತ ಧಾವಿಸಿದ್ದು, ಎಲ್ಲರೂ ಸುರಕ್ಷಿತವಾಗಿ ಮರಳಿ ಬರಲೆಂದು ಪ್ರಾರ್ಥಿಸೋಣ. – ಕಿರಣ್ ಕುಮಾರ್ ಕೊಡ್ಗಿ

ಗಂಗೊಳ್ಳಿ ಬಂದರಿನಿಂದ ನಾಡ ದೋಣಿ ಮೀನುಗಾರಿಕೆಗೆ ತೆರಳಿದ ದೋಣಿಯು ಇಂದು ಸಮುದ್ರದ ಅಲೆಗೆ ಸಿಲುಕಿ ಮಗುಚಿ ಬಿದ್ದಿರುವ ದುರದೃಷ್ಟಕರ ಘಟನೆ ನಡೆದಿದೆ.

ಘಟನೆಯ ಬಗ್ಗೆ ಈಗಾಲೇ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಯವರೊಂದಿಗೆ ಸಮಾಲೋಚನೆ ನಡೆಸಿ ಮೀನುಗಾರಿಕಾ ಸಚಿವರಾದ ಮಂಕಲ್ ಎಸ್ ವೈದ್ಯ ರವರಿಗೂ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಕಣ್ಮರೆಯಾಗಿರುವ ಮೀನುಗಾರರ ರಕ್ಷಣೆಗೆ ಅಗತ್ಯ ಕ್ರಮ ವಹಿಸಲು, ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ.

ಅವಘಡದಲ್ಲಿ ಒಬ್ಬ ಮೀನುಗಾರ ಸುರಕ್ಷಿತವಾಗಿ ದಡ ಸೇರಿದ್ದು, ಉಳಿದ ಮೂವರ ರಕ್ಷಣೆಗೆ ಮೀನುಗಾರರು ಸೇರಿದಂತೆ ಜಿಲ್ಲಾಡಳಿತ ಧಾವಿಸಿದ್ದು, ಎಲ್ಲರ ಸುರಕ್ಷತೆಗೆ ಪ್ರಾರ್ಥಿಸೋಣ. – ಯಶ್ ಪಾಲ್ ಸುವರ್ಣ

Comments

Leave a Reply

Your email address will not be published. Required fields are marked *