Author: NewsDesk

  • ಅಕೀಲ್ ಅಹ್ಮದ್ ನದಾಫ್ SSLC ಪರೀಕ್ಷೆಯಲ್ಲಿ 625/625 ಅಂಕ ಗಳಿಸಿ ಸಾಧನೆ

    ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳದ ಬಳಿಯ ನಗರಬೆಟ್ಟ ಗ್ರಾಮದ ಆಕ್ಸ್‌ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಅಕೀಲ್ ಅಹ್ಮದ್ ನದಾಫ್, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಅಂಕಗಳನ್ನು ಗಳಿಸಿ, ರಾಜ್ಯದಲ್ಲಿ 22 ವಿದ್ಯಾರ್ಥಿಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

    ಶಿಕ್ಷಕ ದಂಪತಿಯ ಏಕೈಕ ಮಗನಾದ ಅಕೀಲ್, ತನ್ನ ಶೈಕ್ಷಣಿಕ ಜೀವನದುದ್ದಕ್ಕೂ ಉತ್ತಮ ವಿದ್ಯಾರ್ಥಿ . 8ನೇ ತರಗತಿಯವರೆಗೆ ಅಲಮಟ್ಟಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಓದಿದ ನಂತರ, ಈ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗೆ ಸೇರಿದರು.

    ಅಕೀಲ್‌ರ ತಂದೆ ನಾಸಿರ್ ಅಲಿ, ಮಡಿನಾಳದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ, ತಾಯಿ ಶೆಹನಾಜ್ ಬೇಗಂ, ಮುದ್ದೇಬಿಹಾಳದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದಾರೆ.

    ತನ್ನ ಯಶಸ್ಸಿಗೆ ಸರಿಯಾದ ಮನೋಭಾವ ಮತ್ತು ಸ್ಮಾರ್ಟ್ ಅಧ್ಯಯನವೇ ಕಾರಣ ಎಂದು ಅಕೀಲ್ ಹೇಳಿದ್ದಾರೆ. “ನನಗೆ ಉತ್ತಮ ಶಿಕ್ಷಕರ ಮಾರ್ಗದರ್ಶನ, ಪರೀಕ್ಷೆಗೆ ಸಂಬಂಧಿಸಿದ ತರಬೇತಿ ಮತ್ತು ಪೋಷಕರಿಂದ ಪ್ರೋತ್ಸಾಹ ಸಿಕ್ಕಿತು,” ಎಂದು ಅವರು ತಿಳಿಸಿದ್ದಾರೆ. ಭವಿಷ್ಯದಲ್ಲಿ ವಿಜ್ಞಾನಿಯಾಗಿ ಸಮಾಜದ ಸಮಸ್ಯೆಗಳನ್ನು ಬಗೆಹರಿಸುವ ಗುರಿಯನ್ನು ಅಕೀಲ್ ಹೊಂದಿದ್ದಾರೆ. ಅಕೀಲ್‌ರ ತಂದೆ, ತಮ್ಮ ಮಗ ಗಂಭೀರ ಮತ್ತು ಕಠಿಣ ಪರಿಶ್ರಮಿ ವಿದ್ಯಾರ್ಥಿಯಾಗಿದ್ದು, ತನ್ನ ವಯಸ್ಸಿಗಿಂತ ಮೀರಿದ ಪ್ರಬುದ್ಧತೆಯನ್ನು ಹೊಂದಿದ್ದಾನೆ ಎಂದು ವಿವರಿಸಿದ್ದಾರೆ.

    ಶಾಲಾ ಸಮಿತಿಯ ಅಧ್ಯಕ್ಷ ಎಂ.ಎಸ್. ಪಾಟೀಲ್, ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮತ್ತು ಪ್ರಾಂಶುಪಾಲ ಇಸ್ಮಾಯಿಲ್ ಮನಿಯಾರ್, ವಿದ್ಯಾರ್ಥಿ, ಅವನ ಪೋಷಕರು ಮತ್ತು ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

  • ಕುಂತಿಕಾನ್ ಮತ್ತು ಕಣ್ಣೂರಿನಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಯುವಕರ ಮೇಲೆ ಹಲ್ಲೆ

    ಮಂಗಳೂರು, ಮೇ 2: ಕುಂತಿಕಾನ್ ಮತ್ತು ಕಣ್ಣೂರಿನಲ್ಲಿ ಮೇ 2 ರಂದು ವರದಿಯಾದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಯುವಕರ ಮೇಲೆ ಹಲ್ಲೆ ನಡೆದಿದೆ.

    ಕುಂತಿಕಾನ್‌ನಲ್ಲಿ, ದುಷ್ಕರ್ಮಿಗಳು ಕಾರಿನಲ್ಲಿ ಬಂದು, ಮೀನುಗಾರಿಕೆ ವ್ಯಾಪಾರದಲ್ಲಿ ತೊಡಗಿರುವ ಉಳ್ಳಾಲದ ನಿವಾಸಿ ಲುಕ್ಮಾನ್‌ನನ್ನು ಕೊಲೆಗೆ ಯತ್ನಿಸಿದರು. ಓರ್ವ ಮಹಿಳೆ ಗಟ್ಟಿಯಾಗಿ ಕಿರುಚಿದ್ದರಿಂದ ಸಾರ್ವಜನಿಕರ ಗಮನ ಸೆಳೆದು, ಲುಕ್ಮಾನ್ ಕೂದಲೆಳೆ ಅಂತರದಲ್ಲಿ ಪಾರಾದರು. ಬಳಿಕ ಲುಕ್ಮಾನ್‌ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯ ಕಿರಿಚಾಟದಿಂದ ಇತರರ ಗಮನ ಸೆಳೆದಿದ್ದು, ಲುಕ್ಮಾನ್‌ನ ಜೀವ ಉಳಿಯಲು ಕಾರಣವಾಯಿತು.

    ಇನ್ನೊಂದು ಪ್ರತ್ಯೇಕ ಘಟನೆಯಲ್ಲಿ, ಕಣ್ಣೂರಿನಲ್ಲಿ ಮಾರುಕಟ್ಟೆಗೆ ತೆರಳುತ್ತಿದ್ದ ಮತ್ತೊಬ್ಬ ಯುವಕ ನೌಷದ್‌ನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಅವನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

  • ತೋನ್ಸೆ: ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

    ತೋನ್ಸೆ: ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢಶಾಲೆ 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 74 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 16 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

    ತೂಬಾ ಫಿರ್ದೋಸ್ (610/625) ಶಾಲೆಗೆ ಪ್ರಥಮ, ಶೈಮಾ ನಾಝ್ ಐ. (606/625) ದ್ವಿತೀಯ ಮತ್ತು ರಿದಾ (605/625) ತೃತೀಯ ಸ್ಥಾನ ಪಡೆದಿದ್ದಾರೆ.

  • ಕುಂದಾಪುರ ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ಎಸ್ಎಸ್ಎಲ್‌ಸಿ ಶೇ. 99.05 ಫಲಿತಾಂಶ  

    ಅಪ್ಡೇಟ್:

    • ಕುಂದಾಪುರ ಎಜುಕೇಶನ್‌ ಸೊಸೈಟಿ ಪ್ರವರ್ತಿತ ಎಚ್‌.ಎಮ್‌.ಎಮ್‌. ಮತ್ತು ವಿ. ಕೆ. ಆರ್‌. ಶಾಲೆಯ ಎಸೆಸೆಲ್ಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ ಸಾಯಿಸ್ಪರ್ಶ ಕೆ. 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ ಗಳಿಸಿದ್ದಾರೆ.
    • ಈಕೆಗೆ 623 ಅಂಕಗಳು ಬಂದಿದ್ದವು. ಬಿ. ವಿ. ಜಯಸೂರ್ಯ 623 ಅಂಕಗಳೊಂದಿಗೆ 3ನೇ, ಭಕ್ತಿ ಶೆಟ್ಟಿ ಹಾಗೂ ಪ್ರಿಯಾ 622 ಅಂಕಗಳೊಂದಿಗೆ 4 ನೇ, ವಿನ್ಯಾಸ ಅಡಿಗ ಹಾಗೂ ನಿರೀಕ್ಷಾ ಎನ್‌. ಶೆಟ್ಟಿಗಾರ್‌ 621 ಅಂಕಗಳೊಂದಿಗೆ ಐದನೇ, ಸನ್ವಿತ್‌ ಶೆಟ್ಟಿ 620 ಅಂಕಗಳೊಂದಿಗೆ 6ನೇ , ಸಮನ್ವಿ ಎಸ್‌. 618 ಅಂಕಗಳೊಂದಿಗೆ 8 ನೇ, ಮತ್ತು ಅನ್ವಿತ್‌ ಕೆ. 616 ಅಂಕಗಳೊಂದಿಗೆ 10 ನೇ ರ್‍ಯಾಂಕ್‌ ಗಳಿಸಿದ್ದಾರೆ.
    • ಶಾಲೆಗೆ ಒಟ್ಟು ರಾಜ್ಯಮಟ್ಟದ 9 ರ್‍ಯಾಂಕ್‌ಗಳು ಲಭಿಸಿವೆ ಎಂದು ಶಾಲಾ ಅಧ್ಯಕ್ಷ ಹಾಗೂ ಸಂಚಾಲಕ ಬಿ. ಎಂ. ಸುಕುಮಾರ ಶೆಟ್ಟಿ ಮತ್ತು ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಪ್ರಾಂಶುಪಾಲೆ ಡಾ| ಚಿಂತನಾ ರಾಜೇಶ್‌ ತಿಳಿಸಿದ್ದಾರೆ.

    ಕುಂದಾಪುರ: ಎಜ್ಯುಕೇಶನ್‍ ಸೊಸೈಟಿ ರಿ. ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಈ ಬಾರಿ ಎಸ್. ಎಸ್. ಎಲ್‍. ಸಿ ಪರೀಕ್ಷೆಗೆ 106 ವಿದ್ಯಾರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 41 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಗೆ ಶೇಕಡಾ 99.05 ಫಲಿತಾಂಶ ಲಭಿಸಿರುತ್ತದೆ.

    ವಿದ್ಯಾರ್ಥಿಗಳಾದ  ಸಾಯಿಸ್ಪರ್ಶ ಕೆ. 623 (99.68%), ಬಿ.ವಿ. ಜಯಸೂರ್ಯ 622 (99.52%), ಪ್ರಿಯಾ 622 (99.52%), ಭಕ್ತಿ ಶೆಟ್ಟಿ 621 (99.36%), ನಿರೀಕ್ಷಾ ಎನ್‌. ಶೆಟ್ಟಿಗಾರ್‌ 621 (99.36%), ಸನ್ವಿತ್‌ ಶೆಟ್ಟಿ 619 (99.04%), ವಿನ್ಯಾಸ್‌ ಅಡಿಗ (619 (99.04%), ಸಮನ್ವಿ ಎಸ್‌ 616 (98.56%) ಅನ್ವಿತ್‌ ಕೆ. 615 (98.405) ಸಿಂಚನಾ ಎಸ್‌. ಶೆಟ್ಟಿ  614( 98.24%)  ನಿಹಾಲ್‌ ಅಮಿನ್‌  610 ( 97.60%) ರವಿನಾ ಬಿ. 610 ( 97.60%)  ಅದ್ವೈತ್‌ ಟಿ 609 (97.44%)  ರಾಘವೇಂದ್ರ  ಅಡಿಗ 609 (97.44%) ಆಶ್ಲೇಷ್‌ ಎನ್‌. 607 (97.12%), ಪ್ರೀತಿ 606 (96.96%) ಅದಿತಿ ಅಡಿಗ 605 (96.80%) ಲಹರಿ 605 (96.80%), ಸುಭಿಕ್ಷಾ 605 (96.80%), ಕೀರ್ತನಾ ವಿ. ಶೆಟ್ಟಿ 604 (96.64%) ಸೃಜನಿ ಎಸ್. 603, ತನ್ಮಯಿ ಹೊಳ್ಳ 603, ಸುಮುಖ 601, ಪೂರ್ವಿಕಾ ರಾವ್‍ 601, ಶ್ರೀನಂದನ್‍ ಉಪಾಧ್ಯಾಯ 599, ವರೇಣ್ಯ ಶರ್ಮಾ ಎನ್‍. ವಿ. 599, ಭುವಿ ಆರ್. ಗಾಣಿಗ 599, ಮನ್ವಿತ್‍ ಜೆ. ಶೆಟ್ಟಿ 598, ರಿತೇಶ್‍ 598, ಐಶಾತುಲ್‍ ಬುಶ್ರಾ 596, ರಿಶಿತಾ ಎಸ್‍. 596, ಬ್ರಾಹ್ಮೀ ಉಡುಪ 594, ಧನ್ಯ ರಾಯ್ಕರ್‍ 594 ಅಂಕ ಗಳಿಸಿದ್ದಾರೆ.  

  • Anjuman English Medium School Published its SSLC Result 2024-25; Mubashira Muskan tops with 88.96%

    Anjuman English Medium School published its SSLC Results for the academic year 2024-2025. for This year, school has achieved 75% and Mubashira Muskan tops the school with 556/625 marks (88.96%).

    Out of 20 students appeared, 1 student scored distiction, 11 Fist Class and 3 students scored second class.

    School Toppers

    1. Mubashira Muskan – 556 (88.96%)
    2. Dangi Safa – 487 (77.92%)
    3. Mohammed Anfal – 478(76.48%)

    Gangolli News Team Congratulates all the student who appeared, and Good luck for the future endeavors.

  • Touheed English Medium School Secures Consecutive 100% SSLC Results; Fathima Zia Tops with 96.16%

    Gangolli: Touheed English medium School has secured 100% result in 2024-25 SSLC exam.

    Out of 45 students appeared 16 of them got distinction, 23 First Class and 6 Second Class.

    Total of 18 Boys and 27 Girls appeared for SSLC exam conducted.

    Toppers List

    1. Fathima Zia – 601 marks (96.16%)
      Daughter of Mohammed Javid M H and Aysha Siddiqua
    2. Amna Mubsira M H – 598 marks (95.68%)
      Daughter of Mahamood Muazzam M H and Fathima S A
    3. Ayesha Sameeya – 597 marks (95.52%)
      Daughter of Shaikh Mohammed Riyaz and Sabeena Begum
    4. Zayesha Tabassum Malga – 595 marks (95.20%)
      Daughter of Malga Mohammed Zakir and Bibi Sameera
    5. Nidha – 593 marks (94.88%)
      Daughter of Munthaseeb and Shabanam
    6. Maryam Mahek Nakhuda – 591 marks (94.56%)
      Daughter of Mohammed Faheem Nakhuda and Fathima Sugra
    7. Abdullah Hisan Moulana – 582 marks (93.12%)
      Son of Moulana Noorul Hassan and Shahina Banu
    8. Ayesha Rifa – 582 marks (93.12%)
      Daughter of Raquib Hassan Moulana and Gulshan Raquib Hassan Moulana
    9. Mohammed Zayan – 574 marks (91.84%)
      Son of Riyaz Ahamed and Musrat
    10. Aisha Muskan – 574 marks (91.84%)
      Daughter of N Abdulla and Beebi Parveen
    11. Nidha Naaz – 573 marks (91.68%)
      Daughter of Mohammed Naushad and Raziya Naushad
    12. Fathima Simin – 563 marks (90.08%)
      Daughter of Syed Iqbal and Indalib
    13. Ahmed Afaf M H – 562 marks (89.92%)
      Son of M H Mohammed Tauseef and Muzaifa Habiba
    14. Abdur Rahman Madical – 537 marks (85.92%)
      Son of Abdul Sattar Madical and Rubeena Abdul Sattar
    15. Fouzan Khan – 536 marks (85.76%)
      Son of Anwar Hussain and Fathima Farha
    16. Fathima Hiram – 533 marks (85.28%)
      Daughter of Abdul Wahid H and Shabhana Banu

    Gangolli News Team Congratulates all of the student and wish the best for their future endeavors.

  • ಉಡುಪಿ: ಬಾಡಿಗೆ ನೆಪದಲ್ಲಿ ರಿಕ್ಷಾ ಚಾಲಕನ ಕೊಲೆ ಯತ್ನ, SDPI ಜಿಲ್ಲಾಧ್ಯಕ್ಷರಿಂದ ಕಠಿಣ ಕ್ರಮಕ್ಕೆ ಅಗ್ರಹ

    “ಸುಹಾಸ್ ಶೆಟ್ಟಿ ಕೊಲೆ ನೆಪವನ್ನ ಇಟ್ಟುಕೊಂಡು ಸಂಘಪಾರಿವಾರಾ ಉಡುಪಿ ಜಿಲ್ಲೆಯ ಶಾಂತಿಯನ್ನು ಕಡಡಲು ಪ್ರಯತ್ನಿಸುತ್ತಿದ್ದು, ನಿನ್ನೆ ರಾತ್ರಿ ಅಮಾಯಕ ರಿಕ್ಷಾ ಚಾಲಕಾರೊಬ್ಬರ ಕೊಲೆಗೆ ವಿಫಲ ಯತ್ನ ನಡೆಸಿದ್ದಾರೆ. ಪೊಲೀಸ್ ಇಲಾಖೆ ಈ ಸಂಚಿನ ಹಿಂದೆ ಇರುವ ಕಾಣದ ಕೈಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು“ ಎಂದು ಎಸ್.ಡಿ.ಪಿ.ಐ ಉಡುಪಿ ಜಿಲ್ಲಾಧ್ಯಕ್ಷರು ಆಸೀಫ್ ಕೋಟೇಶ್ವರ ಹೇಳಿದ್ದಾರೆ.

    ಆಟೋ ರಿಕ್ಷಾ ಚಾಲಕನೋರ್ವರಿಗೆ ಕರೆ ಮಾಡಿ ಬಾಡಿಗೆ ಇದೆ ಕರೆಯಿಸಿಕೊಂಡು ದುಷ್ಕರ್ಮಿಗಳು ಕೊಲೆ ಮಾಡಲು ಯತ್ನಿಸಿರುವ ಘಟನೆ ಆತ್ರಾಡಿ ಗ್ಯಾಸ್‌ ಪೆಟ್ರೋಲ್‌ ಬಂಕ್‌ ಬಳಿ ಗುರುವಾರ ರಾತ್ರಿ ನಡೆದಿದೆ.

    ಆಟೋ ರಿಕ್ಷಾ ಚಾಲಕ ಬಡಗಬೆಟ್ಟು ನಿವಾಸಿ ಅಬುಬಕ್ಕರ್‌ (50), ಎನ್ನುವರರಿಗೆ ಅವರ ಪರಿಚಯದ‌ ದಿನೇಶ್ ಎನ್ನುವವರು ಕರೆ ಮಾಡಿ ಮದಗದಿಂದ ಆತ್ರಾಡಿಗೆ ಬಾಡಿಗೆ ಬರಲು ತಿಳಿಸಿದ್ದಾರೆ. ಈ ಹಿನ್ನೆಲೆ ಅಬುಬಕ್ಕರ್‌ ರಿಕ್ಷಾದಲ್ಲಿ ಆತ್ರಾಡಿ ಪೆಟ್ರೋಲ್‌ ಬಂಕ್‌ ಬಳಿ ಮೋಟಾರ್‌ ಸೈಕಲ್‌ ನಲ್ಲಿ ಹಿಂದಿನಿಂದ ಬಂದ ಇಬ್ಬರು ದುಷ್ಕರ್ಮಿಗಳು ರಿಕ್ಷಾ ಹಿಂಬಾಲಿಸಿಕೊಂಡು ಬಂದು ಗಾಡಿಯನ್ನು ನಿಲ್ಲಿಸುವಂತೆ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ.

    ಈ ವೇಳೆ ಅಬುಬಕ್ಕರ್‌ ಗಾಡಿಯನ್ನು ನಿಲ್ಲಿಸದೇ ಮುಂದೆ ಬಂದು ಶೇಡಿಗುಡ್ಡೆ ಬಳಿ ರಸ್ತೆಯಲ್ಲಿ ಆಟೋವನ್ನು ನಿಲ್ಲಿಸಿ ಓಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಮೋಟಾರ್‌ ಸೈಕಲ್‌ನಲ್ಲಿದ್ದ ಓರ್ವ ವ್ಯಕ್ತಿ ತನ್ನ ಕೈಯಲ್ಲಿದ್ದ ತಲವಾರಿನಿಂದ ಅಬುಬಕ್ಕರ್‌ ತಲೆಗೆ ಬೀಸಿದ್ದು, ತಲವಾರಿನ ಹೊಡೆತದಿಂದ ಅಬುಬಕ್ಕರ್‌ ತಪ್ಪಿಸಿಕೊಂಡಿದ್ದಾರೆ.

    ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನಲೆಯೆಲ್ಲಿ ಜಿಲ್ಲೆಯ ಭಾಗಗಳಲ್ಲಿ ಹಲ್ಲೆ ಮತ್ತು ಕೊಲೆ ಯತ್ನ ಸುದ್ದಿ ಬರ್ತಾ ಇವೆ.

  • ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಬೈಂದೂರು ಯುವ ಕಾಂಗ್ರೆಸ್ ಪ್ರತಿಭಟನೆ

    ಬೈಂದೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನೆ ಹಾಗೂ ಸಂತಾಪ ಸಭೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.

    ಮಾಜಿ ಶಾಸಕರಾದ ಕೆ. ಗೋಪಾಲ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ. ಪೂಜಾರಿ, ಬೈಂದೂರು ಪಪಂ ನಾಮನಿರ್ದೇಶಿತ ಸದಸ್ಯ ನಾಗರಾಜ ಗಾಣಿಗ, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ವಿಕಾಸ್ ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಬೈಂದೂರು ಬ್ಲಾಕ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಬೀರ್‌ ಬೈಂದೂರು, ಕಿಸಾನ್‌ ಘಟಕದ ಅಧ್ಯಕ್ಷ ವೀರಭದ್ರ ಗಾಣಿಗ, ಸುಬ್ರಹ್ಮಣ್ಯ ಪೂಜಾರಿ ಯಡ್ತರೆ, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಉಪಾಧ್ಯಕ್ಷರಾದ ಕೆ. ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಮೋದ್ ಪೂಜಾರಿ ನಾವುಂದ, ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ರೋಶನ್ ಶೆಟ್ಟಿ ಹಾಗೂ ವಿವಿಧ ನಾಯಕರು ಉಪಸ್ಥಿತರಿದ್ದರು.

  • ಇಂದು ನಡೆಯಬೇಕಿದ್ದ ಎಲಿಮಲೆ ವಾರ್ಷಿಕ ಸ್ವಲಾತ್ ಹಾಗೂ ಹಿಫ್ಲುಲ್ ಕುರ್ಆನ್ ಉದ್ಘಾಟನೆ ಮುಂದೂಡಿಕೆ

    ಎಲಿಮಲೆ: ಬದ್ರಿಯಾ ಜಮಾಅತ್ ಕಮಿಟಿ ಎಲಿಮಲೆ ಸುಳ್ಯ ತಾಲೂಕು ಇದರ ವತಿಯಿಂದ ಇಂದು ನಡೆಯಬೇಕಿದ್ದ ಆಧ್ಯಾತ್ಮಿಕ ನೇತಾರ ಸೈಯಿದ್ ಕುಂಜಿಲಂ ತಂಙಳ್ ಇವರ ನೇತೃತ್ವದಲ್ಲಿ ನಡೆಸಿಕೊಂಡು ಬರುತ್ತಿರುವ ಮಾಸಿಕ ಸ್ವಲಾತ್ ಇದರ ವಾರ್ಷಿಕೋತ್ಸವ , ಹಿಫ್ಲುಲ್ ಕುರ್ಆನ್ ಉದ್ಘಾಟನೆ ಹಾಗೂ ಇಕ್ರಾಮುಸ್ಸುನ್ನ ದರ್ಸ್ ಇದರ ಶೈಕ್ಷಣಿಕ ವರ್ಷದ ಉದ್ಘಾಟನೆ ಕಾರ್ಯಕ್ರಮವನ್ನು ದ.ಕ ಜಿಲ್ಲೆಯಾಧ್ಯಂತ ನಿಷೇಧಾಜ್ಞೆ ಇರವ ಕಾರಣ ಮುಂದೂಡಲಾಗಿದೆ.

    ಕಾರ್ಯಕ್ರಮದ ಬಗ್ಗೆ ಮುಂದೆ ತಿಳಿಸಲಾಗುವುದು. ಎಲ್ಲರೂ ಸಹಕರಿಸಿ ಎಂದು ಸಂಘಟಕರು ತಿಳಿಸಿದ್ದಾರೆ.

  • ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಕಾರ್ಕಳದ ಸ್ವಸ್ತಿ ಕಾಮತ್ ಗೆ 625 ಕ್ಕೆ 625 ಅಂಕ !

    ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಸಾಲಿಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ವಿದ್ಯಾರ್ಥಿನಿ ಕೂಡ ಸೇರ್ಪಡೆಯಾಗಿದ್ದಾರೆ.
    ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಗಣಿತ ನಗರದ ಜ್ಞಾನಸುಧಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಸ್ವಸ್ತಿ ಕಾಮತ್ 625 ಮಾರ್ಕ್ ಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನಿಯಾಗಿದ್ದಾಳೆ.