Author: NewsDesk

  • Fire Safety Awareness Program at St Mary’s English Medium School, Kannarpady, Udupi

    Udupi, July 19, 2025: On July 18, 2025, St Mary’s English Medium School, Kannarpady, Udupi conducted a Fire Safety Talk and Mock Drill for its students at St Mary’s Auditorium at 1.45 p.m. The program aimed to educate students on fire safety measures, emergency procedures, and evacuation protocols.

    The chief guest, Mr M Keshava Raghavendra, a leading fire officer of Udupi District, delivered an insightful awareness session on fire safety. He enlightened the students on different types of fires and the appropriate use of various fire extinguishers. Additionally, he covered other essential emergency safety measures, equipping the students with vital knowledge to handle such situations.

    The theoretical session was followed by a practical demonstration by Mr Raghavendra and his team, comprising five more members, from their Fire Safety Vehicle. The hands-on demonstration provided the students with a unique opportunity to witness fire safety equipment in action, further reinforcing their understanding of the subject.

    The program concluded with a valuable Question and Answer session, where students clarified their doubts and gained a deeper understanding of fire safety protocols. The initiative taken by the school undoubtedly benefited the students. Rev. Fr Vijay Dsouza, the Principal and Ms Rita Quadros the Vice Principal were present during the program.

  • ಅತ್ಯಾಚಾರ ಆರೋಪ: ಕಾವೂರು ಠಾಣೆಯ ಕಾನ್ ಸ್ಟೇಬಲ್ ಸಹಿತ ಇಬ್ಬರ ಬಂಧನ

    ಮಂಗಳೂರು, ಜುಲೈ 16, 2025: ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಕಾವೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಚಂದ್ರ ನಾಯಕ್ ಬಂಧಿತ ಆರೋಪಿ. ಈತನಿಗೆ ಸಹಕರಿಸಿದ ಆರೋಪದಲ್ಲಿ ಸಂತ್ರಸ್ತೆಯ ಪತಿಯನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

    ಅತ್ಯಾಚಾರದ ಬಗ್ಗೆ ಕಾನ್ ಸ್ಟೇಬಲ್ ಚಂದ್ರ ನಾಯಕ್ ವಿರುದ್ಧ ಮಹಿಳೆಯೊಬ್ಬರು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ದೂರು ನೀಡಿದ್ದರು. ಅದರಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಇದೀಗ ಆರೋಪಿಗಳಾದ ಕಾನ್ ಸ್ಟೇಬಲ್ ಚಂದ್ರ ನಾಯಕ್ ಮತ್ತು ಸಂತ್ರಸ್ತೆಯ ಪತಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.

  • ಉತ್ತರ ಕನ್ನಡಕ್ಕೆ ನೂತನ ಎಸ್‌ಪಿ ದೀಪನ್ ಎಂ.ಎನ್. ಅಧಿಕಾರ ಸ್ವೀಕಾರ

    ಕಾರವಾರ: ದೀಪನ್ ಎಂ.ಎನ್. (ಐಪಿಎಸ್) ಅವರು ದಿನಾಂಕ 15-07-2025 ರಂದು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಗೌರವ ವಂದನೆಯನ್ನು ಸ್ವೀಕರಿಸಿ, ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿದ್ದಾರೆ.

  • ಉತ್ತರ ಕನ್ನಡ ಜಿಲ್ಲೆಗೆ ಎಸ್‌ಪಿ ನಾರಾಯಣ ರಿಂದ ಭಾವಪೂರ್ಣ ವಿದಾಯ

    ಕಾರವಾರ, ಜುಲೈ 16, 2025: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ ಎಂ. ನಾರಾಯಣ್ (ಐಪಿಎಸ್) ಅವರು ಸರ್ಕಾರದ ವರ್ಗಾವಣೆ ಆದೇಶದಂತೆ ಇಂದು ಕರ್ತವ್ಯದಿಂದ ನಿರ್ಗಮಿಸಿದ್ದಾರೆ.

    ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದು ತಮ್ಮ ಸೌಭಾಗ್ಯ ಎಂದು ಬಣ್ಣಿಸಿದ ಅವರು, ಕರ್ತವ್ಯ ನಿರ್ವಹಣೆಯಲ್ಲಿ ಸಹಕರಿಸಿದ ಅಧಿಕಾರಿ ಸಿಬ್ಬಂದಿ, ಮಾಧ್ಯಮ ಮಿತ್ರರು ಮತ್ತು ಪ್ರೀತಿಯ ಸಾರ್ವಜನಿಕರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

    ದೀಪನ್ ಎಂ.ಎನ್.

    ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ದೀಪನ್ ಎಂ.ಎನ್. ಅವರಿಗೆ ಶುಭ ಹಾರೈಸಿದ ನಾರಾಯಣ, ಜಿಲ್ಲೆಯ ಜನರ ಸಹಕಾರ ಹೀಗೆ ಮುಂದುವರೆಯಲಿ ಎಂದು ಆಶಿಸಿದ್ದಾರೆ.

  • ಗಂಗೊಳ್ಳಿ: ಮೀನುಗಾರರ ಕಾಣೆಯಾಗಿರುವ ಪ್ರಕರಣ; ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

    ಗಂಗೊಳ್ಳಿ, ಜುಲೈ 16, 2025: ಗಂಗೊಳ್ಳಿ ಸಮೀಪದ ಸಮುದ್ರದಲ್ಲಿ ಮೀನುಗಾರಿಕೆಯ ಸಂದರ್ಭದಲ್ಲಿ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಇಂದು ಸ್ಥಳಕ್ಕೆ ಭೇಟಿ ನೀಡಿದರು. ನಿನ್ನೆ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿದ್ದರು. ಘಟನೆಯಲ್ಲಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಪೈಕಿ ಲೋಹಿತ್ ಖಾರ್ವಿ (38) ಎಂಬಾತನ ಮೃತದೇಹ ಕುಂದಾಪುರದ ಕೋಡಿ ಲೈಟ್ ಹೌಸ್ ಬಳಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

    ಶಾಸಕ ಗುರುರಾಜ್ ಗಂಟಿಹೊಳೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ, ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಅನಿತಾ ಆರ್‌. ಕೆ., ಸ್ಥಳೀಯಾಡಳಿತದ ಜನಪ್ರತಿನಿಧಿಗಳು, ಮಂಡಲ ಪದಾಧಿಕಾರಿಗಳು ಮತ್ತು ಪಕ್ಷದ ಪ್ರಮುಖರು ಪ್ರಮುಖರು ಉಪಸ್ಥಿತರಿದ್ದರು. ಈ ಹಂತದಲ್ಲಿ ಸಮುದ್ರ ಮತ್ತು ತೀರದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ತನಿಖೆ ಮುಂದುವರೆದಿದೆ.

  • ಭಟ್ಕಳ: ಜೈಲಿನಿಂದ ಹೊರಬಂದ ನಂತರ ಮತ್ತೆ ಕಳ್ಳತನ

    ಭಟ್ಕಳ, ಜುಲೈ 16, 2025: ಮನೆಯ ಮುಂದೆ ನಿಲ್ಲಿಸಿದ್ದ ಡಿಜೈರ್‌ ಕಾರು ಕಳವಾದ ಪ್ರಕರಣದಲ್ಲಿ ಭಟ್ಕಳ ಶಹರ ಠಾಣೆ ಪೊಲೀಸರು ಕೇವಲ 48 ಗಂಟೆಗಳಲ್ಲಿ ಕಾರು ಪತ್ತೆ ಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರೂ ಆರೋಪಿಗಳು ಭಟ್ಕಳದವರಾಗಿದ್ದಾರೆ.

    ಮಟ್ಟಳ್ಳಿಯ ರೈಲ್ವೆ ನಿಲ್ದಾಣದ ಹತ್ತಿರವಿರುವ ಶೇಖರ ಸೋಮಯ್ಯ ನಾಯ್ಕ ಎಂಬುವವರಿಗೆ ಸೇರಿದ ಮಾರುತಿ ಡಿಜೈರ್‌ ಕಾರು ಜುಲೈ ೧೩ರಂದು ಬೆಳಿಗ್ಗೆ ೪ ಗಂಟೆ ಸುಮಾರಿಗೆ ಕಳವಾಗಿದ್ದು, ತಕ್ಷಣವೇ ಶಹರ ಠಾಣೆಗೆ ದೂರು ನೀಡಲಾಗಿತ್ತು. ಪಿಎಸ್‌ಐ ತಿಮ್ಮಪ್ಪ ಬೆಡುಮನೆ ಅವರು ತನಿಖೆ ಕೈಗೊಂಡು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಶಿರೂರು ಟೋಲ್‌ಗೇಟ್ ಮಾರ್ಗವಾಗಿ ಕಾರು ಹಾದುಹೋಗಿರುವುದು ದೃಢಪಟ್ಟಿತ್ತು. ಶಹರ ಠಾಣೆಯ ಇನ್‌ಸ್ಪೆಕ್ಟರ್ ದಿವಾಕರ ಪಿ ಎಂ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ಬೈಂದೂರು, ಉಡುಪಿ ಹಾಗೂ ಮಂಗಳೂರು ಕಡೆಗೆ ಕಳಿಸಲಾಗಿತ್ತು. ಜುಲೈ 15ರಂದು ಮಧ್ಯಾಹ್ನ ಬೈಂದೂರಿನ ರೈಲ್ವೆ ನಿಲ್ದಾಣ ಕ್ರಾಸ್ ಬಳಿ ಕಾರು ಸಹಿತ ಆರೋಪಿಗಳಾದ  ಬದ್ರಿಯಾ ಕಾಲೋನಿಯ ಫೌಜಾನ್ ಅಹ್ಮದ್ (20) ಮತ್ತು ವೆಂಕಟಾಪುರದ ದರ್ಶನ ನಾಯ್ಕ (18) ಎಂಬಿಬ್ಬರನ್ನು ಬಂಧಿಸಲಾಗಿದೆ.

    ಬಂಧಿತ ಫೌಜಾನ್ ಹಿಂದೆ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಕ್ಕೆ ಜೈಲುಪಾಲಾಗಿದ್ದ. ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಮತ್ತೆ ಕಳ್ಳತನದಲ್ಲಿ ತೊಡಗಿದ್ದನು. ಈ ಚುರುಕು ಕಾರ್ಯಾಚರಣೆಯಲ್ಲಿ ಶಾಂತಿನಾಥ ಪಾಸಾನೆ, ನವೀನ್ ನಾಯ್ಕ, ದೀಪಕ ನಾಯ್ಕ, ದಿನೇಶ್ ನಾಯಕ, ವಿನಾಯಕ ಪಾಟೀಲ್, ದೇವು ನಾಯ್ಡ, ಮಹಾಂತೇಶ ಹಿರೇಮಠ, ವೀರಣ್ಣಾ ಬಳ್ಳಾರಿ, ಕಾಶಿನಾಥ ಕೊಟಗೊಣಸಿ, ರೇವಣಸಿದ್ದಪ್ಪ ಮಾಗಿ, ಚಂದ್ರಕಾಂತ ಕುಂಬಾರ ಹಾಗೂ ಕಾರವಾರದ ಟೆಕ್ನಿಕಲ್ ಸೆಲ್‌ನ ಉದಯ ಗುನಗಾ, ಬಬನ್ ಕದಂ ಪಾಲ್ಗೊಂಡಿದ್ದರು. ಉತ್ತರ ಕನ್ನಡ ಜಿಲ್ಲಾ ಎಸ್‌ಪಿ ಎಂ. ನಾರಾಯಣ, ಹೆಚ್ಚುವರಿ ಎಸ್‌ಪಿ ಕೃಷ್ಣಮೂರ್ತಿ ಹಾಗೂ ಭಟ್ಕಳ ಡಿವೈಎಸ್‌ಪಿ ಮಹೇಶ್ ಎಂ ಕೆ ಮಾರ್ಗದರ್ಶನ ನೀಡಿದರು.

  • ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣ- ಹೆತ್ತವರಿಂದ ದೂರು

    ಮಂಗಳೂರು, ಜು.16: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಅವರ ಹೆತ್ತವರು ದೂರು ನೀಡಿದ್ದಾರೆ. ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ತಿಳಿಸಿದ್ದಾರೆ.

    2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜು. 15 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆಗಮಿಸಿ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.

    ಅಸ್ಥಿ ಸಿಕ್ಕಿದರೆ ಸಂಪ್ರದಾಯ ಪ್ರಕಾರ ಅಂತ್ಯ ಸಂಸ್ಕಾರ: ಸಾಯುವುದಕ್ಕಿಂತ ಮೊದಲು ಮಗಳ ಮೃತದೇಹದ ಅಸ್ಥಿ ಏನಾದರೂ ದೊರೆತರೆ, ಸನಾತನ ಹಿಂದೂ ಧರ್ಮದ ಸಂಪ್ರದಾಯ ಪ್ರಕಾರ ಅಂತ್ಯಕ್ರಿಯೆ ನಡೆಸುವ ಆಲೋಚನೆಯಲ್ಲಿ ಹೊರಟಿರುವೆನು. ನನಗೆ ಈಗ ಬೇರೆ ಏನು ಉಳಿದಿಲ್ಲ. ಮಗಳು ನಾಪತ್ತೆ ಪ್ರಕರಣದಲ್ಲಿ ನ್ಯಾಯ ದೊರಕಬೇಕು ಎಂದು ತಾಯಿ ಸುಜಾತ ಭಟ್ ತಿಳಿಸಿದ್ದಾರೆ.

    ಅನನ್ಯಾ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡುವ ಕಾರಣಕ್ಕಾಗಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದೇವೆ. ಅವರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಸುಜಾತ ಭಟ್ ಪರ ವಕೀಲರಾದ ಮಂಜುನಾಥ್ ಎನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

  • ಕೋಟ: ಅಸ್ಸಿಲ್ಹಾ ಶಿಪ್‌ ರೆಸ್ಕ್ಯೂ ಬೋಟ್‌ ಇಂಜಿನ್‌ ಕಳವು; ಪ್ರಕರಣ ದಾಖಲು

    ಕೋಟ, ಜುಲೈ 16, 2025: ಬ್ರಹ್ಮಾವರ ತಾಲೂಕು ಬಾಳ್ಕುದ್ರು ಗ್ರಾಮದ ಹಂಗಾರಕಟ್ಟೆ ಹೊಳೆಯಲ್ಲಿ ಲಂಗರು ಹಾಕಿ ನಿಲ್ಲಿಸಲಾಗಿದ್ದ ಅಸ್ಸಿಲ್ಹಾ (ASSILAH) ಶಿಪ್‌ಗೆ ಆಳವಡಿಸಲಾಗಿದ್ದ ರೆಸ್ಕ್ಯೂ ಬೋಟ್‌ನ ಹೊಸ ಇಂಜಿನ್‌ ಕಳವಾಗಿದೆ. ದಿನಾಂಕ 13/07/2025 ರಾತ್ರಿ 9:30 ಗಂಟೆಯಿಂದ ದಿನಾಂಕ 15/07/2025 ರ ಬೆಳಿಗ್ಗೆ 8:00 ಗಂಟೆಯವರೆಗೆ ಯಾರೋ ತಿಳಿಯದವರು SUZUKI DT 15 AL -15HP 2STROKE TILLER MODEL WITH PROPELLER ಇಂಜಿನ್‌ನ ಇಂಧನ ಪೈಪ್‌ ತುಂಡು ಮಾಡಿ ಕಳವು ಮಾಡಿಕೊಂಡು ಹೋಗಿದ್ದಾರೆ.

    ಈ ಸಂಬಂಧ ಹಂದಾಡಿ ಗ್ರಾಮದ ಜೆ.ಬಿ. ಪ್ರಕಾಶ (52) ಅವರು ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣವನ್ನು ಅಪರಾಧ ಕ್ರಮಾಂಕ 132/2025 ಕಲಂ 305 BNS ರಡಿ ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಯ ಬಗ್ಗೆ ಮತ್ತಷ್ಟು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

  • ಗಂಗೊಳ್ಳಿ ದೋಣಿ ದುರಂತ: ಮೀನುಗಾರ ಲೋಹಿತ್ ಖಾರ್ವಿ ಮೃತದೇಹ ಕೋಡಿಯಲ್ಲಿ ಪತ್ತೆ

    ಗಂಗೊಳ್ಳಿ, ಜುಲೈ 16, 2025: ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಘಟನೆಯಲ್ಲಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಪೈಕಿ ಲೋಹಿತ್ ಖಾರ್ವಿ (38) ಎಂಬಾತನ ಮೃತದೇಹ ಕುಂದಾಪುರದ ಕೋಡಿ ಲೈಟ್ ಹೌಸ್ ಬಳಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಈ ದುರಂತ ಜುಲೈ 15, 2025 ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಗಂಗೊಳ್ಳಿ ಸೀವಾಕ್ ಬಳಿ ನಡೆದಿತ್ತು.

    ನಾಪತ್ತೆಯಾದ ಇತರ ಇಬ್ಬರು ಮೀನುಗಾರರು ಸುರೇಶ್ ಖಾರ್ವಿ (45) ಮತ್ತು ಜಗ್ಗು ಯಾನೆ ಜಗದೀಶ್ ಖಾರ್ವಿ (36) ಇನ್ನೂ ಪತ್ತೆಯಾಗಿಲ್ಲ. ಸುರೇಶ್ ಖಾರ್ವಿಯ ಮಾಲಕತ್ವದ ದೋಣಿಯಲ್ಲಿ ನಾಲ್ವರು ಮೀನುಗಾರರು ಮಂಗಳವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಭಾರೀ ಅಲೆಗಳಿಗೆ ಸಿಲುಕಿದ ದೋಣಿ ಮಗುಚಿಬಿದ್ದಿದ್ದು, ಸಂತೋಷ್ ಖಾರ್ವಿ ಈಜಿಕೊಂಡು ಬೇರೊಂದು ದೋಣಿಯ ಮೂಲಕ ಸುರಕ್ಷಿತವಾಗಿ ದಡ ಸೇರಿದ್ದಾನೆ. ಆದರೆ, ಉಳಿದ ಮೂವರು ನೀರುಪಾಲಾಗಿದ್ದರು.

    ಘಟನೆಯ ವಿವರ

    ದೋಣಿ ಮಗುಚಿದಾಗ ಓರ್ವ ಮೀನುಗಾರ ನೀರಿಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಮುಂದಾದ ಇತರ ಇಬ್ಬರು ಕೂಡ ಸಮುದ್ರದ ಅಲೆಗಳಿಗೆ ಸಿಲುಕಿದ್ದಾರೆ. ಲೋಹಿತ್ ಖಾರ್ವಿಯ ಮೃತದೇಹ ಕೋಡಿ ಸಮುದ್ರ ತೀರದಲ್ಲಿ ಪತ್ತೆಯಾಗಿದ್ದು, ಉಳಿದ ಇಬ್ಬರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ.

    ಶೋಧ ಕಾರ್ಯ ಮುಂದುವರಿಕೆ

    ನಾಪತ್ತೆಯಾದ ಮೀನುಗಾರರ ಹುಡುಕಾಟಕ್ಕೆ ಕರಾವಳಿ ಕಾವಲು ಪಡೆ, ಗಂಗೊಳ್ಳಿ ಠಾಣೆಯ ಸಿಬ್ಬಂದಿಗಳು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಸ್ಥಳೀಯ ಮೀನುಗಾರರು ತೀವ್ರ ಶ್ರಮಿಸುತ್ತಿದ್ದಾರೆ. ಆದರೆ, ನಿರಂತರ ಗಾಳಿಮಳೆ ಶೋಧ ಕಾರ್ಯಕ್ಕೆ ಅಡ್ಡಿಯಾಗಿದೆ. ಸಂಸದರಾದ ಬಿ.ವೈ. ರಾಘವೇಂದ್ರ ಮತ್ತು ಕೋಟ ಶ್ರೀನಿವಾಸ ಪೂಜಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಶೋಧ ಕಾರ್ಯಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

    ಸರ್ಕಾರಿ ಸಹಾಯಕ್ಕೆ ಮನವಿ

    ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ ಖಾರ್ವಿ, ನಾಪತ್ತೆಯಾದವರ ಕುಟುಂಬಕ್ಕೆ ಸರಕಾರ ತಕ್ಷಣ ಸ್ಪಂದಿಸಿ ಸಾಂತ್ವನದ ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಕುಂದಾಪುರ ಎಸಿ ರಶ್ಮಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಭೇಟಿ ನೀಡಿದ್ದಾರೆ.

    ಈ ದುರಂತದಿಂದ ಗಂಗೊಳ್ಳಿ ಸಮುದಾಯದಲ್ಲಿ ಆತಂಕ ಮತ್ತು ದುಃಖದ ವಾತಾವರಣ ನಿರ್ಮಾಣವಾಗಿದೆ.

  • ಎಲ್ಲಾ ಸಿನಿಮಾ ಥಿಯೇಟರ್‌ಗಳಲ್ಲಿ ಟಿಕೆಟ್ ದರ ₹200ಕ್ಕೆ ಮಿತಿಗೊಳಿಸಲು ಪ್ರಸ್ತಾಪ; ಕರ್ನಾಟಕ ಸರ್ಕಾರ

    ಬೆಂಗಳೂರು, ಜುಲೈ 15, 2025: ಸಿನಿಮಾ ವೀಕ್ಷಣೆಯನ್ನು ಎಲ್ಲರಿಗೂ ಕೈಗೆಟಕುವಂತೆ ಮಾಡಲು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರತಿ ಪ್ರದರ್ಶನದ ಟಿಕೆಟ್ ದರವನ್ನು ₹200ಕ್ಕೆ ಮಿತಿಗೊಳಿಸುವ ಒಂದು ಕರಡು ಅಧಿಸೂಚನೆಯನ್ನು ಮಂಗಳವಾರ (ಜುಲೈ 15) ಜಾರಿಗೊಳಿಸಿದೆ. ಈ ಪ್ರಸ್ತಾವಿತ ನಿಯಮವು ಮಲ್ಟಿಪ್ಲೆಕ್ಸ್‌ಗಳ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೆ ಮತ್ತು ಎಲ್ಲಾ ಭಾಷೆಯ ಚಿತ್ರಗಳಿಗೆ ಅನ್ವಯವಾಗಲಿದ್ದು, ಈ ದರವು ಮನರಂಜನಾ ತೆರಿಗೆಯನ್ನು ಒಳಗೊಂಡಿರುತ್ತದೆ.

    ಕರಡು ಅಧಿಸೂಚನೆಯು ಕರ್ನಾಟಕ ಸಿನಿಮಾಸ್ (ನಿಯಂತ್ರಣ) ನಿಯಮಗಳು, 2014 ರಲ್ಲಿ ತಿದ್ದುಪಡಿ ಮಾಡಲು ಪ್ರಸ್ತಾಪಿಸಿದ್ದು, ಇದನ್ನು ಕರ್ನಾಟಕ ಸಿನಿಮಾಸ್ (ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯಲಾಗುತ್ತದೆ.

    ಸಾರ್ವಜನಿಕರಿಂದ ಅಭಿಪ್ರಾಯಗಳು ಮತ್ತು ಆಕ್ಷೇಪಣೆಗಳು

    ಈ ಕರಡು ಅಧಿಸೂಚನೆಯು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಗೊಂಡ ದಿನಾಂಕದಿಂದ 15 ದಿನಗಳ ಕಾಲ ಸಾರ್ವಜನಿಕರಿಂದ ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸ್ವೀಕರಿಸಲಿದೆ. ಈ ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಬೆಂಗಳೂರಿನ ವಿಧಾನ ಸೌಧದಲ್ಲಿರುವ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಬೇಕು.

    ಅಧಿಸೂಚನೆಯಲ್ಲಿ ಹೀಗೆ ತಿಳಿಸಲಾಗಿದೆ: “ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ, ಮಲ್ಟಿಪ್ಲೆಕ್ಸ್‌ಗಳ ಸೇರಿದಂತೆ, ಎಲ್ಲಾ ಭಾಷೆಯ ಚಿತ್ರಗಳ ಪ್ರತಿ ಪ್ರದರ್ಶನದ ಟಿಕೆಟ್ ದರವು ಮನರಂಜನಾ ತೆರಿಗೆ ಸೇರಿದಂತೆ ₹200ಕ್ಕಿಂತ ಹೆಚ್ಚಿರಬಾರದು.”

    ಹಿನ್ನೆಲೆ ಮತ್ತು ಬಜೆಟ್ ಭರವಸೆ

    ಟಿಕೆಟ್ ದರವನ್ನು ಮಿತಿಗೊಳಿಸುವ ಕಲ್ಪನೆಯು ಹಲವಾರು ವರ್ಷಗಳಿಂದ ಚರ್ಚೆಯಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 2025-26ರ ಬಜೆಟ್ ಭಾಷಣದಲ್ಲಿ ಈ ಪ್ರಸ್ತಾಪವನ್ನು ಪುನರುಚ್ಚರಿಸಿ, ಮನರಂಜನೆಗೆ ಸಮಾನ ಪ್ರವೇಶವನ್ನು ಉತ್ತೇಜಿಸಲು ₹200ರ ದರದ ಮಿತಿಯನ್ನು ಜಾರಿಗೊಳಿಸುವ ಭರವಸೆ ನೀಡಿದ್ದರು.

    ಇದು ಚಿತ್ರಮಂದಿರದ ಟಿಕೆಟ್ ದರವನ್ನು ನಿಯಂತ್ರಿಸುವ ಮೊದಲ ಪ್ರಯತ್ನವಲ್ಲ. ಕಾಂಗ್ರೆಸ್ ಸರ್ಕಾರವು 2017-18ರ ಬಜೆಟ್‌ನಲ್ಲಿ ಏಕರೂಪದ ದರವನ್ನು ಘೋಷಿಸಿದ ನಂತರ 2018ರಲ್ಲಿ ಇದೇ ರೀತಿಯ ಆದೇಶವನ್ನು ಹೊರಡಿಸಿತ್ತು, ಆದರೆ ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಅದನ್ನು ಹಿಂಪಡೆಯಲಾಯಿತು.

    ಇತರ ರಾಜ್ಯಗಳ ಉದಾಹರಣೆ

    ಈ ನಿಯಮ ಜಾರಿಗೆ ಬಂದರೆ, ಕರ್ನಾಟಕವು ಈಗಾಗಲೇ ಚಿತ್ರಮಂದಿರದ ಟಿಕೆಟ್ ದರವನ್ನು ನಿಯಂತ್ರಿಸಿರುವ ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳ ಸಾಲಿಗೆ ಸೇರಲಿದೆ.

    ಇಂಡಸ್ಟ್ರಿ ಮತ್ತು ಸಾರ್ವಜನಿಕರಿಂದ ಪ್ರತಿಕ್ರಿಯೆ

    ಕರಡು ಅಧಿಸೂಚನೆಯು ಈಗ ಚಿತ್ರಮಂದಿರ ಮಾಲೀಕರು, ಉದ್ಯಮದ ಒಡದಾಳಿಗಳು ಮತ್ತು ಸಾರ್ವಜನಿಕರಿಂದ ಪ್ರತಿಕ್ರಿಯೆಗೆ ತೆರೆದಿದೆ. 15 ದಿನಗಳ ಸಮಾಲೋಚನಾ ಅವಧಿಯ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.