ಕುಂದಾಪುರ, ಜುಲೈ 15, 2025: ಕುಂದಾಪುರ-ಕೋಟೇಶ್ವರ-ಬಿದ್ಕಲ್ಕಟ್ಟೆ-ಹಾಲಾಡಿ-ಅಮಾಸೆಬೈಲು ಮಾರ್ಗದಲ್ಲಿ ತೊಂಬಟ್ಟಿಗೆ ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ಬಸ್ ಸೇವೆಯನ್ನು ಇಂದಿನಿಂದ ಪುನರಾರಂಭಿಸಲಾಗಿದೆ.
ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಇತ್ತೀಚೆಗೆ ಬಿಡುಗಡೆ ಮಾಡಿದ ಸುದ್ದಿಯಲ್ಲಿ, ಕುಂದಾಪುರ-ತೊಂಬಟ್ಟಗೆ ಮಾರ್ಗದಲ್ಲಿ ಸಾರಿಗೆ ಸೇವೆಯ ಕೊರತೆಯ ಬಗ್ಗೆ ವಿಧಾನಸಭೆಯಲ್ಲಿ ಸಾರಿಗೆ ಸಚಿವರೊಂದಿಗೆ ಚರ್ಚಿಸಿ, ಈ ಸೇವೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿದಿನ ಬೆಳಗ್ಗೆ 7:30 ಮತ್ತು ಸಾಯಂಕಾಲ 4:45ರಲ್ಲಿ ಸಾರಿಗೆ ನಿಗಮದ ಬಸ್ ಓಡಿಸುವ ಆದೇಶ ಪತ್ರವನ್ನು ಜಾರಿಗೆ ತರಲಾಗಿದೆ. ಈ ಸೇವೆಯಿಂದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ತಮ್ಮ ಪ್ರಯಾಣ ಸುಗಮವಾಗಲಿದೆ ಎಂದು ತಿಳಿಸಿದ್ದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಕುಂದಾಪುರ ಘಟಕವು ಜುಲೈ 12, 2025ರಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ ಶೆಟ್ಟರಿಗೆ ಪತ್ರ ಬರೆದು, ಜುಲೈ 15, 2025ರಿಂದ ಈ ಮಾರ್ಗದಲ್ಲಿ ಬಸ್ ಸೇವೆ ಆರಂಭವಾಗಲಿದೆ ಎಂದು ಘೋಷಿಸಿತ್ತು.
Leave a Reply