ಗಂಗೊಳ್ಳಿ, ಜೂನ್ 03, 2025: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ಮುಖಂಡರನ್ನು ಕರೆಯಿಸಿ ಶಾಂತಿ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ಹಬ್ಬದ ಸಂದರ್ಭದಲ್ಲಿ ಸಾಮರಸ್ಯ, ಸೌಹಾರ್ದತೆ, ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದಂತೆ ಬಕ್ರೀದ್ ಹಬ್ಬವನ್ನು ಆಚರಿಸುವಂತೆ ಧಾರ್ಮಿಕ ಮುಖಂಡರಿಗೆ ಪೊಲೀಸ್ ಅಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಎಲ್ಲಾ ಸಮುದಾಯದ ಮುಖಂಡರು ಭಾಗವಹಿಸಿ, ಶಾಂತಿಯುತವಾಗಿ ಹಬ್ಬ ಆಚರಿಸುವ ಕುರಿತು ಚರ್ಚಿಸಿದರು. ಕಾನೂನು ಉಲ್ಲಂಘನೆಯಾಗದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸೌಹಾರ್ದತೆ ಕಾಪಾಡಿಕೊಂಡು ಹಬ್ಬವನ್ನು ಆಚರಿಸಲು ಸಹಕರಿಸುವಂತೆ ಪೊಲೀಸರು ತಿಳಿಸಿದ್ದಾರೆ.
Leave a Reply