ಕುಂದಾಪುರದಲ್ಲಿ ವಲಸೆ ಕಾರ್ಮಿಕರಿಗೆ ವಸತಿ ಸಮಸ್ಯೆ: ಸರ್ಕಾರದಿಂದ ಕ್ರಮಕೈಗೊಳ್ಳಲು ಭರವಸೆ

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

ಉಡುಪಿ ಜಿಲ್ಲೆಯ ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ 300ಕ್ಕೂ ಹೆಚ್ಚು ಕಾರ್ಮಿಕರು ಮೈದಾನ, ಫುಟ್ಪಾತ್‌ ಹಾಗೂ ಫ್ಲೈ ಓವರ್‌ ಅಡಿಯಲ್ಲಿ ಆಶ್ರಯ ಪಡೆಯುತ್ತಿದ್ದು, ಕೂಡಲೇ ವಲಸೆ ಕಾರ್ಮಿಕರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವಂತೆ ʼಎಕ್ಸ್‌ʼ ಬಳಕೆದಾರರೊಬ್ಬರು ಮನವಿ ಮಾಡಿರುತ್ತಾರೆ.

ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ‌ ಅದರಂತೆ, ಸದರಿ ವ್ಯಾಪ್ತಿಯ ಕಾರ್ಮಿಕರು ಸಾರ್ವಜನಿಕ ಪ್ರದೇಶದಲ್ಲಿ ವಾಸ್ತವ್ಯ ಹೂಡುವುದು, ಮಲಮೂತ್ರ ವಿಸರ್ಜಿಸುವುದು, ಮದ್ಯಪಾನ, ದೂಮಪಾನ, ಗುಟ್ಕಾ ಸೇವಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಈ ಬಗ್ಗೆ ಅರಿವು ಮೂಡಿಸಲಾಗಿರುತ್ತದೆ.

ಕಾರ್ಮಿಕರಿಗೆ ಸುವ್ಯವಸ್ಥಿತವಾದ ತಾತ್ಕಾಲಿಕ ಶೆಡ್‌ಗಳನ್ನು ಆಯ್ಕೆ ಮಾಡಿ ಸ್ವಚ್ಛತೆ ಕಾಪಾಡುವಂತೆ ಈ ಹಿಂದೆಯೇ ಅನುಮತಿ ನೀಡಲಾಗಿದ್ದು, ಪ್ರಸ್ತುತ ಸ್ಥಳದಲ್ಲಿ ಯಾವುದೇ ಕಾರ್ಮಿಕರು ವಾಸವಿರುವುದಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸೂಕ್ತ ಕ್ರಮಕೈಗೊಳ್ಳಲಾಗಿದ್ದು, ಕಾರ್ಮಿಕರಿಗೆ ವಸತಿ ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಿಸಲು ʼಟ್ರಾನ್ಸಿಟ್‌ ಅಕಾಮಡೇಶನ್‌ʼ ಕಟ್ಟಡಗಳನ್ನು ನಿರ್ಮಾಣ ಮಾಡುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತರರು ತಿಳಿಸಿದ್ದಾರೆ.

ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಿ.

Comments

Leave a Reply

Your email address will not be published. Required fields are marked *