ಕೊಳತ್ತಮಜಲು ಮಸೀದಿಯ ಆವರಣದಲ್ಲಿ ಅಬ್ದುಲ್ ರಹ್ಮಾನ್‌ರ ಅಂತ್ಯಕ್ರಿಯೆ

ಮಂಗಳೂರು, 28 ಮೇ,2025: ಮಂಗಳವಾರ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ಅವರ ಅಂತಿಮ ಸಂಸ್ಕಾರವು ಬುಧವಾರ ಕುರಿಯಾಳ ಗ್ರಾಮದ ಇರಾಕೋಡಿಯ ಮಸೀದಿ ಆವರಣದಲ್ಲಿ ನೆರವೇರಿತು.

ನೂರಾರು ಜನರು ಸೇರಿ ಅಂತಿಮ ದರ್ಶನ ಪಡೆದರು. ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ ಪ್ರಾರಂಭಿಕ ವಿಧಿಗಳು ಮುಗಿದ ಬಳಿಕ, ಮೃತದೇಹವನ್ನು ಅವರ ಮನೆಗೆ ತೆಗೆದುಕೊಂಡು ಹೋಗಲಾಯಿತು. ಈ ವೇಳೆ ಮನೆಯವರ ಕಣ್ಣೀರಿನ ಆಕ್ರಂದನ ಮನಕಲಕಿತು. ತದನಂತರ ಅಬ್ದುಲ್ ರಹ್ಮಾನ್ ಅವರ ತಂದೆ, ತಾಯಿ, ಸಹೋದರಿ, ಪತ್ನಿ ಮತ್ತು ಸಂಬಂಧಿಕರೊಂದಿಗೆ ಸಾವಿರಾರು ಜನರು ಅಂತಿಮ ದರ್ಶನ ಮಾಡಿದರು.

Comments

Leave a Reply

Your email address will not be published. Required fields are marked *