ಕುಂದಾಪುರ: ಬಕ್ರೀದ್ ಹಬ್ಬಕ್ಕೆ ಮುನ್ನ ಶಾಂತಿ ಸಭೆ; ಸೌಹಾರ್ದತೆಯಿಂದ ಆಚರಿಸಲು ಸೂಚನೆ

ಕುಂದಾಪುರ, ಜೂನ್ 03, 2025: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಎಲ್ಲಾ ಧಾರ್ಮಿಕ ಮುಖಂಡರನ್ನು ಕರೆಯಿಸಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಹಬ್ಬದ ಸಂದರ್ಭದಲ್ಲಿ ಸಾಮರಸ್ಯ, ಸೌಹಾರ್ದತೆ, ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದಂತೆ ಬಕ್ರೀದ್ ಹಬ್ಬವನ್ನು ಆಚರಿಸುವಂತೆ ಧಾರ್ಮಿಕ ಮುಖಂಡರಿಗೆ ಪೊಲೀಸ್ ಅಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಎಲ್ಲಾ ಸಮುದಾಯದ ಮುಖಂಡರು ಭಾಗವಹಿಸಿ, ಶಾಂತಿಯುತವಾಗಿ ಹಬ್ಬ ಆಚರಿಸುವ ಕುರಿತು ಚರ್ಚಿಸಿದರು. ಕಾನೂನು ಉಲ್ಲಂಘನೆಯಾಗದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸೌಹಾರ್ದತೆ ಕಾಪಾಡಿಕೊಂಡು ಹಬ್ಬವನ್ನು ಆಚರಿಸಲು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದರು.

ಉಡುಪಿ: ನಗರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಧಾರ್ಮಿಕ ಮುಖಂಡರನ್ನು ಠಾಣೆಗೆ ಕರೆಯಿಸಿ ಶಾಂತಿ ಸಭೆ ನಡೆಸಿ ಹಬ್ಬದ ಸಮಯದಲ್ಲಿ ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಹಬ್ಬವನ್ನು ಕಾನೂನು ಸುವ್ಯವಸ್ಥೆಗೆ ದಕ್ಕೆ ಬಾರದಂತೆ ಆಚರಣೆ ಮಾಡುವಂತೆ ತಿಳಿಸಲಾಯಿತು.

Comments

Leave a Reply

Your email address will not be published. Required fields are marked *