ಕೈಕಂಬ: ನಿನ್ನೆ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯೆಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ, ದಕ್ಷಿಣ ಕನ್ನಡ ಜಿಲ್ಲೆಯೆಲ್ಲಿ ವಿಶ್ವ ಹಿಂದೂ ಪರಿಷದ್ ಬಂದ್ ಕೆ ಕರೆ ಕೊಟ್ಟಿದೆ, ಹಾಗೂ ಸೆಕ್ಷನ್ 144 ಜಾರಿಯೆಲ್ಲಿದೆ.
https://youtu.be/Hjx0Fyi6Nro?si=l4TpH20aPijPRcoK
ಅದೇ ಸಮಯದಲ್ಲಿ ಜಿಲ್ಲೆಗಳ ನಾನಾ ಭಾಗದಲ್ಲಿ ಹಲ್ಲೆ, ಕೊಲೆ ಯತ್ನದ ಸುದ್ದಿಗಳು ಬರ್ತಾ ಇವೆ.
ಮುಸ್ಲಿಂ ಮಹಿಳೆಯರು ಆಟೋರಿಕ್ಷದಲ್ಲಿ ಪ್ರಯಾಣಿಸುತ್ತಿದ್ದಾಗ ಹಿಂದೂ ಕಾರ್ಯಕರ್ತರು ರಿಕ್ಷಾ ಅಡ್ಡಗಟ್ಟಿ ಹಲ್ಲೆಗೆ ಪ್ರಯತ್ನಿಸುತ್ತಿರುವ ದ್ರಿಶ್ಯ ವಿಡಿಯೋದಲ್ಲಿ ಕಂಡು ಬಂದಿದೆ.
ಪೊಲೀಸ್ ಸಿಬ್ಬಂಧಿಗಳು ಹಲ್ಲೆ ತಡೆಯಲು ಪ್ರಯತ್ನಿಸುತ್ತಿರುವಾಗ ಅವರ ಮೇಲೆನೋ ಹಲ್ಲೆ ನಡೆದಿದೆ.
ಹಿರಿಯಡ್ಕ: ಆಟೋ ರಿಕ್ಷಾ ಚಾಲಕನೋರ್ವರಿಗೆ ಕರೆ ಮಾಡಿ ಬಾಡಿಗೆ ಇದೆ ಕರೆಯಿಸಿಕೊಂಡು ದುಷ್ಕರ್ಮಿಗಳು ಕೊಲೆ ಮಾಡಲು ಯತ್ನಿಸಿರುವ ಘಟನೆ ಆತ್ರಾಡಿ ಗ್ಯಾಸ್ ಪೆಟ್ರೋಲ್ ಬಂಕ್ ಬಳಿ ಗುರುವಾರ ರಾತ್ರಿ ನಡೆದಿದೆ.
ಆಟೋ ರಿಕ್ಷಾ ಚಾಲಕ ಬಡಗಬೆಟ್ಟು ನಿವಾಸಿ ಅಬುಬಕ್ಕರ್ (50), ಎನ್ನುವರರಿಗೆ ಅವರ ಪರಿಚಯದ ದಿನೇಶ್ ಎನ್ನುವವರು ಕರೆ ಮಾಡಿ ಮದಗದಿಂದ ಆತ್ರಾಡಿಗೆ ಬಾಡಿಗೆ ಬರಲು ತಿಳಿಸಿದ್ದಾರೆ. ಈ ಹಿನ್ನೆಲೆ ಅಬುಬಕ್ಕರ್ ರಿಕ್ಷಾದಲ್ಲಿ ಆತ್ರಾಡಿ ಪೆಟ್ರೋಲ್ ಬಂಕ್ ಬಳಿ ಮೋಟಾರ್ ಸೈಕಲ್ ನಲ್ಲಿ ಹಿಂದಿನಿಂದ ಬಂದ ಇಬ್ಬರು ದುಷ್ಕರ್ಮಿಗಳು ರಿಕ್ಷಾ ಹಿಂಬಾಲಿಸಿಕೊಂಡು ಬಂದು ಗಾಡಿಯನ್ನು ನಿಲ್ಲಿಸುವಂತೆ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ.
ಈ ವೇಳೆ ಅಬುಬಕ್ಕರ್ ಗಾಡಿಯನ್ನು ನಿಲ್ಲಿಸದೇ ಮುಂದೆ ಬಂದು ಶೇಡಿಗುಡ್ಡೆ ಬಳಿ ರಸ್ತೆಯಲ್ಲಿ ಆಟೋವನ್ನು ನಿಲ್ಲಿಸಿ ಓಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಮೋಟಾರ್ ಸೈಕಲ್ನಲ್ಲಿದ್ದ ಓರ್ವ ವ್ಯಕ್ತಿ ತನ್ನ ಕೈಯಲ್ಲಿದ್ದ ತಲವಾರಿನಿಂದ ಅಬುಬಕ್ಕರ್ ತಲೆಗೆ ಬೀಸಿದ್ದು, ತಲವಾರಿನ ಹೊಡೆತದಿಂದ ಅಬುಬಕ್ಕರ್ ತಪ್ಪಿಸಿಕೊಂಡಿದ್ದಾರೆ.
ಬೈಕ್ನಲ್ಲಿದ್ದ ಇನ್ನೋರ್ವ ವ್ಯಕ್ತಿ ಬಾಟಲಿಯನ್ನು ಕೈಯಲ್ಲಿ ಹಿಡಿದು ಆಟೋ ರಿಕ್ಷಾದ ಮುಂಭಾಗ ಗ್ಲಾಸಿಗೆ ಹೊಡೆದಿದ್ದಾನೆ. ಕೊಲೆ ಮಾಡುವ ಉದ್ದೇಶದಿಂದ ಅವರು ಹೀಗೆ ಮಾಡಿದ್ದಾರೆಂಬುದನ್ನು ಅರಿತ ಅಬುಬಕ್ಕರ್ ಅಲ್ಲೇ ಪಕ್ಕದಲ್ಲಿದ್ದ ಕಂಪೌಡನ್ನು ಜಿಗಿದು ಓಡಿ ಹೋಗಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲು ಪ್ರಕರಣ ದಾಖಲಾಗಿದ್ದು, ಅಬುಬಕ್ಕರ್ ನೀಡಿದ ದೂರಿನ ಅನ್ವಯ ಆರೋಪಿಗಳಾದ ಹಿರಿಯಡ್ಕದ ಬೊಮ್ಮರಬೆಟ್ಟುವಿನ ಸಂದೇಶ್(31), ಹಿರಿಯಡ್ಕ ಧರ್ಕಸ್ನ ಸುಶಾಂತ್(32) ಅವರನ್ನು ಬಂಧಿಸಲಾಗಿದೆ.
ಬೆಂಗಳೂರು, ಮೇ. 02:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಿದ್ದಾರೆ . ಮಧ್ಯಾಹ್ನ 12.30ರ ನಂತರ ವೆಬ್ಸೈಟ್ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ https://kseab.karnataka.gov.in/ ಅಥವಾ https://karresults.nic.in/ ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿದೆ.
ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆಸಲಾದ ಎಸ್ಎಸ್ಎಲ್ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.
2024-25 ಸಾಲಿನ ಫಾಲಿತಾಂಶ 65.14% ರೆಗ್ಯುಲರ್ ಫ್ರೆಷೆರ್ಸ್ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಸೇರಿ (ಮರು ಪರೀಕ್ಷೆ, ಪ್ರೈವೇಟ್ ) 62.34% ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
2024-2025 ಸಾಲಿನಲ್ಲಿ 22 ವಿದ್ಯಾರ್ಥಿಗಳು 625/625 ಮಾರ್ಕ್ಸ್ ತಕೊಂಡಿದ್ದಾರೆ.
ಮರು ಪರೀಕ್ಷಣೆ (re-evaluvation) ಗೆ ಅರ್ಜಿ ಈ ಬಾರಿ android ಆಪ್ ಮೂಲಕ ಸ್ಕ್ಯಾನ್ ಮಾಡಿ ಸಲ್ಲಿಸಬಹುದಾಗಿದೆ.
ಮರು ಎಕ್ಸಾಮ್ (2nd re-exam) 26-05-2025 – 02-06-2025 ವರೆಗೆ ನಡೆಯಲಿದೆ .
ಮೂರನೇ ಎಕ್ಸಾಮ್ (3rd re-exam) 23-06-2025 – 03-06-2025 ವರೆಗೆ ನಡೆಯಲಿದೆ ಅಂತ ಮಧು ಬಂಗಾರಪ್ಪ ಪತ್ರಿಕಾಘೋಷ್ಟಿಯೆಲ್ಲಿ ಹೇಳಿದ್ದಾರೆ.
ಮಂಗಳೂರು, ಮೇ 2: ಮೇ 1 ರಂದು ಬಜ್ಪೆಯಲ್ಲಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಅವರ ಭೀಕರ ಹತ್ಯೆಯ ನಂತರ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆರ್. ಹಿತೇಂದ್ರ ಅವರು ತನಿಖೆ ಮತ್ತು ಕಾನೂನು ಜಾರಿ ಪ್ರತಿಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲು ಮಂಗಳೂರಿಗೆ ಆಗಮಿಸಿದರು.
ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಎಡಿಜಿಪಿ ಹಿತೇಂದ್ರ, “ಆರೋಪಿಗಳ ಬಗ್ಗೆ ನಮಗೆ ಸುಳಿವು ಸಿಕ್ಕಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಪರಾಧಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಹೇಳಿದರು. ಘಟನೆಗೆ ಪ್ರತಿಕ್ರಿಯೆಯಾಗಿ ಅಳವಡಿಸಲಾದ ಭದ್ರತಾ ಕ್ರಮಗಳನ್ನು ಅವರು ಮತ್ತಷ್ಟು ವಿವರಿಸಿದರು: “ಬಂದೋಬಸ್ತ್ಗೆ ಸಂಬಂಧಿಸಿದಂತೆ, 22 ಕೆಎಸ್ಆರ್ಪಿ ತುಕಡಿಗಳು, 1,000 ಪೊಲೀಸ್ ಅಧಿಕಾರಿಗಳು ಮತ್ತು ಐದು ಎಸ್ಪಿ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.”
ಸಾರ್ವಜನಿಕರು ವದಂತಿಗಳನ್ನು ನಂಬಬೇಡಿ ಎಂದು ಹಿತೇಂದ್ರ ಒತ್ತಾಯಿಸಿದರು ಮತ್ತು ಪೊಲೀಸರು ಅಗತ್ಯ ಮಾಹಿತಿಯನ್ನು ಒದಗಿಸುತ್ತಾರೆ ಎಂದು ಭರವಸೆ ನೀಡಿದರು.
ಮೂರು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರೌಡಿ ಶೀಟರ್ ಶೆಟ್ಟಿ, ಸಹಚರರೊಂದಿಗೆ ಪ್ರಯಾಣಿಸುತ್ತಿದ್ದಾಗ ಕಿನ್ನಿಪದವು ಕ್ರಾಸ್ ಬಳಿ 5–6 ಜನರ ಗುಂಪೊಂದು ಹಲ್ಲೆ ನಡೆಸಿತ್ತು. ಸರಕು ಸಾಗಣೆ ವಾಹನ ಮತ್ತು ಕಾರನ್ನು ಬಳಸಿ ಶೆಟ್ಟಿ ಅವರ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ನಂತರ ಅವರ ಮೇಲೆ ಮಾರಕಾಸ್ತ್ರಗಳು ಮತ್ತು ಇತರ ಆಯುಧಗಳಿಂದ ಹಲ್ಲೆ ನಡೆಸಿ ಗಂಭೀರ ಗಾಯಗಳನ್ನುಂಟುಮಾಡಿದರು. ಸುಹಾಸ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೆ ಸಾವಾನಪ್ಪಿದಾನೆ.
ಮಂಗಳೂರು, ಮೇ 2: ತೊಕ್ಕೊಟ್ಟುವಿನ ಮೇ ಬಾರ್ ಬಳಿ ತಡರಾತ್ರಿ ನಡೆದ ಘಟನೆಯಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಲಾಗಿದೆ.
ಹಲ್ಲೆಗೋಳಗಾದ ವ್ಯಕ್ತಿಯನ್ನು ಅಲೆಕಲ ನಿವಾಸಿ ಫೈಜಲ್ ಎಂದು ಗುರುತಿಸಲಾಗಿದೆ.
ಸೋಮೇಶ್ವರದಲ್ಲಿರುವ ತನ್ನ ಪತ್ನಿಯ ಮನೆಯಿಂದ ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟ್ಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತೊಕ್ಕೊಟ್ಟು ಬಳಿ ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದರು.
ಮಂಗಳೂರು:ಬಜ್ಪೆಯಲ್ಲಿ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಳ್ಳಲಿದೆ ಎನ್ನಲಾಗಿದೆ.
ಬಜರಂಗದಳ ಗೋರಕ್ಷಾ ವಿಭಾಗದ ಸದಸ್ಯ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಘಟನೆ ನಡೆದ ಹಿನ್ನೆಲೆಯಲ್ಲಿ ಸದ್ಯ ದ.ಕ ಜಿಲ್ಲೆಯಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಇದೇ ನಡುವೆ ಮಂಗಳೂರಿನ ಹಂಪನಕಟ್ಟೆಯಲ್ಲಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟದಿಂದ ಮೂರು ಬಸ್ ಗಳಿಗೆ ಹಾನಿ ಉಂಟಾಗಿದೆ ಎನ್ನಲಾಗಿದೆ.
ಸದ್ಯ ಮುಂಜಾನೆ ಮಂಗಳೂರಿಗೆ ಆಗಮಿಸಿರುವ ನಾಗರಿಕರು ಸದ್ಯ ಹಠಾತ್ ಬಂದ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಘಟನೆ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಸೆಕ್ಷನ್ ಬಿಎನ್ಎಸ್ ಸೆಕ್ಷನ್ 163 ಅನ್ವಯ ಸೆಕ್ಷನ್ ಜಾರಿಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ. ಮೇ 6ರ ವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ.
2022 ರಲ್ಲಿ ಬಂಧನಕ್ಕೊಳಗಾದಾಗ 29 ವರ್ಷದ ಭಜರಂಗದಳ ಗೋ ರಕ್ಷಾ ವಿಭಾಗದ ಸದಸ್ಯ ಸುಹಾಸ್ ಶೆಟ್ಟಿ, ಜುಲೈ 28, 2022 ರಂದು ಮಂಗಳೂರಿನ ಸುರತ್ಕಲ್ನಲ್ಲಿ ನಡೆದ ಮೊಹಮ್ಮದ್ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಲ್ಪಟ್ಟಿದ್ದ. ಮಂಗಳೂರು ನಗರ ಪೊಲೀಸರು ಆತನನ್ನು ಕ್ರಿಮಿನಲ್ ದಾಖಲೆ ಹೊಂದಿರುವ ರೌಡಿ ಶೀಟರ್ ಎಂದು ಬಣ್ಣಿಸಿದ್ದಾರೆ, ಇದರಲ್ಲಿ ಮುಸ್ಲಿಂ ಪುರುಷರ ಮೇಲಿನ ಹಲ್ಲೆ ಮತ್ತು 2010 ರ ಕೊಲೆ ಪ್ರಕರಣದಂತಹ ನಾಲ್ಕು ಹಿಂದಿನ ಪ್ರಕರಣಗಳು ಸೇರಿವೆ.
Mugshot from Fazil Murder Case – Suhas in Top Center
ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಅವರ ಪ್ರಕಾರ, ಶೆಟ್ಟಿ ಫಜಿಲ್ ಮೇಲಿನ ದಾಳಿಯನ್ನು ಸಂಘಟಿಸಿದರು, ಇದರಲ್ಲಿ ಮೋಹನ್ ಸಿಂಗ್ (26), ಗಿರಿಧರ್ (23), ಅಭಿಷೇಕ್ (21), ಶ್ರೀನಿವಾಸ್ (23), ಮತ್ತು ದೀಕ್ಷಿತ್ (21) ಎಂಬ ಐದು ಇತರ ಸಹಚರರು ಸೇರಿದ್ದಾರೆ – ಜೊತೆಗೆ ಅಪರಾಧಕ್ಕೆ ಬಳಸಿದ ಕಾರನ್ನು ಒದಗಿಸಿದ ಅಜಿತ್ ಕ್ರಾಸ್ತಾ (44) ಸೇರಿದ್ದಾರೆ. ಫಜಿಲ್ ಗುಂಪಿನ ಹೆಚ್ಚಿನವರಿಗೆ ವೈಯಕ್ತಿಕವಾಗಿ ತಿಳಿದಿಲ್ಲದಿದ್ದರೂ, ಯಾರನ್ನಾದರೂ ಕೊಲ್ಲುವ ಉದ್ದೇಶದಿಂದ ಶೆಟ್ಟಿ ಜುಲೈ 26, 2022 ರಿಂದ ಮೂರು ದಿನಗಳಲ್ಲಿ ಕೊಲೆಯನ್ನು ಯೋಜಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶೆಟ್ಟಿ, ಮೋಹನ್ ಮತ್ತು ಅಭಿಷೇಕ್ ನೇರವಾಗಿ ಬಟ್ಟೆ ಅಂಗಡಿಯ ಹೊರಗೆ ಫಾಜಿಲ್ ಅವರನ್ನು ಕಡಿದು ಕೊಂದಿದ್ದಾರೆ.
ಹಿಂದೂ ಸಂಘಟನೆಗಳೊಂದಿಗಿನ ಅವರ ಸಂಬಂಧದ ಬಗ್ಗೆ, ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮಂಗಳೂರಿನ ಕಾರ್ಯದರ್ಶಿ ಶರಣ್ ಪಂಪ್ವೆಲ್, ಸುಹಾಸ್ ಶೆಟ್ಟಿ ಅಧಿಕೃತ ಸದಸ್ಯರಲ್ಲದಿದ್ದರೂ ವಿಎಚ್ಪಿ ಮತ್ತು ಬಜರಂಗದಳ ಆಯೋಜಿಸಿದ ಕಾರ್ಯಕ್ರಮಗಳಿಗೆ ಆಗಾಗ್ಗೆ ಹಾಜರಾಗುತ್ತಿದ್ದರು ಎಂದು ದೃಢಪಡಿಸಿದರು. ವಿಎಚ್ಪಿ ಶೆಟ್ಟಿಗೆ ಕೊಲೆ ಮಾಡಲು ಸೂಚಿಸಿಲ್ಲ ಆದರೆ ಈ ಕೃತ್ಯ ಪ್ರತೀಕಾರವಾಗಿರಬಹುದು, ಬಹುಶಃ ಜುಲೈ 26, 2022 ರಂದು ಎರಡು ದಿನಗಳ ಹಿಂದೆ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಸಂಬಂಧಿಸಿರಬಹುದು ಎಂದು ಪಂಪ್ವೆಲ್ ಹೇಳಿದ್ದರು.
ಹತ್ಯೆ
ಪೊಲೀಸರ ಮಾಹಿತಿ ಪ್ರಕಾರ, ಸುಹಾಸ್ ಶೆಟ್ಟಿ ತಮ್ಮ ಸ್ನೇಹಿತರಾದ ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಮತ್ತು ಶಶಾಂಕ್ ಅವರೊಂದಿಗೆ ಕಾರಿನಲ್ಲಿ (KA-12-MB-3731) ಪ್ರಯಾಣಿಸುತ್ತಿದ್ದರು. ಈ ವೇಳೆ ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಬಂದ ಐದರಿಂದ ಆರು ಮಂದಿ ದುಷ್ಕರ್ಮಿಗಳ ಗುಂಪು ಅವರನ್ನು ಅಡ್ಡಗಟ್ಟಿದೆ.
ನಂತರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಸುಹಾಸ್ ಶೆಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಮಂಗಳೂರು ನಗರ ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕೊಲೆಯಾದ ರೌಡಿ ಶೀಟರ್ ಆಗಿರುವ ಸುಹಾಸ್ ಶೆಟ್ಟಿಯ ಮೇಲೆ ಎರಡು ಕೊಲೆ ಪ್ರಕರಣಗಳಿವೆ. ಆತ ಮುಖ್ಯವಾಗಿ 2022ರ ಫಾಝಿಲ್ ಕೊಲೆ ಪ್ರಕರಣದ ಮೊದಲ ಆರೋಪಿ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.
ನಗರದ ಎ.ಜೆ. ಆಸ್ಪತ್ರೆಯ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಗುರುವಾರ ರಾತ್ರಿ ಸುಮಾರು 8.30ರಿಂದ 8.40 ರ ನಡುವೆ ಬಜ್ಪೆ ಪೊಲೀಸ್ ಠಾಣೆಯ ಕಿನ್ನಿಪದವಿನಲ್ಲಿ ಘಟನೆ ನಡೆದಿದೆ. ರೌಡಿ ಶೀಟರ್ ಆಗಿರುವ ಸುಹಾಸ್ ಶೆಟ್ಟಿ ತನ್ನ ಸ್ನೇಹಿತರ ಜೊತೆ ಇನ್ನೋವಾ ಕಾರಿನಲ್ಲಿ ಹೋಗುತ್ತಿದ್ದಾಗ ಎರಡು ವಾಹನಗಳಿಂದ ಅಡ್ಡಗಟ್ಟಲಾಗಿದೆ. ಮೊದಲು ಗೂಡ್ಸ್ ವಾಹನದಲ್ಲಿ ದಾಳಿ ಮಾಡಲಾಯಿತು. ಬಳಿಕ ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ ಆರೋಪಿಗಳು ಇಳಿದು ಸುಹಾಸ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಅವರ ಗುರಿ ಸುಹಾಸ್ ಶೆಟ್ಟಿಯೇ ಆಗಿದ್ದ”, ಎಂದರು.
“ತಕ್ಷಣವೇ ಸುಹಾಸ್ ನನ್ನು ಮಂಗಳೂರಿನ ಎ. ಜೆ. ಆಸ್ಪತ್ರೆಗೆ ದಾಖಲಿಸಲಾಯಿತು. ಆ ಸಂದರ್ಭ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂತು. ಘಟನೆಯ ವೇಳೆ ಸುಹಾಸ್ ಜೊತೆಗಿದ್ದ ಸ್ನೇಹಿತರ ಪೈಕಿ ಇಬ್ಬರಿಗೆ ಗಾಯಗಳಾಗಿವೆ. ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ”, ಎಂದು ಅವರು ಘಟನೆಯ ಕುರಿತು ಮಾಹಿತಿ ನೀಡಿದರು.
“ ಒಂದು ವರ್ಷದ ಹಿಂದಷ್ಟೇ ಸುಹಾಸ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಆತನ ಚಲನವಲನಗಳ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿತ್ತು. ಘಟನೆಯ ವೀಡಿಯೊವನ್ನು ನೋಡಿದ್ದೇವೆ. ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ”, ಎಂದು ಕಮಿಷನರ್ ಹೇಳಿದ್ದಾರೆ.
“ಘಟನೆಯ ಬಳಿಕ ನಗರದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ನಗರದಾದ್ಯಂತ ರಾತ್ರಿಯಿಂದಲೇ ಬಂದೋಬಸ್ತ್, ನಾಕಾಬಂಧಿ ಮಾಡಲಾಗಿದೆ. ಹೊರಜಿಲ್ಲೆಗಳಿಂದ ಉನ್ನತಾಧಿಕಾರಿಗಳು ಬರುತ್ತಿದ್ದಾರೆ. ನಗರದಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲಾಗುವುದು”, ಎಂದು ಅನುಪಮ್ ಅಗರ್ವಾಲ್ ಹೇಳಿದ್ದಾರೆ.
►ಸುಹಾಸ್ ಶೆಟ್ಟಿಯ ಮೇಲಿರುವ ಪ್ರಕರಣಗಳಾವು?
ರೌಡಿ ಶೀಟರ್ ಆಗಿರುವ ಸುಹಾಸ್ ಶೆಟ್ಟಿಯ ಮೇಲೆ ಒಟ್ಟು 5 ಪ್ರಕರಣಗಳಿವೆ. ಅವುಗಳ ಪೈಕಿ ಮಂಗಳೂರು ನಗರದಲ್ಲಿಯೇ 4 ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣವು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
►ಬಜ್ಪೆ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಐಪಿಸಿ ಸೆಕ್ಷನ್ 143, 47, 323, 447, 504, 506, 149ರ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಆತ ಖುಲಾಸೆಯಾಗಿದ್ದಾನೆ.
►ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಐಪಿಸಿ 160ರಡಿ ದಾಖಲಾದ ಪ್ರಕರಣದಲ್ಲಿ ಆತನಿಗೆ ಶಿಕ್ಷೆಯಾಗಿದೆ.
►ಬಜ್ಪೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ಐಪಿಸಿ 143, 147, 148, 323, 324, 504, 506ರಡಿ ದಾಖಲಾದ ಪ್ರಕರಣದಲ್ಲಿ ಆತ ಖುಲಾಸೆಯಾಗಿದ್ದಾನೆ.
►ಬಜ್ಪೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ಐಪಿಸಿ 143, 147, 148, 323, 324, 504, 506, 307, 302, 149ರಡಿ ಮತ್ತು ಪರಿಶಿಷ್ಠ ಜಾತಿ ಪರಿಶಿಷ್ಠ ಪಂಗಡ ದೌರ್ಜನ್ಯ ಕಾಯ್ದೆಯಡಿ ದಾಖಲಾದ ಪ್ರಕರಣವು ಈಗಾಗಲೇ ವಿಚಾರಣಾ ಹಂತದಲ್ಲಿದೆ.
Abdul Waheed Bhat, an alleged Pakistani national who had been living in India since 1980, died on Wednesday during the deportation process at the Attari-Wagah border.
Bhat, who was around 80 years old and reportedly suffering from paralysis, fell critically ill and passed away inside a bus stationed outside the Integrated Check Post gate in Attari. His body was taken to Civil Hospital, Amritsar.
Bhat was part of a group of 60 to 70 alleged Pakistani nationals who had been brought from Jammu by police for deportation to Pakistan via the Attari border.
He had been served a formal “notice to leave India” by the Foreigner Registration Office, Srinagar, citing his illegal stay since the expiry of his visa in 1980. According to the notice dated April 25, 2025, the Ministry of Home Affairs had directed that all foreign nationals staying illegally must leave India by April 27.
Bhat was in the process of being deported under this directive when his condition fatally deteriorated.
Officials said Bhat died inside the bus before the handover process at the border could be completed. He was travelling alone as he did not have any children.
Sources said Bhat’s body remained inside the bus as Indian authorities were uncertain whether he had valid documents for deportation.
“The Jammu and Kashmir police have brought for deportation some persons who don’t have passports or the required certificate from the Pakistani embassy in Delhi. We cannot deport people who lack either. It is still unclear whether Bhat had a Pakistani passport,” said a source.
ಮಂಗಳೂರು, ಮೇ 1: ಕುಡುಪು ಗುಂಪು ದಾಳಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿ, ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 21ಕ್ಕೆ ಏರಿದೆ.
ಬಂಧಿತ ವ್ಯಕ್ತಿಯನ್ನು ಅನಿಲ್ ಎಂದು ಗುರುತಿಸಲಾಗಿದ್ದು, ಈತ ಘಟನೆಯ ನಂತರ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಇವನನ್ನು ಗೋಕಾಕ್ನಿಂದ ವಶಕ್ಕೆ ಪಡೆಯಲಾಗಿದೆ.
ಕ್ರೂರ ದಾಳಿಯ ನಂತರ ತಪ್ಪಿಸಿಕೊಂಡಿರುವ ಇತರರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ತಮ್ಮ ಪ್ರಯತ್ನವನ್ನು ಮುಂದುವರೆಸಿವೆ. ತನಿಖೆಯ ಭಾಗವಾಗಿ, ಘಟನೆಯ ದಿನ ಸ್ಥಳದಲ್ಲಿ ಇದ್ದ ಸುಮಾರು 15 ವ್ಯಕ್ತಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಈ ಪೈಕಿ ಹಲವರ ವಿಚಾರಣೆ ಪ್ರಗತಿಯಲ್ಲಿದೆ.
ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರು, ಕುಡುಪು ವ್ಯಾಪ್ತಿಯಾದ್ಯಂತದ ಸಿಸಿಟಿವಿ ದೃಶ್ಯಾವಳಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಘಟನೆಯ ದಿನದ ಸಂಗತಿಗಳನ್ನು ಪುನರ್ನಿರ್ಮಾಣ ಮಾಡಲು ಮತ್ತು ಎಲ್ಲ ಭಾಗಿಗಳನ್ನು ಗುರುತಿಸಲು ಪ್ರತ್ಯಕ್ಷದರ್ಶಿಗಳ ಸಹಾಯವನ್ನು ಪಡೆಯಲು ಪ್ರಾಧಿಕಾರಿಗಳು ಕಾರ್ಯನಿರ್ವಹಿಸುತ್ತಿವೆ.
ತನಿಖೆ ಮುಂದುವರೆದಿದ್ದರೂ, ಘಟನೆಯ ಹಿಂದಿನ ನಿಖರ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸ್ ಆಯುಕ್ತ ಅಗರವಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ, “ಇದುವರೆಗೆ, ದಾಳಿಯ ಹಿಂದಿನ ನಿರ್ದಿಷ್ಟ ಕಾರಣವನ್ನು ಸ್ಥಾಪಿಸಲು ಸಾಕಷ್ಟು ಪುರಾವೆಗಳು ಸಿಕ್ಕಿಲ್ಲ. ಆರೋಪಿತ ಘೋಷಣೆಗಳ ಬಗ್ಗೆಯೂ ಇನ್ನೂ ದೃಢವಾದ ಪುರಾವೆ ದೊರೆತಿಲ್ಲ.”
ಮಂಗಳೂರು, ಮೇ 1: ಕುಡುಪುನಲ್ಲಿ ಇತ್ತೀಚೆಗೆ ವಲಸೆ ಕಾರ್ಮಿಕನ ಮೇಲೆ ಗುಂಪು ದಾಳಿ ನಡೆಸಿದ ಘಟನೆಯ ನಂತರ, ಇದೀಗ ನಗರದ ಬಜ್ಪೆ ಪ್ರದೇಶದಲ್ಲಿ ಮತ್ತೊಂದು ಹಿಂಸಾತ್ಮಕ ಘಟನೆ ವರದಿಯಾಗಿದೆ. ಬುಧವಾರ, ಮೇ 1 ರ ಸಂಜೆ, ಒಬ್ಬ ಯುವಕನ ಮೇಲೆ ಒಂದು ಗುಂಪು ದಾಳಿ ನಡೆಸಿ ಗಾಯಗೊಳಿಸಿದೆ ಎನ್ನಲಾಗಿದ್ದು, ಪ್ರದೇಶದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ.
ದಾಳಿಗೊಳಗಾದ ವ್ಯಕ್ತಿ ಸುಹಾಸ್ ಶೆಟ್ಟಿ ಎಂದು ಹೇಳಲಾಗಿದ್ದು, ಇವನು ಜುಲೈ 2022 ರ ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ರೌಡಿಶೀಟರ್ ಆಗಿದ್ದಾನೆ .
ಈ ಘಟನೆ ಬಜ್ಪೆ ಬಸ್ ಸ್ಟ್ಯಾಂಡ್ ಸಮೀಪದಲ್ಲಿ ಒಂದು ಗುಂಪು ಮೀನಿನ ಲಾರಿಯನ್ನು ತಡೆದು ದಾಳಿ ನಡೆಸಿದಾಗ ಸಂಭವಿಸಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಮೊಂಡಾಯುಧಗಳನ್ನು ಹಿಡಿದ ದಾಳಿಕಾರರ ಗುಂಪು ಶೆಟ್ಟಿಯನ್ನು ಸುತ್ತುವರೆದು ಮಾರಕ ಗಾಯಗಳನ್ನು ಒಡ್ಡಿ ಸ್ಥಳದಿಂದ ಪರಾರಿಯಾಗಿದೆ. ಸ್ಥಳೀಯ ನಿವಾಸಿಗಳು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
ಬಜ್ಪೆ ನಿವಾಸಿಯಾದ ಶೆಟ್ಟಿ, ಮೂರು ವರ್ಷಗಳ ಹಿಂದೆ ಕೊಲೆಯೊಂದನ್ನು ಯೋಜಿಸಿದ್ದ ಆರೋಪದ ಮೇಲೆ ಇತರರೊಂದಿಗೆ ಬಂಧಿತರಾಗಿದ್ದನು ಮತ್ತು ಇತ್ತೀಚಿನ ದಾಳಿಯ ಸಮಯದಲ್ಲಿ ಜಾಮೀನಿನ ಮೇಲೆ ಹೊರಗಿದ್ದನು.
ಪ್ರಾಧಿಕಾರಿಗಳು ಈ ದಾಳಿಯನ್ನು ವಿವಿಧ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ, ಇದರಲ್ಲಿ ಶೆಟ್ಟಿಯ ಹಿಂದಿನ ಪ್ರಕರಣಗಳಿಗೆ ಸಂಬಂಧಿಸಿದ ಸೇಡಿನ ಕೃತ್ಯದ ಸಾಧ್ಯತೆಯೂ ಸೇರಿದೆ. ಪೊಲೀಸರು ಬಜ್ಪೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ ಇದರಿಂದ ಮುಂದಿನ ಘಟನೆಗಳನ್ನು ತಡೆಯಬಹುದಾಗಿದೆ.
ಕುಡುಪುನಲ್ಲಿ ಇತ್ತೀಚೆಗೆ ನಡೆದ ಕ್ರೂರ ಗುಂಪು ದಾಳಿ ಪ್ರಕರಣದ ನಂತರ ಈ ಘಟನೆ ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿದೆ.