ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳಿಗೆ ನಿರ್ಬಂಧ: ಉಡುಪಿ ಜಿಲ್ಲಾಡಳಿತ

ಉಡುಪಿ, ಜೂನ್ 13, 2025: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದ ರಸ್ತೆ ಬದಿಯಲ್ಲಿ ಭೂಕುಸಿತದ ಸಂಭವ ಇರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾಡಳಿತವು ಜೂನ್ 15, 2025 ರಿಂದ ಸೆಪ್ಟೆಂಬರ್ 30, 2025 ರವರೆಗೆ ಈ ಮಾರ್ಗದಲ್ಲಿ ಭಾರಿ ವಾಹನಗಳ (Heavy Vehicles) ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಅವರ ನೇತೃತ್ವದಲ್ಲಿ ಹೊರಡಿಸಲಾದ ಅಧಿಕೃತ ಅಧಿಸೂಚನೆಯ ಪ್ರಕಾರ, ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಮತ್ತು ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳ 1989ರ ಕಲಂ 221(ಎ)(2) ಹಾಗೂ (5) ಅನ್ವಯ ಈ ನಿರ್ಬಂಧವನ್ನು ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಆಗುಂಬೆ ಘಾಟಿಯಲ್ಲಿ ಕೇವಲ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿರುತ್ತದೆ. ಮರಳು ಮತ್ತು ಸರಕು ಸಾಗಾಣಿಕೆ ವಾಹನಗಳ ಸೇರಿದಂತೆ ಭಾರಿ ವಾಹನಗಳು ಬದಲಿ ಮಾರ್ಗವನ್ನು ಬಳಸಬೇಕು.

ಈ ಆದೇಶವು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಅವರ ಪತ್ರ (ದಿನಾಂಕ: 11-06-2025) ಮತ್ತು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರ ವರದಿ (ದಿನಾಂಕ: 12-06-2025) ಆಧಾರದ ಮೇಲೆ ಹೊರಡಿಸಲಾಗಿದೆ. ಭಾರಿ ಮಳೆಯಿಂದ ರಸ್ತೆಯಲ್ಲಿ ಭೂಕುಸಿತದ ಸಾಧ್ಯತೆ ಇರುವುದರಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಭಾರಿ ವಾಹನಗಳ ಚಾಲಕರು ಬದಲಿ ಮಾರ್ಗದಲ್ಲಿ ಸಂಚರಿಸಬೇಕು. ಈ ಆದೇಶದ ಉಲ್ಲಂಘನೆಯಿಂದ ಉಂಟಾಗುವ ಅಡಚಣೆಗಳನ್ನು ತಪ್ಪಿಸಲು ಸಾರ್ವಜನಿಕರಿಗೆ ಸಹಕಾರ ನೀಡುವಂತೆ ಜಿಲ್ಲಾಡಳಿತ ಕೋರಿದೆ.

ಪರ್ಯಾಯ ಮಾರ್ಗ

ಕ್ರ.ಸಂಸಂಚಾರ ಮಾರ್ಗಬದಲಿ ಮಾರ್ಗ
1ಉಡುಪಿ – ತೀರ್ಥಹಳ್ಳಿಉಡುಪಿ – ಕುಂದಾಪುರ – ಸಿದ್ಧಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ
2ಉಡುಪಿ – ತೀರ್ಥಹಳ್ಳಿಉಡುಪಿ – ಕಾರ್ಕಳ – ಮಾಳ ಘಾಟಿ – ಶೃಂಗೇರಿ – ತೀರ್ಥಹಳ್ಳಿ

ಈ ಆದೇಶದ ಪ್ರತಿಯನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳು ಮತ್ತು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲಾಗಿದೆ.

Comments

Leave a Reply

Your email address will not be published. Required fields are marked *