ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್, ದೀಪಾ ಭಾಸ್ತಿಗೆ ಅಭಿನಂದನಾ ಸಮಾರಂಭ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಅವರ ಅಭಿನಂದನಾ ಸಮಾರಂಭ ದಿನಾಂಕ 02/06/2025ರಂದು ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಂಡು ಮಾತನಾಡಿದರು.

ಶ್ರೀಮತಿ ಬಾನು ಮುಷ್ತಾಕ್ ಅವರು ತಮ್ಮ ಕನ್ನಡ ಕೃತಿಯ ಮೂಲಕ ಬೂಕರ್ ಪ್ರಶಸ್ತಿಯನ್ನು ಗೆದ್ದು, ಕನ್ನಡ ಭಾಷೆಯ ಜ್ಯೋತಿಯನ್ನು ಜಗತ್ತಿಗೆ ಬೆಳಗಿದ್ದಾರೆ. ಇವರ ಕೃತಿಯನ್ನು ಅನುವಾದಿಸಿದ ಶ್ರೀಮತಿ ದೀಪಾ ಭಾಸ್ತಿ ಅವರು ದೇಶಕ್ಕೆ ಕೀರ್ತಿಯ ಆರತಿಯಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅವರು ಹೆಮ್ಮೆಯಿಂದ ತಿಳಿಸಿದರು. ಈ ಇಬ್ಬರು ಸಾಧಕರು ಸಪ್ತಸಾಗರದಾಚೆ ಕರ್ನಾಟಕಕ್ಕೆ ಗೌರವ ತಂದಿದ್ದಾರೆ ಎಂದು ಅವರು ಶ್ಲಾಘಿಸಿದರು.

“ಪ್ರತಿಯೊಬ್ಬರಿಗೂ ತಮ್ಮ ಭಾಷೆ ಮತ್ತು ಸಂಸ್ಕೃತಿ ಮುಖ್ಯವಾಗಿದೆ. ಕನ್ನಡ ಭಾಷೆ ಮತ್ತು ನಾಡಿನ ಗೌರವವನ್ನು ಜಾಗತಿಕವಾಗಿ ಹೆಚ್ಚಿಸಿದ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ತುಂಬು ಹೃದಯದ ಅಭಿನಂದನೆಗಳು,” ಎಂದು ಶಿವಕುಮಾರ್ ಹೇಳಿದರು. ಈ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಇಬ್ಬರಿಗೂ ತಲಾ 10 ಲಕ್ಷ ರೂಪಾಯಿಗಳ ಗೌರವ ಧನವನ್ನು ಘೋಷಿಸಲಾಯಿತು

Comments

Leave a Reply

Your email address will not be published. Required fields are marked *