Author: NewsDesk

  • ಬೈಂದೂರು: ಕಾರು ಕಳ್ಳತನ ಪ್ರಕರಣ; ಆರೋಪಿ ಹಾಗೂ ಕಾರು ಪತ್ತೆ

    ಬೈಂದೂರು: ತಾಲೂಕಿನ ಕಿರೀಮಂಜೇಶ್ವರ ಗ್ರಾಮದ ನಾಗುರಿನ ಗೋವಿಂದ ರಾವ್ ರವರ ಜಿ ಏನ್ ಕಾಂಪ್ಲೆಕ್ಸ್ ನ ಹೊರಭಾಗದಲ್ಲಿ ಇರಿಸಿದ್ದ KA 20 MF 3378 ಮಾರುತಿ ಸ್ವಿಫ್ಟ್ ಕಾರು (ಅಂದಾಜು ಮೌಲ್ಯ 8 ಲಕ್ಷ) ದಿನಾಂಕ 01.05.2025 ರಂದು ಬೆಳೆಗಿನ ಜಾವ 4:30 ಗಂಟೆಗೆ ಕಳವಾಗಿದ್ದು. ಈ ಬಗ್ಗೆ ಕಾರು ಮಾಲಕ ಗಣೇಶ್ ಆಚಾರ್ಯ ರವರು ನೀಡಿರುವ ದೂರಿನ ಮೇರೆಗೆ ಬೈಂದುರು ಪೊಲೀಸ್ ಠಾಣೆಯೆಲ್ಲಿ ಅ. ಕ್ರ. 83/2025 ಕಲಂ 303(2) ರಂತೆ ಪ್ರಕರಣ ದಾಖಲಾಗಿರುತ್ತದೆ.

    ಈ ಪ್ರಕರಣದ ಪತ್ತೆಗಾಗಿ ಶ್ರೀ ಹೆಚ್ ಡಿ ಕುಲಕರ್ಣಿ ಪೊಲೀಸ್ ಉಪಾಧೀಕ್ಷಕರು ಕುಂದಾಪುರ ಉಪವಿಭಾಗರವರ ಮಾರ್ಗದರ್ಶನದಲ್ಲಿ ಶ್ರೀ ಸಾವೀತ್ರ ತೇಜ ಪೊಲೀಸ್ ವ್ರತ್ತ ನಿರೀಕ್ಷಿಕರು ಬೈಂದೂರು ರವರ ನೇತೃತ್ವ ದಲ್ಲಿ, ಬೈಂದೂರು ಠಾಣೆಯ ಪಿ ಎಸ್ ಐ ರವರಾದ ತಿಮ್ಮೀಶ್ ಬಿ ಏನ್ ಮತ್ತು ನವೀನ ಪಿ ಬೋರಕರ, ಬೈಂದೂರು ಠಾಣೆಯ ಸಿಬ್ಬಂದಿಯವರಾದ ಚಿದಾನಂದ, ಮಾಳಪ್ಪ, ವ್ರತ್ತ ನಿರೀಕ್ಷಿಕರ ಕಚೇರಿಯ ಸಿಬ್ಬಂದಿಯವರಾದ ರವೀಂದ್ರ ವಿಶೇಷ ತಂಡ ರಚಿಸಲಾಯಿತು.

    ವಿಶೇಷ ತಂಡದಲ್ಲಿದ್ದ ಅಧಿಕಾರಿ ಮಟಿಗೂ ಸಿಬ್ಬಂದಿಗಳು ದಿನಾಂಕ 02.05.2025 ರಂದು ಆರೋಪಿ ಪೌಜಾನ್ ಅಹ್ಮದ್ ಸಮೇತ ಕಾರನ್ನು ಪತ್ತೆ ಮಾಡಿ ಕಾರನ್ನು ಸ್ವಧೀನಪಡೆಸಿಕೊಂಡಿದ್ದಾರೆ. ಹಾಗೂ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

    ರಕ್ಷಕ್ ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸೊಲ್ಯೂಷನ್ ಅವರು ಕಾರ್ಯಾಚರಣೆಯಲ್ಲಿ ಸಹಕರಿಸಿರುತ್ತಾರೆ.

    ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಉಡುಪಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಡಾ. ಅರುಣ್ ಕೆ ಐ ಪಿ ಎಸ್. ರವರು ಹಾಗೂ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಶ್ರೀ ಸುಧಾಕರ್ ನಾಯ್ಕ್ ಮತ್ತು ಪರಮೇಶ್ವರ ಹೆಗಡೆ ರವರು ಅಭಿನಂದಿಸಿರುತ್ತಾರೆ.

  • ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ, “ವಕ್ಫ್ ಆಸ್ತಿಗೂ ಅಮಿತ್ ಷಾ ಗೂ ಮೋದಿಗೂ ಏನ್ ಸಂಬಂಧ? “

    ಶಿವಮೊಗ್ಗ (ಮೇ.4): ಕಳೆದ 10 ವರ್ಷಗಳಿಂದ ಈ ದೇಶದಲ್ಲಿ ಒಂದು ಧರ್ಮವನ್ನು ಗುರಿಯಾಗಿರಿಸಿ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಮುಸ್ಲಿಂ ಧಾರ್ಮಿಕ ಮುಖಂಡ ಶಾಹುಲ್ ಹಮೀದ್ ಮುಕ್ತಿಯಾರ್ ಆರೋಪಿಸಿದರು.

    ವಕ್ಫ್ ಕಾಯ್ದೆ(ತಿದ್ದುಪಡಿ) 2025 ಅನ್ನು ತಕ್ಷಣ ರದ್ದುಗೊಳಿಸಲು ಆಗ್ರಹಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ನಗರದ ಸರ್ ಎಂ.ವಿಶ್ವೇಶ್ವರಯ್ಯ ರಸ್ತೆಯಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

    ನಾವೆಲ್ಲಾ ಭಾರತೀಯರೇ. ಈ ಮಣ್ಣಲ್ಲೇ ಹುಟ್ಟಿದವರು. ನಮಗೂ ಈ ದೇಶದಲ್ಲಿ ಸಂವಿಧಾನದ ಪ್ರಕಾರ ಎಲ್ಲಾ ಹಕ್ಕು ಇದೆ. ವಕ್ಪ್ ಕಾಯ್ದೆ ತಿದ್ದುಪಡಿ ನಮ್ಮ ಶರಿಯತ್‌ಗೆ ವಿರುದ್ಧವಾಗಿದೆ. ವಕ್ಫ್ ಆಸ್ತಿ ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದಲ್ಲ. ಅದು ಭಗವಂತನಿಗೆ ಸೇರಿದ್ದು ಇದನ್ನು ಎಲ್ಲಾ ಧರ್ಮೀಯರು ಲೂಟಿ ಮಾಡಿದ್ದಾರೆ. ವಕ್ಪ್ ಆಸ್ತಿಯನ್ನು ಯಾರೇ ಒತ್ತುವರಿ ಮಾಡಿದ್ದರೂ ಅದನ್ನು ಹಿಂದಿರುಗಿಸಲೇಬೇಕು. ಮುಸ್ಲಿಮರ ಆಸ್ತಿಗೆ ಬೇರೆ ಯಾರೂ ಕೈಹಾಕಲು ಸಾಧ್ಯವಿಲ್ಲ. ಈಗಿನ ಕಾನೂನಿನಂತೆ 20-30 ವರ್ಷಗಳ ಕಾಲ ಆತ ವಕ್ಪ್ ಆಸ್ತಿ ಬಳಸಿಕೊಂಡಿದ್ದರೆ ಅದು ಅವನಿಗೇ ನೀಡಬೇಕಾಗುತ್ತದೆ ಎಂದಿದೆ ಎಂದರು.

    ಚಿಂತಕ ಸುಧೀರ್ ಕುಮಾರ್ ಮರೊಳ್ಳಿ ಮಾತನಾಡಿ, ಪ್ರಧಾನಿ ಮೋದಿಯುವರು ದೇಶವನ್ನು ಕಟ್ಟುವ ಕೆಲಸ ಮಾಡುತ್ತಿಲ್ಲ, ಕೋಮುಗಳ ನಡುವೆ ಹೊಡೆದಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಜನರ ಭಾವನೆಗಳನ್ನು ನಾಶ ಮಾಡಲಾಗುತ್ತಿದೆ. ವಕ್ಫ್ ಕಾಯ್ದೆ ಜಾರಿಗೆ ತರುವ ಹಿಂದೆ ರಾಜಕೀಯ ಷಂಡ್ಯತ್ರ ಇದೆ. ಈ ವಕ್ಫ್ ಕಾಯಿದೆ ಸಂವಿಧಾನದ ವಿರೋಧಿಯಾಗಿದೆ ಎಂದರು.

    ವಕ್ಫ್ ಆಸ್ತಿ ಯಾರ ವೈಯುಕ್ತಿಕ ಆಸ್ತಿ ಅಲ್ಲ, ಅದು ಪರಮಾತ್ಮನ ಆಸ್ತಿ. ವಕ್ಫ್ ಆಸ್ತಿಗೂ ಅಮಿತ್ ಷಾ ಗೂ ಮೋದಿಗೂ ಏನ್ ಸಂಬಂಧ ಎಂದು ಪ್ರಶ್ನಿಸಿದ ಅವರು, ಮತ ರಾಜಕಾರಣ ಕೈಬಿಡುವಂತೆ ಆಗ್ರಹಿಸಿದರು.

    ಭಾರತದ ಮುಸ್ಲಿಮರ ಧ್ವನಿಯಾಗಿ ವಕ್ಪ್ ತಿದ್ದುಪಡಿ ಕಾಯ್ದೆ ಇಲ್ಲ. ಇದರಿಂದ ವಕ್ಫ್ ಆಸ್ತಿಗಳ ಸ್ವಾಯತ್ತತೆ ಕಸಿದುಕೊಳ್ಳುತ್ತದೆ. ಸಂವಿಧಾನದ ಗ್ಯಾರಂಟಿಗಳನ್ನು ಉಲ್ಲಂಘಿಸುತ್ತದೆ. ಭಾರತದ ಜಾತ್ಯತೀತ ರಚನೆಗೆ ಧಕ್ಕೆ ತರುತ್ತದೆ ಎಂದು ಮುಸ್ಲಿಂ ಮುಖಂಡರು ಆರೋಪಿಸಿದರು.
    ಕೇಂದ್ರ ಹಾಗೂ ರಾಜ್ಯ ವಕ್ಪ್ ಮಂಡಳಿಗಳಿಗೆ ಮುಸ್ಲಿಮೇತರರನ್ನು ಕಡ್ಡಾಯವಾಗಿ ಸೇರಿಸುವುದು ಸಂವಿಧಾನದ ೨೬ನೇ ವಿಧಿಯ ಅನ್ವಯ ಉಲ್ಲಂಘನೆಯಾಗುತ್ತದೆ. ಇದು ಮುಸ್ಲಿಮರಿಗೆ ತಮ್ಮ ಧಾರ್ಮಿಕ ಸಂಸ್ಥೆಗಳನ್ನು ನಿರ್ಮಿಸುವ ಹಕ್ಕನ್ನು ಕಸಿದುಕೊಳ್ಳುತ್ತದೆ. ಹಿಂದೂ, ಸಿಖ್ ಅಥವಾ ಇತರ ಧಾರ್ಮಿಕ ಆಸ್ತಿಗಳಿಗೆ ಇಂತರ ನಿಯಮ ಇಲ್ಲ ಎಂದರು.

    ದಾಖಲೆ ಇಲ್ಲದ ಮಸೀದಿಗಳು, ಖಬರಸ್ಥಾನಗಳು ಮತ್ತು ದರ್ಗಾಗಳಿಗೆ ಅಪಾಯವನ್ನೊಡ್ಡುತ್ತದೆ. ಸರ್ಕಾರದ ಕೈವಶವಾಗಬಹುದು ಎಂಬ ಆತಂಕವನ್ನು ಪ್ರತಿಭಟನಾಕಾರರು ವ್ಯಕ್ತಪಡಿಸಿದರು.
    ವಕ್ಪ್ ಆಸ್ತಿಯ ಮಾಲೀಕತ್ವವನ್ನು ಜಿಲ್ಲಾಧಿಕಾರಿಗಳೇ ನಿರ್ಧರಿಸುವ ಅಧಿಕಾರ ನೀಡುವುದು ನ್ಯಾಯಾಲಯದ ಮೇಲ್ವಿಚಾರಣೆ ಇಲ್ಲದೇ ಸ್ವೇಚ್ಛಾಚಾರ ತೀರ್ಮಾನಕ್ಕೆ ದಾರಿ ಮಾಡುತ್ತದೆ. ಅಲ್ಲದೇ, ಇದು ವಕ್ಫ್ ಮಂಡಳಿಗಳ ಸ್ವಾಯತ್ತತೆಗೆ ಧಕ್ಕೆ ತರುತ್ತದೆ ಎಂದರು.

    ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಮೊಹಮ್ಮದ್ ಇರ್ಫಾನ್ ಖಾನ್, ಏಜಾಜ್ ಪಾಶಾ, ಮುಫ್ತಿ ಸೈಯದ್ ಮುಜೀಬುಲ್ಲಾ, ಮುಫ್ತಿ ಮೊಹಮ್ಮದ್ ಶಫೀವುಲ್ಲಾ ಕಾಸ್ಮಿ, ಶೇಖ್ ಅಲಿ, ಮೌಲಾನಾ ಆಮಿದ್ ಉಮರಿ, ಮೌಲಾನಾ ಅಬ್ದುಲ್ ಜಬ್ಬಾರ್ ಸಾಧಿಕ್, ಅಫ್ತರ್ ಕೋಡಿಬೇಂದ್ರೆ, ಮೌಲಾನಾ ಜಬೀವುಲ್ಲಾ ಸಾಬ್, ಮುಫ್ತಿ ಇಫ್ತಾಬ್ ಸಾಹೇಬ್, ಜಾಮಿಲ್ ಉಮ್ರಿ ಇದ್ದರು.

    ಬೃಹತ್ ಪ್ರತಿಭಟನೆ: ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ಜಿಲ್ಲಾ ವಕ್ಪ್(ಮುಸ್ಲಿಂ ಹಾಸ್ಟೆಲ್ )ಕಛೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಹಿಳೆಯರು,ಯುವಕರು, ಪುರುಷರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವಕ್ಫ್ ಬಚಾನೆ ಚಲೇ ಹೈ- ಆವೋ ಹಮಾರೆ ಸಾಥ್ ಚಲೋ, ದಸ್ತೂರ್ ಬಚಾನೆ ನಿಕ್ಲೆ ಹೈ – ಆವೋ ಹಮಾರೆ ಸಾಥ್ ಚಲೋ ಘೋಷಣೆ ಕೂಗಿದರು. ಮೆರವಣಿಗೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

    ಪೊಲೀಸರು ಹೈಅಲರ್ಟ್: ಮುಸ್ಲಿಮರು ನಗರದಲ್ಲಿ ಭಾರೀ ಪ್ರತಿಭಟನೆಯ ಮೂಲಕ ಮೆರವಣಿಗೆ ನಡೆಸುತ್ತಾರೆ ಎಂಬ ಸುದ್ದಿ ತಿಳಿದ ಕೂಡಲೇ ಪೊಲೀಸರು ಅಲರ್ಟ್ ಆಗಿದ್ದರು. ಪ್ರತಿಭಟನೆ, ಯಾವುದೇ ಕ್ಷಣದಲ್ಲಿ ಏನಾದರೂ ತಿರುವು ತೆಗೆದುಕೊಳ್ಳಬಹುದೆಂಬ ಅನುಮಾನವಿದ್ದುದರಿಂದ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿತ್ತು. ನಗರವಲ್ಲದೇ ಸುತ್ತಮುತ್ತಲ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿತ್ತು. ಪ್ರತಿಭಟನೆ ನಡೆಯುವ ಮುಖ್ಯ ರಸ್ತೆಯಲ್ಲಿ ಭಾರೀ ಭದ್ರತೆ ಹಾಕಿದ್ದು, ಸಂಪರ್ಕ ರಸ್ತೆಗಳನ್ನು ಬಂದ್ ಮಾಡಲಾಗಿತ್ತು.ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸ್ಥಳದಲ್ಲೇ ಇದ್ದು, ಬಂದೋಬಸ್ತ್ ಮೇಲ್ವಿಚಾರಣೆ ವಹಿಸಿದ್ದರು. ಪ್ರತಿಭಟನೆಯಲ್ಲಿ 5 ಸಾವಿರಕ್ಕೂ ಮುಸ್ಲಿಂ ಸಮುದಾಯದವರು ಭಾಗವಹಿಸಿದ್ದರು.

  • ಗಂಗೊಳ್ಳಿ: ಅಂಜುಮನ್ ನೂರುಲ್ ಇಸ್ಲಾಂ ಸಂಸ್ಥೆ; ನೂತನ ಪದಾಧಿಕಾರಿಗಳ ಆಯ್ಕೆ

    ಗಂಗೊಳ್ಳಿ: ಅಂಜುಮನ್ ನೂರುಲ್ ಇಸ್ಲಾಂ ಸಂಸ್ಥೆ ಗಂಗೊಳ್ಳಿ ಇದರ 3 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಶನಿವಾರ ಬೆಳಗ್ಗೆ 10 ಗಂಟೆಗೆ ಅಂಜುಮನ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು.

    BSF ಮೊಹಮ್ಮದ್ ರಫೀಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ 3 ವರ್ಷದ ಅವಧಿಗೆ ಅಂಜುಮನ್ ನೂರುಲ್ ಇಸ್ಲಾಂ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು.

    ಗೌರವಾಧ್ಯಕ್ಷರಾಗಿ ಮೊಹಮ್ಮದ್ ಇಬ್ರಾಹಿಂ ಮೌಲಾನಾ (ಕೊಲ್ವಾ), ಅಧ್ಯಕ್ಷರಾಗಿ ಮುಜಾಹಿದ್ ಅಲಿ ನಾಖುದಾ, ಉಪಾಧ್ಯಕ್ಷರಾಗಿ ಮೊಹಮ್ಮದ್ ಅನ್ವರ್ ಚೌಗುಲೆ, ಕಾರ್ಯದರ್ಶಿಯಾಗಿ ಉಮರ್ ಭಾಷಾ ಸಾಹೇಬ್, ಜೊತೆ ಕಾರ್ಯದರ್ಶಿಯಾಗಿ ಮೊಹಮ್ಮದ್ ತಮೀಮ್ ಮೌಲಾನಾ, ಖಜಾಂಜಿಯಾಗಿ ಫಝಲ್ ರಹ್ಮಾನ್ ಎಂ ಎಚ್‌ ಹಾಗು ಸದಸ್ಯರುಗಳಾಗಿ ಎಚ್ ಅಬ್ದುಲ್ ರಹೀಮ್, ಜಿ ರೆಹಾನ್ ಅಹ್ಮದ್, ಖಲಿಫೆ ಮೊಹಮ್ಮದ್ ತಬ್ರೇಝ್‌, ಜಿ ಅಬೂಬಕರ್ ಸಾಹೇಬ್, ಝಹಿರ್ ಅಹ್ಮದ್ ನಾಖುದಾ, ಪಿ ಎಂ ಹಸೈನಾರ್ ಹಾಗು ಎಸ್ ಎಂ ಮೊಹಮ್ಮದ್ ಮೀರಾ ಸಾಹೇಬ್ ಅವರನ್ನು ಆಯ್ಕೆ ಮಾಡಲಾಯಿತು ಎಂದು ಪ್ರಕಟನೆ ತಿಳಿಸಿದೆ.

  • ಕಾನೂನಿನ ಉಲ್ಲಂಘನೆ; ಸೌದಿ ಅರೇಬಿಯಾದಲ್ಲಿ ಒಂದೇ ವಾರದಲ್ಲಿ 17,153 ಜನರ ಬಂಧನ..!

    ದಮಾಮ್: ಸೌದಿ ಅರೇಬಿಯಾದಲ್ಲಿ ರೆಸಿಡೆನ್ಸಿ, ಉದ್ಯೋಗ ಮತ್ತು ಗಡಿ ಭದ್ರತಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸೌದಿ ಅಧಿಕಾರಿಗಳು 17,153 ಜನರನ್ನು ಬಂಧಿಸಿದ್ದಾರೆ ಎಂದು ಸೌದಿ ಪ್ರೆಸ್ ಏಜೆನ್ಸಿ ವರದಿ ಮಾಡಿದೆ.

    ವಾಸಸ್ಥಳ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಒಟ್ಟು 10,305 ಜನರನ್ನು, ಅಕ್ರಮವಾಗಿ ಗಡಿ ದಾಟಲು ಪ್ರಯತ್ನಿಸಿದ್ದಕ್ಕಾಗಿ 3,644 ಜನರನ್ನು ಮತ್ತು ಕಾರ್ಮಿಕ ಕಾನೂನು ಉಲ್ಲಂಘನೆಗಾಗಿ 3,204 ಜನರನ್ನು ಬಂಧಿಸಲಾಗಿದೆ. ಅಕ್ರಮವಾಗಿ ದೇಶವನ್ನು ಪ್ರವೇಶಿಸಲು ಪ್ರಯತ್ನಿಸಿದ್ದಕ್ಕಾಗಿ ಬಂಧಿಸಲ್ಪಟ್ಟ 1,109 ಜನರಲ್ಲಿ 62 ಪ್ರತಿಶತದಷ್ಟು ಇಥಿಯೋಪಿಯನ್ನರು, 35 ಪ್ರತಿಶತದಷ್ಟು ಯೆಮೆನ್ ಮತ್ತು 3 ಪ್ರತಿಶತದಷ್ಟು ಇತರ ರಾಷ್ಟ್ರಗಳಿಗೆ ಸೇರಿದವರು.

  • ಉಡುಪಿ: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

    ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರ ಹುದ್ದೆಯ ಕರ್ತವ್ಯ ನಿರ್ವಹಿಸಲು ಯಾವುದೇ ಪದವಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಕನ್ನಡ ಸ್ಪಷ್ಠವಾಗಿ ಮಾತನಾಡಬಲ್ಲ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು.

     ಸ್ವ-ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

  • ಗಂಗೊಳ್ಳಿ: ರಹಮಾನಿಯಾ ಫುಟ್‌ಬಾಲ್ ಲೀಗ್ ಸೀಸನ್ 3

    ಗಂಗೊಳ್ಳಿ, ಮೇ 5: ರಹಮಾನಿಯಾ ಫುಟ್‌ಬಾಲ್ ಲೀಗ್‌ನ ಮೂರನೇ ಸೀಸನ್ ಮೇ 17 ಮತ್ತು 18ರಂದು ರಹಮಾನಿಯಾ ಮೊಹಲ್ಲಾ, ಗಂಗೊಳ್ಳಿಯಲ್ಲಿ ನಡೆಯಲಿದೆ. ಪಂದ್ಯಾವಳಿಯು ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.

    ತಂಡದ ಎಂಟ್ರಿ ಶುಲ್ಕ ₹1500 ಮತ್ತು ಆಟಗಾರರ ಎಂಟ್ರಿ ಶುಲ್ಕ ₹250 ಆಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆಗಳಾದ +91 77959 39800 ಮತ್ತು +91 96862 12627 ಗೆ ಕರೆ ಮಾಡಬಹುದು.

  • ಕುಂದಾಪುರ: ಕಳೆದುಹೋದ ಮೊಬೈಲ್ ಫೋನ್ CEIR ಪೋರ್ಟಲ್ ಮೂಲಕ ಪತ್ತೆ, ಮಾಲೀಕರಿಗೆ ಹಸ್ತಾಂತರ

    ಕುಂದಾಪುರ, ಮೇ 5: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್ ಫೋನ್ ಒಂದನ್ನು ಕೇಂದ್ರ ಸರ್ಕಾರದ ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (CEIR) ಪೋರ್ಟಲ್ ಬಳಸಿ ಪತ್ತೆಹಚ್ಚಿರುವ ಉಡುಪಿ ಪೊಲೀಸರು, ಫೋನ್‌ನ ಮಾಲೀಕರಿಗೆ ಯಶಸ್ವಿಯಾಗಿ ಹಿಂದಿರುಗಿಸಿದ್ದಾರೆ.

    ಏನಿದು ಸಿಇಐಆರ್? ಹೇಗೆ ಕೆಲಸ ಮಾಡುತ್ತದೆ?

    ಸಿಇಐಆರ್ ದೂರು ನೀಡುವ ಕಾರ್ಯವಿಧಾನ ಕದ್ದ ಸಾಧನಗಳನ್ನು ನಿಷ್ಕ್ರಿಯಗೊಳಿಸುತ್ತದೆ. ಅವುಗಳನ್ನು ಬಳಸಲು ಪ್ರಯತ್ನಿಸಿದಾಗ ಪೊಲೀಸರಿಗೆ ಎಚ್ಚರಿಕೆ ನೀಡುತ್ತದೆ. CEIR ಪೋರ್ಟಲ್‌ನಲ್ಲಿ ಸಾಧನ ಮತ್ತು ಅದರ ಮಾಲೀಕರ ಎಲ್ಲಾ ವಿವರಗಳನ್ನು ಒದಗಿಸಿದ ನಂತರ, ಮೊಬೈಲ್ ಸ್ವಯಂಚಾಲಿತವಾಗಿ ನಿರ್ಬಂಧಿಸಲ್ಪಡುತ್ತದೆ. ಹೊಸ ಸಿಮ್ ಕಾರ್ಡ್ ಅನ್ನು ಸೇರಿಸುವ ಮೂಲಕ ಸಾಧನವನ್ನು ಬಳಸುವ ಯಾವುದೇ ಪ್ರಯತ್ನವು ಹೊಸ ಬಳಕೆದಾರರ ಸಂಖ್ಯೆ ಮತ್ತು ಸ್ಥಳ ಮತ್ತು ಇತರ ವಿವರಗಳ ಬಗ್ಗೆ ಎಚ್ಚರಿಕೆಯನ್ನು ನೀಡುತ್ತದೆ.

    ದೂರು ಬಂದ ಬಳಿಕ ಮೊದಲು ಪೊಲೀಸರು ಆ ಸಂಖ್ಯೆಗೆ ಮರಳಿ ಕರೆ ಮಾಡುತ್ತಾರೆ. ಪ್ರತಿಕ್ರಿಯೆ ನೀಡದಿದ್ದಲ್ಲಿ ಮೊಬೈಲ್ ಫೋನ್ ಸಕ್ರಿಯಗೊಳಿಸುತ್ತಾರೆ. ಇದು ಕದ್ದ ಅಥವಾ ಕಳೆದು ಹೋದ ಫೋನ್ ಎಂದು ತಿಳಿಸುತ್ತಾರೆ. ಮತ್ತು ಅದನ್ನು ಹಿಂತಿರುಗಿಸಬೇಕು ಇಲ್ಲಾ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆ ನೀಡುತ್ತಾರೆ. ಇದು ರಿಸೀವರ್ ಬಳಸಿದ ಸಿಮ್ ಕಾರ್ಡ್ ಎಲ್ಲಾ ವಿವರಗಳನ್ನು ಒದಗಿಸುತ್ತದೆ ಮತ್ತು ಪೊಲೀಸರು ಫೋನ್‌ ಸಿಕ್ಕ ವ್ಯಕ್ತಿ ಜೊತೆ ಸಂಪರ್ಕದಲ್ಲಿರಲು ಸುಲಭವಾಗುತ್ತದೆ. ಇಂತಹ ಪ್ರಕರಣದಲ್ಲಿ ಖುದ್ದಾಗಿ ಬಂದು ಫೋನ್‌ ನೀಡುವುದಿಲ್ಲ ಬದಲಿಗೆ ಮೊಬೈಲ್‌ಗಳನ್ನು ಕೊರಿಯರ್‌ಗಳ ಮೂಲಕ ಪೊಲೀಸರಿಗೆ ಹಿಂತಿರುಗಿಸುತ್ತಾರೆ.

    ಮೊಬೈಲ್ ಕಳೆದುಹೋದವರು ದೂರು ದಾಖಲಿಸುವುದು ಹೇಗೆ?

    ಕಳೆದುಹೋದ ಅಥವಾ ಕದ್ದ ಮೊಬೈಲ್ ಫೋನ್‌ಗಳ ಬಗ್ಗೆ ದೂರು ದಾಖಲಿಸಲು ನಾಗರಿಕರು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು:

    1. CEIR ಪೋರ್ಟಲ್‌ಗೆ ಭೇಟಿ: www.ceir.gov.in ವೆಬ್‌ಸೈಟ್‌ಗೆ ಭೇಟಿ ನೀಡಿ.
    2. ದೂರು ದಾಖಲಾತಿ: “Block/Lost Mobile” ಆಯ್ಕೆಯನ್ನು ಆರಿಸಿ, ಅಗತ್ಯವಿರುವ ಮಾಹಿತಿಯಾದ ಫೋನ್‌ನ IMEI ಸಂಖ್ಯೆ, ಮೊಬೈಲ್ ಸಂಖ್ಯೆ, ಕಳೆದ ಸ್ಥಳದ ವಿವರಗಳು ಮತ್ತು ಆಧಾರ್ ಕಾರ್ಡ್ ವಿವರಗಳನ್ನು ಭರ್ತಿ ಮಾಡಿ.
    3. ಕರ್ನಾಟಕ ರಾಜ್ಯ ಪೊಲೀಸ್ (KSP) ಆ್ಯಪ್: ಕರ್ನಾಟಕದ ನಾಗರಿಕರು KSP ಆ್ಯಪ್‌ನಲ್ಲಿ “e-Lost” ವಿಭಾಗದ ಮೂಲಕ ದೂರು ದಾಖಲಿಸಬಹುದು. ದೂರು ದಾಖಲಾದ ನಂತರ, CEIR ಪೋರ್ಟಲ್ ಮೂಲಕ ಫೋನ್‌ನ IMEI ಸಂಖ್ಯೆಯನ್ನು ತಡೆಯಲಾಗುತ್ತದೆ ಮತ್ತು ಟ್ರ್ಯಾಕಿಂಗ್ ಪ್ರಕ್ರಿಯೆ ಆರಂಭವಾಗುತ್ತದೆ.
    4. ಸ್ಥಳೀಯ ಪೊಲೀಸ್ ಠಾಣೆ: ದೂರನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ಇದರಿಂದ ಪೊಲೀಸರು CEIR ವ್ಯವಸ್ಥೆಯ ಮೂಲಕ ಫೋನ್ ಪತ್ತೆಗೆ ಕ್ರಮ ಕೈಗೊಳ್ಳಬಹುದು.

    ಈ ಪೋರ್ಟಲ್‌ ಬಳಸಲು ಸಿಮ್ ಕರ್ನಾಟಕದಲ್ಲಿ ನೋಂದಣಿಯಾಗಿರಬೇಕು

    ಈ ವ್ಯವಸ್ಥೆ ಬಳಸಿಕೊಳ್ಳಲು ಮೊಬೈಲ್ ಮತ್ತು ಸಿಮ್ ಅನ್ನು ಕರ್ನಾಟಕದಲ್ಲಿ ನೋಂದಾಯಿಸಿಕೊಳ್ಳಬೇಕು. ಇದರಿಂದ ಕಳೆದು ಹೋದ ಮೊಬೈಲ್ ಅನ್ನು ದೇಶದ ಯಾವುದೇ ಭಾಗಕ್ಕೆ ತೆಗೆದುಕೊಂಡ ಹೋದರೂ ಪತ್ತೆಹಚ್ಚಬಹುದು. ಹಿಂದೆ ರಾಜ್ಯದಲ್ಲಿ ಕಳೆದು ಹೋದ ಮೊಬೈಲ್ಗಗಳನ್ನು ಪತ್ತೆಹಚ್ಚುವುದು ಕಷ್ಟಕರವಾಗಿತ್ತು. ಈಗ ಅದು ಸುಲಭವಾದ ಮಾರ್ಗವಾಗಿದೆ ಎಂದು ಐಪಿಎಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

  • ಉಪ್ಪುಂದ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯ

    ಬೈಂದೂರು: ರಸ್ತೆ ದಾಟುಲು ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪುಂದ ಶಾಲೆಬಾಗಿಲಿನಲ್ಲಿ ಸಂಭವಿಸಿದೆ. ಜಯಶೀಲ ಗಾಯಗೊಂಡ ವ್ಯಕ್ತಿ.

    ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಜಯಶೀಲ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರ ‌ ಗಾಯಗೊಂಡಿದ್ದು ಮಣಿಪಾಲ ದಾಖಲಿಸಲಾಗಿದೆ.

    ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೆಳ್ತಂಗಡಿ: ಆಟವಾಡುವಾಗ ಹೃದಯಾಘಾತದಿಂದ 16 ವರ್ಷದ ಬಾಲಕ ಸಾವು

    ಬೆಳ್ತಂಗಡಿ, ಮೇ 5: ಧರ್ಮಸ್ಥಳದ ಜೋಡುಸ್ಥಾನದಲ್ಲಿ ಮೇ 4ರಂದು ಆಟವಾಡುವ ವೇಳೆ ಹೃದಯಾಘಾತಕ್ಕೊಳಗಾಗಿ 9ನೇ ತರಗತಿಯನ್ನು ಪೂರ್ಣಗೊಳಿಸಿ 10ನೇ ತರಗತಿಗೆ ಪ್ರವೇಶಿಸಲು ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

    ಮೃತ ಬಾಲಕನನ್ನು ಧರ್ಮಸ್ಥಳದ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುವ ಗೋವಿಂದ ಗೌಡರ ಪುತ್ರ ಪ್ರಥಮ್ (16) ಎಂದು ಗುರುತಿಸಲಾಗಿದೆ.

    ಮೇ 4ರ ಮಧ್ಯಾಹ್ನ, ಪ್ರಥಮ್ ತನ್ನ ಮನೆಯ ಸಮೀಪ ಆಟವಾಡುವಾಗ ಎದೆನೋವಿನ ಬಗ್ಗೆ ದೂರಿದ್ದಾನೆ. ಕೂಡಲೇ ಅವನನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆಯ ಪ್ರಯತ್ನಗಳ ಹೊರತಾಗಿಯೂ ಅವನನ್ನು ಉಳಿಸಲು ಸಾಧ್ಯವಾಗಲಿಲ್ಲ.

    ಈ ಘಟನೆಯ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • DK Congress Muslim leaders slam HM over violence, Police bias

    Mangaluru: Muslim leaders of the Dakshina Kannada District Congress strongly rebuked Karnataka Home Minister Dr. G. Parameshwara over the rising tide of violence targeting Muslims in the coastal belt and the alleged inaction and bias of the police department—despite the Congress party being in power in the state.

    Dr. Parameshwara had arrived in Mangaluru on Saturday to review the law and order situation following a spate of violent incidents, including targeted attacks and murders in Dakshina Kannada. The unrest has also spread to neighbouring coastal districts, prompting serious concern from community and political leaders.

    The meeting took place at the Circuit House in the presence of District In-Charge Minister Dinesh Gundu Rao, where Congress leaders and workers gathered to raise their collective concerns.

    Prominent leaders—including K.K. Shahul Hameed, former Mangaluru Mayor K. Ashraf, and Suhail Kandak—accused the police of acting under the influence of right-wing elements. They pointed to the recent mob lynching of Ashraf from Kerala in Kuthupady, where they alleged that the police failed to act decisively against the perpetrators.

    Leaders expressed alarm over the increase in attacks on innocent Muslims, especially after the murder of rowdy-sheeter Suhas Shetty, which triggered a wave of attempted murders. Among the victims was Naushad from Kannur, who remains in critical condition in a private hospital ICU. They demanded the government cover Naushad’s medical expenses and bring the culprits to justice.

    The leaders also demanded the arrest of right-wing leader Sharan Pumpwell, who had called for a bandh in Dakshina Kannada, saying the bandh had incited communal tension and economic losses. They insisted that financial damages be recovered from him.

    This time, in a united move, the Muslim Congress leaders had agreed not to meet visiting ministers individually as in previous occasions. Instead, they decided to meet them collectively to voice their grievances in a stronger and coordinated manner. “We expressed our pain, anger, and the injustice happening in the district. We demanded action against biased police officers aligned with right-wing forces and asked for their transfer or suspension,” said one of the leaders present at the meeting.

    According to party sources, the Home Minister listened patiently and assured that their concerns would be addressed. He promised relief and appropriate action in response to the incidents and grievances raised.

    However, the leaders warned that if there is no meaningful response or visible action in the coming days, the Muslim leadership within the party would consult each other and announce their next course of action.

    Also present were KPCC General Secretaries G.A. Bawa and Inayat Ali Mulki, former Zilla Panchayat Vice President M.S. Mohammed, District Wakf Advisory Committee President Abdul Nasir Luckystar, former corporator Rauf Bajal, and others.

    The meeting highlighted the growing unrest among the Congress’s minority leadership in coastal Karnataka and increased pressure on the state government to ensure accountability and restore public confidence in the law enforcement system.

    According to party sources, Home Minister Parameshwara patiently heard the concerns raised and assured the leaders that appropriate and timely action would be taken.

    The meeting underscored growing discontent among Congress’s minority leadership in coastal Karnataka and added pressure on the state government to deliver accountability and restore public confidence in law enforcement.