ಮಂಗಳೂರು, ಜುಲೈ 7, 2025: ಒಂದು ದುರ್ದೈವಿಯ ಘಟನೆಯಲ್ಲಿ, ಸುರತ್ಕಲ್ನ ಕೃಷ್ಣಾಪುರ ಹಿಲ್ಸೈಡ್ ಬಳಿ ಸೋಮವಾರ, ಜುಲೈ 7 ರಂದು ಮಧ್ಯಾಹ್ನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿಯನ್ನು ಹಿಲ್ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಅಫ್ತಾಬ್ ಸುರತ್ಕಲ್ನಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ.
ವರದಿಗಳ ಪ್ರಕಾರ, ಘಟನೆ ಸಂಭವಿಸಿದ್ದು ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ, ಅಫ್ತಾಬ್ ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದನು.
ಅಸ್ಗರ್ ಅಲಿ ಅವರ ನಾಲ್ಕು ಮಕ್ಕಳಲ್ಲಿ ಅಫ್ತಾಬ್ ಏಕೈಕ ಪುತ್ರ. ಅವರ ಮೂವರು ಸಹೋದರಿಯರು ಮದುವೆಯಾಗಿದ್ದಾರೆ. ಅಫ್ತಾಬ್ನ ತಾಯಿ ಕೋವಿಡ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ನಿಧನರಾಗಿದ್ದು, ಆ ನಂತರ ತಂದೆ ಮತ್ತು ಮಗನೇ ಒಟ್ಟಿಗೆ ವಾಸವಾಗಿದ್ದರು.
ಅಫ್ತಾಬ್ನ ತಂದೆ ಅಸ್ಗರ್ ಅಲಿ, ಆಟೋ ರಿಕ್ಷಾ ಚಾಲಕರಾಗಿದ್ದು, ಮಧ್ಯಾಹ್ನವರೆಗೆ ಮಗನೊಂದಿಗೆ ಮನೆಯಲ್ಲಿದ್ದರು. ವರದಿಗಳ ಪ್ರಕಾರ, ಘಟನೆ ಸಂಭವಿಸಿದ್ದು ಅವರು ಸಂಜೆ 1 ಗಂಟೆಯ ಸುಮಾರಿಗೆ ಕೆಲಸಕ್ಕೆ ಹೊರಟ ಬಳಿಕ.
ಬಂಟ್ವಾಳ, ಜುಲೈ 7, 2025: ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಪುದು ಗ್ರಾಮದ ಫರಂಗಿಪೇಟೆ-ಮಾರಿಪಳ್ಳ ಸಮೀಪದ ಸುಜೀರ್-ಮಲ್ಲಿ ಎಂಬಲ್ಲಿ ಸೋಮವಾರ ಸಂಭವಿಸಿದೆ.
ಮೃತ ಯುವಕನನ್ನು ಕೊಡ್ಮಣ್ ನಿವಾಸಿ ಸುಧೀರ್(30) ಹಾಗೂ ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ದಿವ್ಯಾ ಯಾನೆ ದೀಕ್ಷಿತಾ (26) ಎಂದು ಗುರುತಿಸಲಾಗಿದೆ.
ದಿವ್ಯಾ ಯಾನೆ ದೀಕ್ಷಿತಾ ಹಾಗೂ ಸುಧೀರ್ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಎಂದು ತಿಳಿದುಬಂದಿದ್ದು, ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿರುತ್ತದೆ. ಆದರೂ ಸಹ ಸುಧೀರ್ ಫೋನ್ ಮಾಡುವುದು, ಹಿಂಬಾಲಿಸುವುದು ಮಾಡುತ್ತಿದ್ದ. ಸುಧೀರ್ ಸೋಮವಾರ ಬೆಳಿಗ್ಗೆ ಫರಂಗಿಪೇಟೆ ಸಮೀಪದ ಸುಜೀರ್-ಮಲ್ಲಿ ಎಂಬಲ್ಲಿಗೆ ಬಂದು ದಿವ್ಯಾಳೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿರುತ್ತದೆ ಎನ್ನಲಾಗಿದ್ದು, ಈ ವೇಳೆ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ದಿವ್ಯಾಳಿಗೆ ಇರಿದಿದ್ದಾನೆ. ಆಕೆ ತಪ್ಪಿಸಿಕೊಂಡು ಓಡಿ ಹೋಗುವಾಗ ಬಿದ್ದಿದ್ದು, ಇದನ್ನು ನೋಡಿದ ಸುಧೀರ್ ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಅಲ್ಲಿಂದ ದಿವ್ಯಾಳ ಬಾಡಿಗೆ ಮನೆಗೆ ತೆರಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು, ಜುಲೈ 6, 2025: ಹಿಂದುತ್ವ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜು.6ರಿಂದ ಆ.4ರವರೆಗೆ 30 ದಿನಗಳ ಕಾಲ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶರಣ್ ಪಂಪ್ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯ ಕೆಲ ಸಂಘಟನೆಗಳ ಮುಖಂಡರು ಚಿಕ್ಕಮಗಳೂರು, ಮೂಡಿಗೆರೆ, ಆಲ್ದೂರಿನಲ್ಲಿ ಶರಣ್ ಪಂಪ್ವೆಲ್ ಅವರನ್ನು ಕರೆಸಿ ಭಾಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದರು.
ಶರಣ್ ಪಂಪ್ವೆಲ್ ಕೋಮುಧ್ವೇಷ ಹರಡುವಂತಹ ಭಾಷಣ ಮಾಡುವ ಪ್ರವೃತ್ತಿ ಹೊಂದಿದ್ದು, ಈತನ ಪ್ರಚೋದನಾಕಾರಿ ಭಾಷಣದಿಂದ ಗಲಾಟೆ, ಗುಂಪು ಘರ್ಷಣೆ ಉಂಟಾಗುವ ಸಾಧ್ಯತೆಗಳಿವೆ ಎನ್ನುವ ಪೊಲೀಸ್ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಸಣ್ಣ ಘಟನೆಯೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಗಳಿವೆ ಎನ್ನುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ.
ಪುತ್ತೂರು, ಜುಲೈ 6, 2025: ಜಿಲ್ಲೆಯಲ್ಲಿ ನಿಲ್ಲದ ನೈತಿಕ ಪೊಲೀಸ್ ಗಿರಿ. ಬೀರಮಲೆ ಬೆಟ್ಟದಲ್ಲಿ ಅಪ್ರಾಪ್ತ ಬಾಲಕ ಮತ್ತು ಬಾಲಕಿಗೆ ಕಿರುಕುಳ ನೀಡಿ, ಘಟನೆಯನ್ನು ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊವನ್ನು ಹರಿಬಿಟ್ಟು ಜೊತೆಗೆ ಅವಹೇಳನಕಾರಿ ಮತ್ತು ಧರ್ಮ ಆಧಾರಿತ ನಿಂದನೆಗಾಗಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪುತ್ತೂರು ಕಸ್ಬಾ ಗ್ರಾಮದ ಬೀರಮಲೆ ಬೆಟ್ಟದಲ್ಲಿ ಜುಲೈ 5 ರಂದು ಈ ಘಟನೆ ನಡೆದಿದೆ. . ಬಾಲಕನ ತಂದೆ ಸಲ್ಲಿಸಿದ ಪೊಲೀಸ್ ದೂರಿನ ಪ್ರಕಾರ, ಅವರ ಅಪ್ರಾಪ್ತ ವಯಸ್ಸಿನ ಮಗ ಪರಿಚಯಸ್ಥ ಹುಡುಗಿಯ ಜೊತೆ ಸಮಯ ಕಳೆಯುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಅವರ ಬಳಿಗೆ ಬಂದು ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ನಿಮ್ಮ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆಂದು ಬೆದರಿಕೆ ಹಾಕಿದರು ಎಂದು ಆರೋಪಿಸಲಾಗಿದೆ.
ಬೆದರಿಕೆ ಮತ್ತು ದ್ವೇಷ ಭಾಷಣ ಎರಡನ್ನೂ ಒಳಗೊಂಡಿದ್ದ ಈ ವೀಡಿಯೊವನ್ನು ನಂತರ ವಾಟ್ಸಾಪ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳಲಾಯಿತು. ದೂರಿನ ಮೇರೆಗೆ, ಪೊಲೀಸರು ಅಪರಾಧ ಸಂಖ್ಯೆ 54/2025 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) 2023 ರ ಅಡಿಯಲ್ಲಿ ಕಾನೂನುಬಾಹಿರ ಬಂಧನ, ಹಲ್ಲೆ, ಬೆದರಿಕೆ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುವುದು ಸೇರಿದಂತೆ ಹಲವಾರು ಸೆಕ್ಷನ್ಗಳನ್ನು ಅನ್ವಯಿಸಲಿದೆ. ಇಬ್ಬರು ಅಪ್ರಾಪ್ತ ವಯಸ್ಕರ ಗೌಪ್ಯತೆಯನ್ನು ಉಲ್ಲಂಘಿಸುವುದಲ್ಲದೆ, ಕೋಮು ಸಾಮರಸ್ಯವನ್ನು ಕದಡುವ ಬೆದರಿಕೆಯನ್ನುಂಟು ಮಾಡುವ ಪ್ರಕರಣದಲ್ಲಿ ಈ ವೀಡಿಯೊವನ್ನು ಈಗ ಸಂಭಾವ್ಯ ಸಾಕ್ಷಿಯಾಗಿ ಪರಿಗಣಿಸಲಾಗುತ್ತಿದೆ.
ಆರೋಪಿಗಳನ್ನು ಕಡಬದ ಕುದ್ಮಾರು ನಿವಾಸಿ ಪುರುಷೋತ್ತಮ (43) ಮತ್ತು ಪುತ್ತೂರಿನ ಆರ್ಯಾಪು ನಿವಾಸಿ ರಾಮಚಂದ್ರ (38) ಎಂದು ಗುರುತಿಸಲಾಗಿದೆ. ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ.
ಪ್ರಕರಣದ ಸಂತ್ರಸ್ಥರಿಬ್ಬರೂ ಅಪ್ರಾಪ್ತರಾಗಿರುವುದರಿಂದ, ಪ್ರಕರಣದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಯಾವುದೇ ಮಾಧ್ಯಮಗಳು ಪ್ರಸಾರ ಮಾಡುವಾಗ ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ ನ್ಯಾಯ ನಿಯಮಾವಳಿಗಳನ್ನು ಪಾಲಿಸಬೇಕಾಗಿ ಸೂಚಿಸಲಾಗಿದೆ. ಯಾವುದೇ ರೀತಿಯ ಮಾಧ್ಯಮ ಅಥವಾ ಡಿಜಿಟಲ್ ವೇದಿಕೆಯಲ್ಲಿ ಅವರ ಹೆಸರುಗಳು, ಫೋಟೋಗಳು ಅಥವಾ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸುವ ಯಾವುದೇ ಪ್ರಯತ್ನವು ಶಿಕ್ಷಾರ್ಹ ಅಪರಾಧವಾಗಿದೆ.
ಪುತ್ತೂರು: ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ, ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ಪುತ್ರ, ಆರೋಪಿ ಶ್ರೀಕೃಷ್ಣ ಜೆ ರಾವ್ ನನ್ನು ಪೊಲೀಸರು ಜು.4ರಂದು ರಾತ್ರಿ ಮೈಸೂರಿನಲ್ಲಿ ಬಂಧಿಸಿದ್ದು, ಜು.5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿ ಪರಾರಿಯಾಗಲು ಸಹಕರಿಸಿದ ಹಿನ್ನಲೆಯಲ್ಲಿ ಆರೋಪಿಯ ತಂದೆ ಪಿಜಿ ಜಗನ್ನಿವಾಸ ರಾವ್ ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಬಂಧಿಸಿದ್ದರು. ಸಂಜೆ ಮಗನೊಂದಿಗೆ ತಂದೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಪಿ ಜಿ ಜಗನ್ನಿವಾಸ ರಾವ್ ಗೆ ಜಾಮೀನು ಮಂಜೂರು ಮಾಡಿದೆ.
ಮಂಗಳೂರು: ಮಂಗಳೂರಿನ ಹಿಂದೂ ಜಾಗರಣಾ ವೇದಿಕೆಯ ದ.ಕ ಜಿಲ್ಲಾ ಸಹ ಸಂಯೋಜಕ ಸಮಿತ್ರಾಜ್ ಧರೆಗುಡ್ಡೆ ಎಂಬಾತನ ಮೊಬೈಲ್ನಲ್ಲಿ ಭಾರೀ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಪ್ರಕರಣವೊಂದರ ವಿಚಾರಣೆ ವೇಳೆ ಮೊಬೈಲ್ ತನಿಖೆಯಲ್ಲಿ ಹಲವು ಸ್ಪೋಟಕ ವಿಡಿಯೋಗಳು ಪತ್ತೆಯಾಗಿದೆ. ಮೊಬೈಲ್ ಡಾಟಾ Extract ವೇಳೆ ಈ ವಿಡಿಯೋಗಳನ್ನು ಕಂಡು ಮೂಡಬಿದಿರೆ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.
ಹಿಂದೂ ಜಾಗರಣಾ ವೇದಿಕೆಯ ದ.ಕ ಜಿಲ್ಲಾ ಸಹ ಸಂಯೋಜಕ ಸಮಿತ್ರಾಜ್ ಧರೆಗುಡ್ಡೆಯ ಮೊಬೈಲ್ನಲ್ಲಿ ಪತ್ತೆಯಾದ ಐವತ್ತಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳಲ್ಲಿ ಕರಾವಳಿಯ ಪ್ರಭಾವಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಕೂಡ ಪತ್ತೆಯಾಗಿದೆ ಎಂಬ ಬಗ್ಗೆ ಭಾರೀ ಚರ್ಚೆಯಾಗಿದ್ದು, ಮಂಗಳೂರು ಪೊಲೀಸರ ತನಿಖೆ ವೇಳೆ ಅಶ್ಲೀಲ ವಿಡಿಯೋ ಪತ್ತೆಯಾಗಿದೆ ಎಂಬ ಬಗ್ಗೆ ಬಿಸಿಬಿಸಿ ಚರ್ಚೆ ಶುರುವಾಗಿದೆ. ಆದರೆ ಇದರ ಸತ್ಯಾಸತ್ಯತೆ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ.
ಮಂಗಳೂರು, ಜುಲೈ 1, 2025: ಮಂಗಳೂರು ನಗರದ ವಲಚ್ಚಿಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಸಾಹಸಿಕ ವಾಹನ ಚಾಲನೆಯಲ್ಲಿ ತೊಡಗಿದ್ದ ಯುವಕರ ವಿರುದ್ಧ ಮಂಗಳೂರು ನಗರ ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಗಮನ ಸೆಳೆದ ಸಂಚಾರ ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಮತ್ತು ಅವರ ಸಿಬ್ಬಂದಿಗಳು ಕೂಡಲೇ ಕಾರ್ಯಪ್ರವೃತ್ತರಾದರು.
ದಿನಾಂಕ 01-07-2025 ರಂದು ಈ ಯುವಕರನ್ನು ಪತ್ತೆಹಚ್ಚಿದ ಪೊಲೀಸರು, ಅವರನ್ನು ವಿಚಾರಣೆಗೆ ಒಳಪಡಿಸಿ ಸೂಕ್ತ ತಿಳುವಳಿಕೆ ನೀಡಿದ್ದಾರೆ. ಸಂಚಾರ ನಿಯಮಗಳ ಉಲ್ಲಂಘನೆಗಾಗಿ ಆರೋಪಿತ ಯುವಕರಿಗೆ 6,500 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ.
ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಸಾಹಸಿಕ ಚಾಲನೆಯಿಂದ ದೂರವಿರುವಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.
ಮಂಗಳೂರು: ಹಾಡುಹಗಲಿನಲ್ಲಿ ವ್ಯಕ್ತಿಯೋರ್ವರನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುಲ್ಕಿ ತಾಲೂಕಿನ ಪಕ್ಷಿಕೆರೆಯ ಕೆಮ್ರಾಲ್ ನಿವಾಸಿ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಎಂದು ಗುರುತಿಸಲಾಗಿದೆ.
2020 ನೇ ಸಾಲಿನಲ್ಲಿ ಮುಲ್ಕಿ ವಿಜಯ ಸನ್ನಿದಿ ಹೆದ್ದಾರಿ ಬಳಿ ಹಾಡುಹಗಲಿನಲ್ಲಿ ಭೀಕರವಾಗಿ ವ್ಯಕ್ತಿಯೋರ್ವರನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಜಾಮೀನು ರದ್ದಾದ ಬಳಿಕ ಆರೋಪಿ ಮೊಹಮ್ಮದ್ ಮುಸ್ತಫಾ ನಕಲಿ ಪಾಸ್ಪೋರ್ಟ್ ಬಳಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದ. ಬಳಿಕ 2024 ರ ಎಪ್ರಿಲ್ ತಿಂಗಳಿನಲ್ಲಿ ಆರೋಪಿಯು ಅಕ್ರಮವಾಗಿ ಓಮನ್ ದೇಶದಿಂದ ಭಾರತಕ್ಕೆ ನೇಪಾಳದ ಮೂಲಕ ಅಕ್ರಮ ಪ್ರವೇಶಿಸಿದ್ದ.
ಆರೋಪಿಯ ವಿರುದ್ಧ ಸುಮಾರು ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಕೊಲೆ ಪ್ರಕರಣದಲ್ಲಿ ವಾರಂಟಿನಿಂದ ತಪ್ಪಿಸಿಕೊಂಡು ವಿಚಾರಣೆಗೆ ಹಾಜರಾಗದೇ ನುಣುಚಿಕೊಳ್ಳುತ್ತಿದ್ದ ಬಗ್ಗೆ ಹಾಗೂ ಅಕ್ರಮವಾಗಿ ವಿದೇಶ ಮತ್ತು ಭಾರತಕ್ಕೆ ಬಂದಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.
2020 ರಲ್ಲಿ ಕೊಲೆಯಾದ ವ್ಯಕ್ತಿ ಅಬ್ದುಲ್ ಲತೀಫ್
ಇದೀಗ ಪರಾರಿಯಾಗಿದ್ದ ಆರೋಪಿ ಮೊಹಮ್ಮದ್ ಮುಸ್ತಫಾನನ್ನು ವಿಶೇಷ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮತ್ತೆ ನ್ಯಾಯಾಂಗ ಅಭಿರಕ್ಷೆಗೆ ನೀಡಲಾಯಿತು.
2020ರ ಜೂನ್ 5ರಂದು ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಲ್ಕಿ ವಿಜಯ ಸನ್ನಿದಿ ಹೆದ್ದಾರಿ ಬಳಿ ಹಾಡುಹಗಲಿನಲ್ಲಿ ರಸ್ತೆಯಲ್ಲಿ ಅಬ್ದುಲ್ ಲತೀಫ್ ಎಂಬವನನ್ನು ಆರೋಪಿಗಳಾದ ದಾವೂದ್ ಹಕೀಂ, ಮೊಹಮ್ಮದ್ ಮುಸ್ತಾಫ ಮತ್ತು ಇತರರು ಒಟ್ಟು 10 ಜನ ಸೇರಿ ಕೊಲೆ ಮಾಡಿದ್ದರು. ಎಲ್ಲಾ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿರುತ್ತದೆ. ಹಾಲಿ ನ್ಯಾಯಾಲಯದ ವಿಚಾರಣಾ ಹಂತದಲ್ಲಿರುತ್ತದೆ.
ಈ ಮಧ್ಯೆ ಆರೋಪಿ ಮೊಹಮ್ಮದ್ ಮುಸ್ತಫಾ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಿನಾಂಕ 2020ರ ಅಕ್ಟೋಬರ್ 19ರಂದು ಜಾಮೀನು ಪಡೆದಿರುತ್ತಾನೆ. ನಂತರ 2022ರ ಏಪ್ರಿಲ್ 22ರಂದು ನ್ಯಾಯಾಲಯವು ಆರೋಪಿಯ ಜಾಮೀನು ರದ್ದು ಮಾಡಿರುತ್ತದೆ. ಅಂದಿನಿಂದಲೂ ಆರೋಪಿ ಮೊಹಮ್ಮದ್ ಮುಸ್ತಫಾನು ತಲೆಮರೆಸಿಕೊಂಡು ನಕಲಿ ಪಾಸ್ಪೋರ್ಟ್ ಮೂಲಕ ವಿದೇಶಕ್ಕೆ ಪರಾರಿಯಾಗಿದ್ದನು.
ತಲೆಮರೆಸಿಕೊಂಡ ವಾರಂಟ್ ಆರೋಪಿ ಮೊಹಮ್ಮದ್ ಮುಸ್ತಫಾನ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿತ್ತು. ಇದೀಗ ಆರೋಪಿಯನ್ನು 2025ರ ಜೂನ್ 30ರಂದು ಮುಲ್ಕಿಯ ಪಕ್ಷಿಕೆರೆ ಬಳಿ ಪತ್ತೆ ಮಾಡಿ ಮುಂದಿನ ಕ್ರಮದ ಬಗ್ಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ವಿಚಾರಣೆ ವೇಳೆ ಆರೋಪಿಯು ನಕಲಿ ಪಾಸ್ಪೋರ್ಟ್ ಪಡೆದು ಓಮನ್ ರಾಷ್ಟ್ರಕ್ಕೆ ಪರಾರಿಯಾಗಿ ನಂತರ ನೇಪಾಳ ಮೂಲಕ ಭಾರತ ದೇಶಕ್ಕೆ ಬಂದಿರುವುದಾಗಿ ತಿಳಿದುಬಂದಿದೆ.
ಆರೋಪಿಯು ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಈತನ ವಿರುದ್ದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಗ್ಗೆ ಮತ್ತು ವಿದೇಶ ಮತ್ತು ಭಾರತಕ್ಕೆ ಅಕ್ರಮವಾಗಿ ಪ್ರವೇಶ ಮಾಡಿರುವ ಪ್ರಕರಣವನ್ನು ಮುಲ್ಕಿ ಠಾಣೆಯಲ್ಲಿ ದಾಖಲಿಸಿಕೊಂಡಿರುತ್ತದೆ. ನಕಲಿ ಪಾಸ್ಪೋರ್ಟ್ ಹೊಂದಿರುವ ಬಗ್ಗೆ ಬೆಂಗಳೂರಿನ ಬಸನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈತನ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ 4 ಮತ್ತು ಇತರೆ ಜಿಲ್ಲೆಯಲ್ಲಿ ಒಟ್ಟು 5 ಪ್ರಕರಣಗಳು ದಾಖಲಾಗಿರುತ್ತದೆ. ಚಿಕ್ಕಮಗಳೂರು, ಉಡುಪಿ ಜಿಲ್ಲೆಯ ಠಾಣೆಗಳಲ್ಲಿ ಈತನ ವಿರುದ್ಧ ಎರಡು ಪ್ರಕರಣಗಳಲ್ಲಿ ವಾರಂಟ್ ಬಾಕಿ ಇರುತ್ತದೆ.
ಬಂಟ್ವಾಳ (ಜೂ. 30) ಮಂಗಳೂರಿನಲ್ಲಿ ಸೃಷ್ಟಿಯಾಗಿದ್ದ ಆತಂಕ ವಾತಾವರಣ ತಿಳಿಯಾಗುತ್ತಿದೆ. ಆದರೆ ಹ-ತ್ಯೆ ಪ್ರಕರಣದ ತನಿಖೆ ಆರೋಪಿಗಳ ಆತಂಕ ಹೆಚ್ಚಿಸಿದೆ.ರೌಡಿ ಶೀಟರ್ ಸುಹಾಶ್ ಶೆಟ್ಟಿ ಹತ್ಯೆಯಿಂದ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀಕಾರ, ದ್ವೇಷ ಭಾಷಣ ಸೇರಿದಂತೆ ಹಲವು ಸಂಘರ್ಷದ ಸನ್ನಿವೇಶಗಳು ಸೃಷಿಯಾಗಿತ್ತು. ಇದರ ನಡುವೆ ಬಂಟ್ವಾಳದ ಅಬ್ದುಲ್ ರೆಹಮಾನ್ ಹ-ತ್ಯೆಯೂ ನಡೆದಿತ್ತು. ಈ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಬಂಟ್ವಾಳ್ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಕಳೆದ ಮೇ.27ರಂದು ನಡೆದ ಬಂಟ್ವಾಳ್ ಅಬ್ದುಲ್ ರೆಹಮಾನ್ ಹ-ತ್ಯೆ ಪ್ರಕರಣದಲ್ಲಿ ಪೊಲೀಸರು ಈವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ. 9ನೇ ಆರೋಪಿ ಬಂಟ್ವಾಳದ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್. 33 ವರ್ಷದ ಶಿವಪ್ರಸಾದ್ ಹ-ತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಶಿವಪ್ರಸಾದ್ ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳ ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿದ ನ್ಯಾಯಾಲಯ ಆರೋಪಿಯನ್ನು ಪೋಲಿಸ್ ಕಸ್ಟಡಿಗೆ ನೀಡಿದೆ.
ಪುತ್ತೂರು, ಜೂನ್ 30, 2025: ಮದುವೆಯ ಭರವಸೆಯೊಂದಿಗೆ ಬಿಜೆಪಿ ನಾಯಕನ ಮಗನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯೊಬ್ಬಳು ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ ನಂತರ, ಆರೋಪಿಯ ತಂದೆಯಿಂದ ಒತ್ತಡ ಮತ್ತು ಪೊಲೀಸರ ನಿಷ್ಕ್ರಿಯತೆಯ ಆರೋಪದ ಮಧ್ಯೆ ಆರೋಪಿಯು ಪರಾರಿಯಾಗಿದ್ದಾನೆ. ಯುವತಿಯ ತಾಯಿ ತನ್ನ ಮಗಳಿಗೆ ಮತ್ತು ನವಜಾತ ಶಿಶುವಿಗೆ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಆರೋಪಿ ಕೃಷ್ಣ ಜೆ ರಾವ್, ಬಿಜೆಪಿ ನಾಯಕ ಪಿ ಜಿ ಜಗನ್ನಿವಾಸ ರಾವ್ ಅವರ ಮಗ, ಈಗಲೂ ತಲೆಮರೆಸಿಕೊಂಡಿದ್ದಾನೆ. ಪುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯುವತಿಯ ತಾಯಿ, ತಮ್ಮ ಮಗಳು ವಿದ್ಯಾರ್ಥಿನಿಯಾಗಿದ್ದಾಗಿನಿಂದ ಕೃಷ್ಣನೊಂದಿಗೆ ಸಂಬಂಧದಲ್ಲಿದ್ದಳು ಎಂದು ಹೇಳಿದ್ದಾರೆ. ಈ ಸಂಬಂಧವು ಮದುವೆಯ ಭರವಸೆಯೊಂದಿಗೆ ದೈಹಿಕವಾಗಿ ಮುಂದುವರೆದಿದೆ. ಆದರೆ, ಯುವತಿಗೆ ಏಳನೇ ತಿಂಗಳ ಗರ್ಭಧಾರಣೆಯಾಗಿದ್ದು ಕುಟುಂಬಕ್ಕೆ ತಿಳಿಯಿತು.
“ನಾನು ಕೃಷ್ಣನ ತಂದೆಯನ್ನು ಭೇಟಿಯಾದಾಗ, ಅವರು ಮದುವೆಯ ಭರವಸೆ ನೀಡಿದ್ದರು,” ಎಂದು ತಾಯಿ ಹೇಳಿದ್ದಾರೆ. “ಆದರೆ, ಕೃಷ್ಣನೇ ನೇರವಾಗಿ ಕರೆ ಮಾಡಿ, ಮದುವೆಗೆ ಒತ್ತಾಯಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ.”
ಕುಟುಂಬವು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾದಾಗ, ಆರೋಪಿಯ ತಂದೆ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಫೋನ್ ಮೂಲಕ ಸಂಪರ್ಕಿಸಿದ್ದಾರೆ. ಶಾಸಕರು ದೂರು ದಾಖಲಿಸದಂತೆ ಮನವೊಲಿಸಿದ್ದಾರೆ ಎಂದು ಯುವತಿಯ ತಾಯಿ ಆರೋಪಿಸಿದ್ದಾರೆ. ಮದುವೆ ಆಗಲಿದೆ ಎಂದು ಭರವಸೆ ನೀಡಿ, ಯುವಕನ ಭವಿಷ್ಯದ ಚಿಂತೆಯನ್ನು ಒತ್ತಿಹೇಳಿದ್ದಾರೆ.
ಜಗನ್ನಿವಾಸ ರಾವ್ ಅವರು ಠಾಣೆಯಲ್ಲಿ ಮದುವೆಗೆ ಒಪ್ಪಿಗೆಯ ಲಿಖಿತ ಭರವಸೆ ನೀಡಿದ್ದಾರೆ. ಆದರೆ, ಜೂನ್ 22 ರಂದು, ಕೃಷ್ಣ 21 ವರ್ಷ ತುಂಬುವ ಒಂದು ದಿನ ಮೊದಲು, ಅವನು ಮದುವೆಯನ್ನು ನಿರಾಕರಿಸಿದ್ದಾನೆ. ಆತನ ತಾಯಿ, “ಮದುವೆ ಎಂದಿಗೂ ಆಗದು, ಕನಸಿನಲ್ಲೂ ಸಹ” ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ. ಕುಟುಂಬಕ್ಕೆ ಮಗುವಿನ ಗರ್ಭಪಾತಕ್ಕೆ ಹಣವನ್ನೂ ಒಡ್ಡಲಾಗಿತ್ತು, ಆದರೆ ಅವರು ನಿರಾಕರಿಸಿದ್ದಾರೆ.
ಯುವತಿಯು ಮಗುವಿಗೆ ಜನ್ಮ ನೀಡಿದ್ದಾಳೆ. ಕೃಷ್ಣನೇ ತಂದೆ ಎಂದು ಕುಟುಂಬವು ಸ್ಥಿರವಾಗಿ ನಂಬಿದ್ದು, ಡಿಎನ್ಎ ಪರೀಕ್ಷೆಗೆ ಸಿದ್ಧವಾಗಿದೆ. ಆದರೆ, ಜಗನ್ನಿವಾಸ ರಾವ್ ಡಿಎನ್ಎ ಪರೀಕ್ಷೆಗೆ ವಿರೋಧ ವ್ಯಕ್ತಪಡಿಸಿ, ಕೃಷ್ಣನು ಮಹಾಲಿಂಗೇಶ್ವರ ದೇವಸ್ಥಾನದ ಮುಂದೆ ಮಗು ತನ್ನದಲ್ಲ ಎಂದು ಪ್ರಮಾಣ ಮಾಡಲಿ ಎಂದು ಸಲಹೆ ನೀಡಿದ್ದಾರೆ. ಮಗುವಿಗೆ ಮೂರು ತಿಂಗಳಾದ ನಂತರ ಕುಟುಂಬವು ಡಿಎನ್ಎ ಪರೀಕ್ಷೆಗೆ ಮುಂದಾಗಲಿದೆ.
‘ಶಾಸಕ ಅಶೋಕ್ ರೈ, ಬಲಪಂಥೀಯ ನಾಯಕರು ಯಾವುದೇ ಬೆಂಬಲ ನೀಡಲಿಲ್ಲ’
ಯುವತಿಯ ತಾಯಿ, ಕಾನೂನು ಕ್ರಮಕ್ಕೆ ಮೊದಲು ಪ್ರಯತ್ನಿಸಿದಾಗ ಶಾಸಕ ಅಶೋಕ್ ರೈ ತಡೆದಿದ್ದಾರೆ ಎಂದು ಹೇಳಿದ್ದಾರೆ. ಹಿಂದೂ ನಾಯಕರಾದ ಅರುಣ್ ಕುಮಾರ್ ಪುತಿಲ, ಮುರಳಿಕೃಷ್ಣ ಹಸಂತಡ್ಕ, ಮತ್ತು ಶರಣ್ ಪಂಪ್ವೆಲ್ ಅವರಿಂದಲೂ ಯಾವುದೇ ಬೆಂಬಲ ಸಿಗಲಿಲ್ಲ. “ಅರುಣ್ ಪುತಿಲ ಒಡ್ಡಗೊಡ್ಡಲಿಲ್ಲ, ಮುರಳಿಕೃಷ್ಣ ಯುವಕ ಒಪ್ಪುವುದಿಲ್ಲ ಎಂದು ಹೇಳಿದರು, ನಂತರ 10 ಲಕ್ಷ ರೂ.ಗೆ ಗರ್ಭಪಾತಕ್ಕೆ ಸಲಹೆ ನೀಡಿದರು,” ಎಂದು ತಾಯಿ ಆರೋಪಿಸಿದ್ದಾರೆ.
“ನನ್ನ ಮಗಳು ಬೇರೆ ಸಮುದಾಯದವಳಾಗಿದ್ದರೆ, ಈ ಮದುವೆ ಈಗಾಗಲೇ ಆಗಿರುತ್ತಿತ್ತು,” ಎಂದು ತಾಯಿ, ಯುವತಿಯ ಜಾತಿ ಮತ್ತು ಹಿನ್ನೆಲೆಯಿಂದಾಗಿ ಸ್ಥಳೀಯ ನಾಯಕರು ನಿರಾಸಕ್ತಿ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.
ಕೃಷ್ಣ ನಾಪತ್ತೆಯಾಗಿ ಐದು ದಿನಗಳಾದರೂ, ಪೊಲೀಸರು ಇನ್ನೂ ಅವನನ್ನು ಬಂಧಿಸಿಲ್ಲ. ಕುಟುಂಬವು ಪೊಲೀಸ್ ಅಧೀಕ್ಷಕರನ್ನು ಭೇಟಿಯಾಗಿದೆ, ಆದರೆ ಪೊಲೀಸ್ ಇಲಾಖೆ ಮೌನವಾಗಿದೆ ಎಂದು ಅವರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.
ಯುವತಿಯ ತಾಯಿ, ತಮ್ಮ ಮಗಳಿಗೆ ಮತ್ತು ನವಜಾತ ಶಿಶುವಿಗೆ ನ್ಯಾಯಕ್ಕಾಗಿ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.