ಕುಮಟಾ, ಜುಲೈ 20, 2025: ತಾಲೂಕಿನ ಹಳಕಾರ ಗ್ರಾಮದ ಮಾವಿನಕೆರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಭವಿಸಿದೆ.
ಮೃತನನ್ನು ಹಳದಿಪುರ ಮೂಲದ ನಿಲೇಶ ನಾಯ್ಕ (27) ಎಂದು ಗುರುತಿಸಲಾಗಿದೆ. ನಾಲ್ಕು ಜನ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜುತ್ತಿರುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈಜುತ್ತಿದ್ದ ಸಂದರ್ಭದಲ್ಲಿ ಕಾಲಿಗೆ ಸಿಕ್ಕಿಹಾಕಿಕೊಂಡ ಪಾಚಿಯನ್ನು ಬಿಡಿಸಿಕೊಳ್ಳಲು ಸಾಧ್ಯವಾಗದೆ ನಿಲೇಶ ಮುಳುಗಿ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.ಅಗ್ನಿಶಾಮಕದಳ ,ಪೋಲೀಸ ಇಲಾಖೆ ಹಾಗೂ ಸ್ಥಳೀಯರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Leave a Reply