ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ, ಮತ್ತೊರ್ವ ಆರೋಪಿ ಬಂಧನ

ಬಂಟ್ವಾಳ (ಜೂ. 30) ಮಂಗಳೂರಿನಲ್ಲಿ ಸೃಷ್ಟಿಯಾಗಿದ್ದ ಆತಂಕ ವಾತಾವರಣ ತಿಳಿಯಾಗುತ್ತಿದೆ. ಆದರೆ ಹ-ತ್ಯೆ ಪ್ರಕರಣದ ತನಿಖೆ ಆರೋಪಿಗಳ ಆತಂಕ ಹೆಚ್ಚಿಸಿದೆ.ರೌಡಿ ಶೀಟರ್ ಸುಹಾಶ್ ಶೆಟ್ಟಿ ಹತ್ಯೆಯಿಂದ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀಕಾರ, ದ್ವೇಷ ಭಾಷಣ ಸೇರಿದಂತೆ ಹಲವು ಸಂಘರ್ಷದ ಸನ್ನಿವೇಶಗಳು ಸೃಷಿಯಾಗಿತ್ತು. ಇದರ ನಡುವೆ ಬಂಟ್ವಾಳದ ಅಬ್ದುಲ್ ರೆಹಮಾನ್ ಹ-ತ್ಯೆಯೂ ನಡೆದಿತ್ತು. ಈ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಬಂಟ್ವಾಳ್ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಕಳೆದ ಮೇ.27ರಂದು ನಡೆದ ಬಂಟ್ವಾಳ್ ಅಬ್ದುಲ್ ರೆಹಮಾನ್ ಹ-ತ್ಯೆ ಪ್ರಕರಣದಲ್ಲಿ ಪೊಲೀಸರು ಈವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ. 9ನೇ ಆರೋಪಿ ಬಂಟ್ವಾಳದ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್. 33 ವರ್ಷದ ಶಿವಪ್ರಸಾದ್ ಹ-ತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಶಿವಪ್ರಸಾದ್ ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳ ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿದ ನ್ಯಾಯಾಲಯ ಆರೋಪಿಯನ್ನು ಪೋಲಿಸ್ ಕಸ್ಟಡಿಗೆ ನೀಡಿದೆ.

Comments

Leave a Reply

Your email address will not be published. Required fields are marked *