ಕುಂದಾಪುರ ಬಸ್ ನಿಲ್ದಾಣ: ವ್ಯಕ್ತಿಯೊಬ್ಬರ ಮೃತ್ಯು, ಪ್ರಕರಣ ದಾಖಲು

ಕುಂದಾಪುರ, ಮೇ 23, 2025: ಕಳೆದ ಮೂರು ವರ್ಷಗಳಿಂದ ಕುಂದಾಪುರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು, ತಮ್ಮ ಪತ್ನಿಯೊಂದಿಗೆ ಕುಂದಾಪುರದ ಹೊಸ ಬಸ್ ನಿಲ್ದಾಣದಲ್ಲಿ ವಾಸವಾಗಿದ್ದರು. ಆದರೆ, ವಿಪರೀತ ಮದ್ಯಸೇವನೆಯಿಂದಾಗಿ ಕಳೆದ ಮೂರು ತಿಂಗಳಿಂದ ಆರೋಗ್ಯ ಸಮಸ್ಯೆಯಿಂದ ಕೆಲಸಕ್ಕೆ ಹೋಗದೇ, ಬಸ್ ನಿಲ್ದಾಣದಲ್ಲಿಯೇ ಮಲಗುತ್ತಿದ್ದರು.

ದಿನಾಂಕ 22/05/2025ರ ಸಂಜೆ 6:00 ಗಂಟೆಯಿಂದ 23/05/2025ರ ಬೆಳಿಗ್ಗೆ 6:15 ಗಂಟೆಯ ನಡುವೆ, ಈ ವ್ಯಕ್ತಿ ಕುಂದಾಪುರದ ಹೊಸ ಬಸ್ ನಿಲ್ದಾಣದಲ್ಲಿ ಮಲಗಿರುವಾಗ ಅನಾರೋಗ್ಯ ಅಥವಾ ಇನ್ನಿತರ ಕಾರಣದಿಂದ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 28/2025, ಕಲಂ 194 BNSS ರಂತೆ ಪ್ರಕರಣ ದಾಖಲಿಸಲಾಗಿದೆ.

Comments

Leave a Reply

Your email address will not be published. Required fields are marked *