ಗಂಗೊಳ್ಳಿ: ಮರವಂತೆ ಬೀಚ್‌ ಬಳಿ ಭೀಕರ ಅಪಘಾತ; ಸ್ಕೂಟರ್‌ ಸವಾರ ಸಾವು

ಗಂಗೊಳ್ಳಿ, ಜುಲೈ 01, 2025: ಪಿಕ್‌ಅಪ್‌ ಢಿಕ್ಕಿ ಹೊಡೆದು ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮರವಂತೆ ಬಸ್‌ ನಿಲ್ದಾಣದ ಸಮೀಪ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಮರವಂತೆಯ ಬೆಟ್ಟಿನಮನೆ ನಿವಾಸಿ ಲಕ್ಷ್ಮಣ ಪೂಜಾರಿ (45) ಮೃತಪಟ್ಟವರು. ಅವರು ಸ್ಕೂಟರ್‌ನಲ್ಲಿ ತ್ರಾಸಿ ಕಡೆಯಿಂದ ಮರವಂತೆಗೆ ಬಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮರವಂತೆ ಬಸ್‌ ನಿಲ್ದಾಣದ ಸಮೀಪ ಯೂಟರ್ನ್ ತೆಗೆದುಕೊಳ್ಳುತ್ತಿರುವಾಗ ಬೈಂದೂರು ಕಡೆಯಿಂದ ಬರುತ್ತಿದ್ದ ಪಿಕ್‌ಅಪ್‌ ವಾಹನ ಢಿಕ್ಕಿ ಹೊಡೆಯಿತು. ಅಪಘಾತದ ರಭಸಕ್ಕೆ ಅವರು ಸ್ಥಳದಲ್ಲೇ ಸಾವನ್ನಪ್ಪಿದರು.

ಘಟನೆಯ ಕುರಿತು ಮಾಹಿತಿ ಪಡೆದ 24×7 ಹೆಲ್ಪ್‌ಲೈನ್ ಆಂಬುಲೆನ್ಸ್ ತಂಡವು ತಕ್ಷಣ ಸ್ಥಳಕ್ಕೆ ಧಾವಿಸಿ ಸಹಕಾರ ನೀಡಿತು. ಗಂಗೊಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *