Category: Education

  • ಯುವನಿಧಿ ವಿಶೇಷ ನೋಂದಣಿ ಅಭಿಯಾನ

    ಉಡುಪಿ, ಜುಲೈ 21,2025: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೊಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ಅರ್ಹ ಅಭ್ಯರ್ಥಿಗಳು ಅಗಸ್ಟ್ 7 ರ ವರೆಗೆ ನಡೆಯಲಿರುವ ಯುವನಿಧಿ ವಿಶೇಷ ನೋಂದಣಿ ಅಭಿಯಾನದಲ್ಲಿ ಕರ್ನಾಟಕ ಒನ್, ಗ್ರಾಮ ಒನ್, ಸೇವಾ ಸಿಂಧೂ ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ನೋಂದಣಿ ಹಾಗೂ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಬಿ. ಬ್ಲಾಕ್ ರೂ. ನಂಬರ್ 201 ಮೊದಲನೆ ಮಹಡಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    2024-25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರಿಗೆ ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು 3,000 ರೂ. (ಪದವೀಧರ ನಿರುದ್ಯೋಗಿಗಳಿಗೆ) ಹಾಗೂ 1,500 ರೂ. (ಡಿಪ್ಲೋಮಾ ಪಡೆದ ನಿರುದ್ಯೋಗಿಗಳಿಗೆ) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

    ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ: ಯುವನಿಧಿ ಯೋಜನೆಯ ಫಲಾನುಭವಿಗಳು ತ್ರೈಮಾಸಿಕ (ಮೂರು ತಿಂಗಳಿಗೊಮ್ಮೆ) ಮೇ, ಅಗಸ್ಟ್, ನವಂಬರ್ ಹಾಗೂ ಫೆಬ್ರವರಿ ಮಾಹೆಗಳಲ್ಲಿ 25 ನೇ ತಾರೀಕಿನ ಒಳಗಾಗಿ ಆನ್ಲೈನ್ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು.

    ಸ್ವಯಂ ಘೋಷಣೆ ನೀಡದ್ದಿದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ. ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾ ಸಿಂಧೂ ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಸ್ವಯಂ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574869 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

  • ನಾವುಂದ ಪ್ರೌಢಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಸಂಜು ನಾಯ್ಕ್ ಆಯ್ಕೆ 

    ನಾವುಂದ: ಸರ್ಕಾರಿ ಪದವಿ ಪೂರ್ವ ಕಾಲೇಜು, ನಾವುಂದ ಇದರ ಪ್ರೌಢಶಾಲೆ ವಿಭಾಗದ ಎಸ್.ಡಿ.ಎಮ್.ಸಿ ಪುನಃರಚನೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಹೇರೂರು ಗ್ರಾಮದ ಮುತ್ತಾಬೇರಿನ ಸಂಜು ನಾಯ್ಕ್ ಅವಿರೋಧವಾಗಿ ಆಯ್ಕೆಯಾದರು.

  • New Shams School Joins CIO’s “Hands in Soil, Hearts with India” Mission Plantation Campaign

    Bhatkal, 12 July 2025: New Shams School in Bhatkal has enthusiastically partnered with the Children Islamic Organisation (CIO) for the “Hands in Soil, Hearts with India” Mission Plantation campaign, running from 13 to 31 July 2025. This initiative, part of CIO’s ambitious goal to engage one million children across India in planting and nurturing trees, aims to foster environmental consciousness and responsibility among the youth.

    The campaign kicked off with a press release on 10 July 2025 at New Shams School, where school officials outlined their commitment to the cause. “We are proud to join CIO’s Mission Plantation to inspire our students to become stewards of the environment,” said Principal of New Shams School. “There will be series of programs during this campaign starting from press conference. students will be visiting Government offices in upcoming days to create awareness, in addition to this we are planning eco-rally next week and appeal all the institutions to join hands in this campaign”

    Campaign Highlights

    • Eco Rally for Awareness: Students, teachers, and community members will participate in an Eco Rally to spread awareness about the importance of tree planting and environmental conservation.
    • Sapling Distribution: In collaboration with local government bodies, the school will distribute healthy saplings to students for planting in school premises, Masjids etc.
    • Selfie with a Sapling: Students are encouraged to take selfies with their planted saplings and share them on social media to inspire others, using hashtags promoted by CIO.
    • Green Warrior Award: The school will honor students who demonstrate exceptional dedication to nurturing their trees with the “Green Warrior Award,” celebrating their role as environmental champions.

    New Shams School will also organize engaging activities such as Green Pledge ceremonies, nature walks, and creative contests involving drawings, poetry, and storytelling to make the campaign educational and fun. Each student will be encouraged to name their tree and document their care journey, fostering a personal connection with nature.

    CIO’s inspiring slogans, including “Where every child plants a tree, a greener world will bloom!” and “A leaf shall smile – every day shall bring greenery!” will resonate across the school, motivating students to take pride in their contributions.

    The school has called upon parents, teachers, and the Bhatkal community to join this movement. “Let’s unite to make Bhatkal greener and healthier. Every tree planted by our children is a step toward a brighter future,” the principal added.

    For more information on how to participate, contact New Shams School or visit the CIO campaign page.

  • ಜುಲೈ 11 ರಂದು ನೇರ ಸಂದರ್ಶನ

    ಉಡುಪಿ, ಜುಲೈ 10, 2025: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 11 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ.

    ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ  ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. 

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

  • ಬಾಲ ಪ್ರತಿಭೆ ಸಂಜಿತ್ ಎಂ. ದೇವಾಡಿಗ ಅವರಿಗೆ ಸನ್ಮಾನ

    ಕುಂದಾಪುರ: ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಉಡುಪಿ ವಲಯ ಇವರ ಸಹಯೋಗದಲ್ಲಿ ಇತ್ತೀಚೆಗೆ ಹಿರಿಯಡ್ಕದಲ್ಲಿ ನಡೆದ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಗಾರ 2025 ರಲ್ಲಿ ಗಂಗೊಳ್ಳಿಯ ಸಾಕ್ಸೋಫೋನ್ ಮತ್ತು ಚಿತ್ರಕಲಾ ಬಾಲ ಪ್ರತಿಭೆ ಸಂಜಿತ್ ಎಮ್. ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಜಮ್ಮು-ಕಾಶ್ಮೀರ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಪ್ರಸಾದ್, ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಮಂಜುನಾಥ ಭಟ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಲೋಕೇಶ್ ಸಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಯಲ್ಲಮ್ಮ ಕೃಷಿ ಅರ್ಥಶಾಸ್ತ್ರಜ್ಞರಾದ ಎನ್. ಎಸ್. ಶೆಟ್ಟಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಯೋಗ ನರಸಿಂಹ ಸ್ವಾಮಿ ಕೆ. ಎಂ., ಶಾಲಾ ಶಿಕ್ಷಣ ಇಲಾಖೆಯ ನಾಗರಾಜ್, ಎಸ್‌ಡಿಎಂಸಿ ಉಪಾಧ್ಯಕ್ಷರಾದ ಬಿಎಲ್ ವಿಶ್ವಾಸ ಭಟ್, ಉಪ ಪ್ರಾಂಶುಪಾಲ ಪ್ರಕಾಶ್ ಪ್ರಭು, ತಾಲೂಕು ಚಿತ್ರಕಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಬಿ. ಪಿ., ಹಾಗೂ ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಕಡಬ ಮೊದಲಾದವರು ಉಪಸ್ಥಿತರಿದ್ದರು.

    ಈತ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಅವರು ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಹಾಗೂ ಸ್ಯಾಕ್ಸೋಫೋನ್ ಕಲಾವಿದ ಮಾಧವ ಎಮ್. ದೇವಾಡಿಗ ಮತ್ತು ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ.

  • ಗಂಗೊಳ್ಳಿ: ಸ್ಟೆಲ್ಲಾ ಮಾರಿಸ್ ಕನ್ನಡ ಮಾಧ್ಯಮ ಹಳೆ ವಿದ್ಯಾರ್ಥಿಗಳ ಸಂಘದ ನೂತನ ಅಧ್ಯಕ್ಷೆ, ಉಪಾಧ್ಯಕ್ಷ ಆಯ್ಕೆ

    ಗಂಗೊಳ್ಳಿ: ಸ್ಟೆಲ್ಲಾ ಮಾರಿಸ್ ಕನ್ನಡ ಮಾಧ್ಯಮ ಹಳೆ ವಿದ್ಯಾರ್ಥಿಗಳ ಸಂಘ, ಗಂಗೊಳ್ಳಿಯ ನೂತನ ಅಧ್ಯಕ್ಷೆಯಾಗಿ ಫಿಲೋಮಿನಾ ಫೆರ್ನಾಂಡಿಸ್ ಹಾಗೂ ಉಪಾಧ್ಯಕ್ಷರಾಗಿ ಝಹೀರ್ ಅಹ್ಮದ್ ನಾಖುದಾ ಆಯ್ಕೆಯಾಗಿದ್ದಾರೆ.

    ಹಳೆ ವಿದ್ಯಾರ್ಥಿಗಳ ಸಂಘವು ಅವರಿಬ್ಬರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದೆ.

    ಸ್ಟೆಲ್ಲಾ ಮಾರಿಸ್ ಶಾಲೆಯ ಇತಿಹಾಸದ ಮುಖ್ಯಾಂಶಗಳು:

    • ಸ್ಥಾಪನೆ: ಸ್ಟೆಲ್ಲಾ ಮಾರಿಸ್ ಗರ್ಲ್ಸ್ ಹೈಸ್ಕೂಲ್ 13 ಜೂನ್ 1966ರಂದು 21 ವಿದ್ಯಾರ್ಥಿನಿಯರೊಂದಿಗೆ ಆರಂಭ.
    • ಉದ್ದೇಶ: ಗಂಗೊಳ್ಳಿಯ ಮೀನುಗಾರಿಕೆ ಆಧಾರಿತ ಗ್ರಾಮದಲ್ಲಿ, ವಿಶೇಷವಾಗಿ ಬಡತನದ ಹಿನ್ನೆಲೆಯ ಹೆಣ್ಣುಮಕ್ಕಳಿಗೆ ಶಿಕ್ಷಣವನ್ನು ಒದಗಿಸುವ ಗುರಿ.
    • ಪ್ರಗತಿ: 1967ರಲ್ಲಿ “ಕೃಪಾ ಗ್ರಹ” ಬೋರ್ಡಿಂಗ್ ಹೌಸ್ ಆರಂಭ; 1968ರಲ್ಲಿ ಸೇಂಟ್ ಜೋಸೆಫ್‌ನ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ; 1984ರಲ್ಲಿ ಬಾಲಕರಿಗೂ ಪ್ರವೇಶ.
    • ಗೋಲ್ಡನ್ ಜುಬಿಲಿ: 2016ರ ಡಿಸೆಂಬರ್ 17-18ರಂದು ಶಾಲೆಯ 50ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು.
  • ಡಿಪ್ಲೋಮಾ ಪ್ರವೇಶಾತಿ : ಅವಧಿ ವಿಸ್ತರಣೆ

    ಉಡುಪಿ, ಜೂನ್ 05, 2025: ಪ್ರಸಕ್ತ ಸಾಲಿನಲ್ಲಿ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ ಹಾಗೂ ಐ.ಟಿ.ಐ, ದ್ವಿತೀಯ ಪಿ.ಯು.ಸಿ ವಿಜ್ಞಾನ ಅಥವಾ ದ್ವಿತೀಯ ಪಿ.ಯು.ಸಿ ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಲ್ಯಾಟರಲ್ ಎಂಟ್ರಿ ಮೂಲಕ ನೇರವಾಗಿ ಮೂರನೇ ಸೆಮಿಸ್ಟರ್ಗೆ ಪ್ರವೇಶ ಪಡೆಯುವ ಸಲುವಾಗಿ ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನವಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ : 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

  • ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ

    ಗಂಗೊಳ್ಳಿ:  ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಪಿಯು ಶಿಕ್ಷಣವು ಉತ್ತಮವಾದ ತಳಹದಿಯನ್ನು ನೀಡುತ್ತದೆ ಹಾಗಾಗಿ ಸರಿಯಾದ ರೀತಿಯಲ್ಲಿ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಜಿ.ಎಸ್‌. ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಹೇಳಿದರು.   

    ಅವರು ಇಲ್ಲಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. 

    ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ನಿಸರ್ಗ, ಮನಾಲಿ, ಪ್ರಾರ್ಥನಾ, ಪೂರ್ವಿಕ,  ಅದಿತಿ,  ಸ್ಕಂದ, ಬಿಂದುಶ್ರೀ ಅವರನ್ನು ಅಭಿನಂದಿಸಲಾಯಿತು. 

    ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್. ಶುಭ ಹಾರೈಸಿದರು. ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ.ಎ ಕಾಲೇಜಿನ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜು ಕಛೇರಿಯ ಮುಖ್ಯಸ್ಥೆ ಪ್ರಮೋದ  ಪೈ. ಎಮ್. ಜಿ. ಕಛೇರಿ ಸೌಲಭ್ಯಗಳು ಮತ್ತು ವಿದ್ಯಾರ್ಥಿ ವೇತನದ ಮಾಹಿತಿ ನೀಡಿದರು. ಗಣಿತಶಾಸ್ತ್ರ ಉಪನ್ಯಾಸಕ ಪ್ರವೀಣ್ ಕಾಮತ್ ಸಿಬ್ಬಂದಿಗಳನ್ನು ಪರಿಚಯಿಸಿದರು.

    ಹಿಂದಿ ಉಪನ್ಯಾಸಕ ನಾರಾಯಣ ಈ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ಉಪನ್ಯಾಸಕ ಸುಜಯಿಂದ್ರ ಹಂದೆ  ಸಹಕರಿಸಿದರು. ಕಾಲೇಜಿನ ಸಂಸ್ಕಂತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್. ಸಿ.  ಸ್ವಾಗತಿಸಿ,  ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್ ಕೆ. ವಂದಿಸಿದರು.

  • NCERT Cracks Down on Pirated Textbooks: Over 5 Lakh Copies Seized, 29 FIRs Filed

    New Delhi, June 2, 2025: The National Council of Educational Research and Training (NCERT) has intensified its fight against the illegal manufacture, distribution, and sale of pirated textbooks, adopting a zero-tolerance policy. In the last 14 months, NCERT, in collaboration with police authorities across India, has seized over 5 lakh pirated copies of its textbooks, along with a substantial amount of printing paper and machinery valued at more than Rs 20 crore.

    The crackdown has led to the registration of 29 First Information Reports (FIRs) against printers, warehouse owners, and retailers involved in the piracy racket. Recent operations include a significant raid in Muzaffarnagar, Uttar Pradesh, where over 1.5 lakh pirated NCERT textbooks worth Rs 2 crore were confiscated, alongside a truck, two cars, and printing plates. Eight individuals were arrested during this raid. Additionally, a printing press in Samalkha, Haryana, was targeted, resulting in the seizure of more printing plates and machinery used for producing counterfeit textbooks.

    The Ministry of Education has emphasized that these actions, spanning the last 14 months, are part of a broader effort to curb piracy, which undermines the quality of education and violates the Copyright Act, 1957. NCERT remains committed to ensuring the availability of authentic, high-quality textbooks at affordable prices for students across the country.

  • ಗಂಗೊಳ್ಳಿ: ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್‌ನ 22ನೇ ವರ್ಷದ ಉಚಿತ ಪುಸ್ತಕ ವಿತರಣಾ ಸಮಾರಂಭ

    ಗಂಗೊಳ್ಳಿ, ಜೂನ್ 2, 2025 – ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್‌ ವತಿಯಿಂದ ಆಯೋಜಿಸಲಾಗಿದ್ದ 22ನೇ ವರ್ಷದ ಉಚಿತ ಪುಸ್ತಕ ವಿತರಣಾ ಸಮಾರಂಭವು ಜೂನ್ 1, 2025ರ ಭಾನುವಾರ ಮಧ್ಯಾಹ್ನ 4:00 ಗಂಟೆಗೆ ಶ್ರೀ ರಾಮ ಮಂದಿರ, ಗಂಗೊಳ್ಳಿಯಲ್ಲಿ ಯಶಸ್ವಿಯಾಗಿ ನೆರವೇರಿತು. 1991ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಶೈಕ್ಷಣಿಕ ಪ್ರತಿಭೆಯನ್ನು ಗೌರವಿಸುವ ಮತ್ತು ಶಿಕ್ಷಣದ ಉತ್ಸಾಹವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶರತ್‌ಕುಮಾರ್ ರಾವ್ ಮಂಗಳೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಸದಾಶಿವ ಖಾರ್ವಿ (ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ), ಶ್ರೀ ಸುಬ್ರಹ್ಮಣ್ಯ ಶೆಟ್ಟಿ (ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ), ಶ್ರೀ ರಾಜೇಂದ್ರ ಸೇರುಗಾರ (ಗ್ರಾಮ ಪಂಚಾಯತ್ ಗಂಗೊಳ್ಳಿ ಸದಸ್ಯ), ಶ್ರೀ ರಾಘವೇಂದ್ರ ಖಾರ್ವಿ (ಬೆಂಗಳೂರಿನ ಉದ್ಯಮಿ), ಶ್ರೀ ನಾಗರಾಜ ಖಾರ್ವಿ (ಶ್ರೀ ಗಣೇಶೋತ್ಸವ ಸಮಿತಿ ಲೈಟ್‌ಹೌಸ್ ಗಂಗೊಳ್ಳಿ ಅಧ್ಯಕ್ಷ), ಶ್ರೀ ಐ. ರಾಘವೇಂದ್ರ ಪೈ (ಗಂಗೊಳ್ಳಿ ಪತ್ರಕರ್ತ), ಶ್ರೀ ನರೇಂದ್ರ ಎಸ್. ಗಂಗೊಳ್ಳಿ (ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಗಂಗೊಳ್ಳಿ ಉಪನ್ಯಾಸಕ), ಶ್ರೀ ಚಂದ್ರ ಕೆ. ಖಾರ್ವಿ (ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ಲೈಟ್‌ಹೌಸ್ ಗಂಗೊಳ್ಳಿ ಅಧ್ಯಕ್ಷ), ಶ್ರೀ ಮಡಿ ಮಾಧವ ಖಾರ್ವಿ (ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ಲೈಟ್‌ಹೌಸ್ ಗಂಗೊಳ್ಳಿ ಸ್ಥಾಪಕ ಅಧ್ಯಕ್ಷ), ಮತ್ತು ಶ್ರೀಮತಿ ಬಯಂತಿ ಜ. ಖಾರ್ವಿ (ಶ್ರೀ ಜಟ್ಟಿಗೇಶ್ವರ ಮಹಿಳಾ ಮಂಡಳಿ ಲೈಟ್‌ಹೌಸ್ ಗಂಗೊಳ್ಳಿ ಅಧ್ಯಕ್ಷ) ಉಪಸ್ಥಿತರಿದ್ದರು.

    ಕಾರ್ಯಕ್ರಮದ ವಿಶೇಷತೆಯಾಗಿ, 2024-25ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ. ಅಂತಿಮ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ ದ್ವಿತೀಯ ಸ್ಥಾನ ಪಡೆದ ಕುಮಾರಿ ಸುಶ್ರೀದಾ ಎಸ್‌. ಗಾಣಿಗ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು