ಗಂಗೊಳ್ಳಿ: ಮೀನುಗಾರರ ಕಾಣೆಯಾಗಿರುವ ಪ್ರಕರಣ; ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಗಂಗೊಳ್ಳಿ, ಜುಲೈ 16, 2025: ಗಂಗೊಳ್ಳಿ ಸಮೀಪದ ಸಮುದ್ರದಲ್ಲಿ ಮೀನುಗಾರಿಕೆಯ ಸಂದರ್ಭದಲ್ಲಿ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಇಂದು ಸ್ಥಳಕ್ಕೆ ಭೇಟಿ ನೀಡಿದರು. ನಿನ್ನೆ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿದ್ದರು. ಘಟನೆಯಲ್ಲಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಪೈಕಿ ಲೋಹಿತ್ ಖಾರ್ವಿ (38) ಎಂಬಾತನ ಮೃತದೇಹ ಕುಂದಾಪುರದ ಕೋಡಿ ಲೈಟ್ ಹೌಸ್ ಬಳಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಶಾಸಕ ಗುರುರಾಜ್ ಗಂಟಿಹೊಳೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ, ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಅನಿತಾ ಆರ್‌. ಕೆ., ಸ್ಥಳೀಯಾಡಳಿತದ ಜನಪ್ರತಿನಿಧಿಗಳು, ಮಂಡಲ ಪದಾಧಿಕಾರಿಗಳು ಮತ್ತು ಪಕ್ಷದ ಪ್ರಮುಖರು ಪ್ರಮುಖರು ಉಪಸ್ಥಿತರಿದ್ದರು. ಈ ಹಂತದಲ್ಲಿ ಸಮುದ್ರ ಮತ್ತು ತೀರದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ತನಿಖೆ ಮುಂದುವರೆದಿದೆ.

Comments

Leave a Reply

Your email address will not be published. Required fields are marked *