ಪುತ್ತೂರು, ಜುಲೈ 8, 2025: ಮದುವೆಯಾಗುವುದಾಗಿ ಯುವತಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ರನಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾದ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿ ನಗರಮಂಡಲದ ಮಾಜಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದ್ದು, “ನಿಮ್ಮ ಮೇಲೆ ಶಿಸ್ತು ಕ್ರಮವನ್ನೇಕೆ ಜರುಗಿಸಬಾರದು?” ಎಂದು ಪ್ರಶ್ನಿಸಿ ಪಕ್ಷದ ಸ್ಥಳೀಯ ಘಟಕವು ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
ಶ್ರೀಕೃಷ್ಣ, ಯುವತಿಯನ್ನು ನಂಬಿಸಿ ವಂಚಿಸಿದ ಬಗ್ಗೆ ಮಾದ್ಯಮಗಳಲ್ಲಿ ಹಾಗೂ ಸಾರ್ವಜನಿಕವಾಗಿ ಆಗುತ್ತಿರುವ ಪ್ರಚಾರದಿಂದ ಪಕ್ಷಕ್ಕೆ ಮುಜುಗರ ಉಂಟಾಗಿದ್ದು ಈ ಘಟನೆ ಬಗ್ಗೆ ಈಗಾಗಲೇ ಸಂತ್ರಸ್ಥೆಯ ಕುಟುಂಬದವರು ನೀವು ನ್ಯಾಯ ಸಮ್ಮತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪಿ ಜಿ ಜಗನ್ನಿವಾಸ ರಾವ್ ಪಕ್ಷದಲ್ಲಿ ಜವಾಬ್ದಾರಿಯುತವಾಗಿ ನ್ಯಾಯಯುತವಾಗಿ ನಡೆದುಕೊಳ್ಳಬೇಕಾಗಿದ್ದು, ಸಂತ್ರಸ್ಥ ಯುವತಿಗೆ ನ್ಯಾಯ ಒದಗಿಸಿ ಕೊಡಬೇಕಾಗಿದೆ. ಇಲ್ಲದಿದ್ದಲ್ಲಿ ಪಕ್ಷದ ಹಿತದೃಷ್ಟಿಯಿಂದ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ತಾವು ಉತ್ತರಿಸಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಅವರು ಪಿ ಜಿ ಜಗನ್ನಿವಾಸ ರಾವ್ ಅವರಿಗೆ ನೋಟೀಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
Leave a Reply