ಬ್ರಹ್ಮಾವರ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

ಬ್ರಹ್ಮಾವರ, ಜೂನ್ 30, 2025: ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ತಲೆ ಬುರುಡೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆಹಚ್ಚುವ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರು ಮಾಹಿತಿ ನೀಡಿದರು.

ಬಂಧಿತ ಆರೋಪಿಗಳಾದ ರಾಮ (49), ಪ್ರಸಾದ್ (21), ನವೀನ್ (35), ಕೇಶವ ನಾಯ್ಕ್ (50), ಸಂದೇಶ (35), ಮತ್ತು ರಾಜೇಶ್ (28) ಎಲ್ಲರೂ ಕುಂಜಾಲು ಗ್ರಾಮದ ನಿವಾಸಿಗಳಾಗಿದ್ದಾರೆ. ಇವರು ದನವನ್ನು ಖರೀದಿಸಿ ಮಾಂಸ ಮಾಡಿ, ಅದರ ಕಳೆಬರವನ್ನು ವಿಲೇವಾರಿ ಮಾಡಲು ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದಾಗ ದನದ ತಲೆ ಬುರುಡೆ ಮತ್ತು ಇತರ ಭಾಗಗಳು ರಸ್ತೆಗೆ ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗಿದೆ.

ತನಿಖೆಯಲ್ಲಿ, ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆಹಚ್ಚಲು ಯಶಸ್ವೀಯಾಗಿದ್ದಾರೆ.

Comments

Leave a Reply

Your email address will not be published. Required fields are marked *