ಬೆಂಗಳೂರು: ಬೆಂಗಳೂರು-ಸೇಲಂ ಹೆದ್ದಾರಿಯಲ್ಲಿ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ 7 ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬೆಂಗಳೂರು-ಸೇಲಂ ಹೆದ್ದಾರಿಯಲ್ಲಿ ವಾಹನ ದಟ್ಟಣೆಯ ಹಿನ್ನೆಲೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ.
2 ಟ್ರಕ್, 2 ಕಾರು ಹಾಗೂ 1 ಬೈಕ್ ಒಂದಕ್ಕೊಂದು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ 2 ಟ್ರಕ್ಗಳ ನಡುವೆ 2 ಕಾರು ಹಾಗೂ ಬೈಕ್ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕಾಗಮಿಸಿದ ಕೃಷ್ಣಗಿರಿ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಅಪಘಾತವಾದ ವಾಹನಗಳನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Leave a Reply