ತೋನ್ಸೆ: ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢಶಾಲೆ 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 74 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 16 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ತೂಬಾ ಫಿರ್ದೋಸ್ (610/625) ಶಾಲೆಗೆ ಪ್ರಥಮ, ಶೈಮಾ ನಾಝ್ ಐ. (606/625) ದ್ವಿತೀಯ ಮತ್ತು ರಿದಾ (605/625) ತೃತೀಯ ಸ್ಥಾನ ಪಡೆದಿದ್ದಾರೆ.
ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆಯ ಎಸೆಸೆಲ್ಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ ಸಾಯಿಸ್ಪರ್ಶ ಕೆ. 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.
ಈಕೆಗೆ 623 ಅಂಕಗಳು ಬಂದಿದ್ದವು. ಬಿ. ವಿ. ಜಯಸೂರ್ಯ 623 ಅಂಕಗಳೊಂದಿಗೆ 3ನೇ, ಭಕ್ತಿ ಶೆಟ್ಟಿ ಹಾಗೂ ಪ್ರಿಯಾ 622 ಅಂಕಗಳೊಂದಿಗೆ 4 ನೇ, ವಿನ್ಯಾಸ ಅಡಿಗ ಹಾಗೂ ನಿರೀಕ್ಷಾ ಎನ್. ಶೆಟ್ಟಿಗಾರ್ 621 ಅಂಕಗಳೊಂದಿಗೆ ಐದನೇ, ಸನ್ವಿತ್ ಶೆಟ್ಟಿ 620 ಅಂಕಗಳೊಂದಿಗೆ 6ನೇ , ಸಮನ್ವಿ ಎಸ್. 618 ಅಂಕಗಳೊಂದಿಗೆ 8 ನೇ, ಮತ್ತು ಅನ್ವಿತ್ ಕೆ. 616 ಅಂಕಗಳೊಂದಿಗೆ 10 ನೇ ರ್ಯಾಂಕ್ ಗಳಿಸಿದ್ದಾರೆ.
ಶಾಲೆಗೆ ಒಟ್ಟು ರಾಜ್ಯಮಟ್ಟದ 9 ರ್ಯಾಂಕ್ಗಳು ಲಭಿಸಿವೆ ಎಂದು ಶಾಲಾ ಅಧ್ಯಕ್ಷ ಹಾಗೂ ಸಂಚಾಲಕ ಬಿ. ಎಂ. ಸುಕುಮಾರ ಶೆಟ್ಟಿ ಮತ್ತು ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಪ್ರಾಂಶುಪಾಲೆ ಡಾ| ಚಿಂತನಾ ರಾಜೇಶ್ ತಿಳಿಸಿದ್ದಾರೆ.
ಕುಂದಾಪುರ: ಎಜ್ಯುಕೇಶನ್ ಸೊಸೈಟಿ ರಿ. ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಈ ಬಾರಿ ಎಸ್. ಎಸ್. ಎಲ್. ಸಿ ಪರೀಕ್ಷೆಗೆ 106 ವಿದ್ಯಾರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 41 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಗೆ ಶೇಕಡಾ 99.05 ಫಲಿತಾಂಶ ಲಭಿಸಿರುತ್ತದೆ.
Anjuman English Medium School published its SSLC Results for the academic year 2024-2025. for This year, school has achieved 75% and Mubashira Muskan tops the school with 556/625 marks (88.96%).
Out of 20 students appeared, 1 student scored distiction, 11 Fist Class and 3 students scored second class.
School Toppers
Mubashira Muskan – 556 (88.96%)
Dangi Safa – 487 (77.92%)
Mohammed Anfal – 478(76.48%)
Gangolli News Team Congratulates all the student who appeared, and Good luck for the future endeavors.
ಎಲಿಮಲೆ: ಬದ್ರಿಯಾ ಜಮಾಅತ್ ಕಮಿಟಿ ಎಲಿಮಲೆ ಸುಳ್ಯ ತಾಲೂಕು ಇದರ ವತಿಯಿಂದ ಇಂದು ನಡೆಯಬೇಕಿದ್ದ ಆಧ್ಯಾತ್ಮಿಕ ನೇತಾರ ಸೈಯಿದ್ ಕುಂಜಿಲಂ ತಂಙಳ್ ಇವರ ನೇತೃತ್ವದಲ್ಲಿ ನಡೆಸಿಕೊಂಡು ಬರುತ್ತಿರುವ ಮಾಸಿಕ ಸ್ವಲಾತ್ ಇದರ ವಾರ್ಷಿಕೋತ್ಸವ , ಹಿಫ್ಲುಲ್ ಕುರ್ಆನ್ ಉದ್ಘಾಟನೆ ಹಾಗೂ ಇಕ್ರಾಮುಸ್ಸುನ್ನ ದರ್ಸ್ ಇದರ ಶೈಕ್ಷಣಿಕ ವರ್ಷದ ಉದ್ಘಾಟನೆ ಕಾರ್ಯಕ್ರಮವನ್ನು ದ.ಕ ಜಿಲ್ಲೆಯಾಧ್ಯಂತ ನಿಷೇಧಾಜ್ಞೆ ಇರವ ಕಾರಣ ಮುಂದೂಡಲಾಗಿದೆ.
ಕಾರ್ಯಕ್ರಮದ ಬಗ್ಗೆ ಮುಂದೆ ತಿಳಿಸಲಾಗುವುದು. ಎಲ್ಲರೂ ಸಹಕರಿಸಿ ಎಂದು ಸಂಘಟಕರು ತಿಳಿಸಿದ್ದಾರೆ.
ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಸಾಲಿಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ವಿದ್ಯಾರ್ಥಿನಿ ಕೂಡ ಸೇರ್ಪಡೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಗಣಿತ ನಗರದ ಜ್ಞಾನಸುಧಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಸ್ವಸ್ತಿ ಕಾಮತ್ 625 ಮಾರ್ಕ್ ಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನಿಯಾಗಿದ್ದಾಳೆ.
ಬೆಂಗಳೂರು, ಮೇ. 02:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಿದ್ದಾರೆ . ಮಧ್ಯಾಹ್ನ 12.30ರ ನಂತರ ವೆಬ್ಸೈಟ್ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ https://kseab.karnataka.gov.in/ ಅಥವಾ https://karresults.nic.in/ ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿದೆ.
ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆಸಲಾದ ಎಸ್ಎಸ್ಎಲ್ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.
2024-25 ಸಾಲಿನ ಫಾಲಿತಾಂಶ 65.14% ರೆಗ್ಯುಲರ್ ಫ್ರೆಷೆರ್ಸ್ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಸೇರಿ (ಮರು ಪರೀಕ್ಷೆ, ಪ್ರೈವೇಟ್ ) 62.34% ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
2024-2025 ಸಾಲಿನಲ್ಲಿ 22 ವಿದ್ಯಾರ್ಥಿಗಳು 625/625 ಮಾರ್ಕ್ಸ್ ತಕೊಂಡಿದ್ದಾರೆ.
ಮರು ಪರೀಕ್ಷಣೆ (re-evaluvation) ಗೆ ಅರ್ಜಿ ಈ ಬಾರಿ android ಆಪ್ ಮೂಲಕ ಸ್ಕ್ಯಾನ್ ಮಾಡಿ ಸಲ್ಲಿಸಬಹುದಾಗಿದೆ.
ಮರು ಎಕ್ಸಾಮ್ (2nd re-exam) 26-05-2025 – 02-06-2025 ವರೆಗೆ ನಡೆಯಲಿದೆ .
ಮೂರನೇ ಎಕ್ಸಾಮ್ (3rd re-exam) 23-06-2025 – 03-06-2025 ವರೆಗೆ ನಡೆಯಲಿದೆ ಅಂತ ಮಧು ಬಂಗಾರಪ್ಪ ಪತ್ರಿಕಾಘೋಷ್ಟಿಯೆಲ್ಲಿ ಹೇಳಿದ್ದಾರೆ.
Gangolli, April 9, 2025 – Touheed Girls’ Pre-University College, managed by the Touheed Educational Trust (R) in Gangolli, has announced an impressive 92.30% pass rate for the II PUC examinations of 2024-25. Out of 26 students who appeared for the exams, 24 have successfully passed, showcasing the institution’s commitment to academic excellence.
The results highlight remarkable performances, with eight students achieving distinction and 13 securing first class. Three students earned second class honors. Among the standout achievers Fathima Afra scored 96% and Topped the college, Aysha Siddiqua scored a perfect 100/100 in Accountancy, while Fathima Madha Arihole excelled with 100/100 in both Business Studies and Statistics.
Top performers are:
Fathima Afra (576/96%) – D/o Mr. Sadiq Al Abadi & Mrs. Zeenath
Aysha Siddiqua (572/95.33%, 100/100 in Accountancy) – D/o Mr. G. Muhammed Mubeen & Mrs. S. Nazneen
Fathima Madha Arihole (570/95%, 100/100 in Business Studies & Statistics) – D/o Late Abdul Hameed A & Mrs. Malika Tahseen
K. Fathima Asna (560/93.33%) – D/o Mr. K. Abdul Rehman & Mrs. K. Asma
Fathima Nuha (555/92.5%) – D/o Mr. G. Mohammed Ilyas & Mrs. Tabssum
Atifah (539/89.83%) – D/o Mr. Akram Mohammed Saheb & Mrs. Sirajunnisa
Munzalin Muba (538/89.66%) – D/o Mr. Mohammed Anies & Mrs. Dilshad
Sadiya (523/87.16%) – D/o Mr. Mohammed Hanif & Mrs. Khathija
The college extended heartfelt congratulations to all meritorious students, along with the management, principal, lecturers, and non-teaching staff for their unwavering support.
ಗಂಗೊಳ್ಳಿ, ಮೇ 24, 2017: “ಸರ್ಕಾರಿ ಶಾಲೆಗಳ ಬಗ್ಗೆ ಹೆಚ್ಚುತ್ತಿರುವ ಅಸಡ್ಡೆಯಿಂದಾಗಿ ಜನರು ಖಾಸಗಿ ಶಾಲೆಗಳ ಕಡೆಗೆ ಒಲವು ತೋರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, 122 ವರ್ಷಗಳ ಇತಿಹಾಸವಿರುವ ಗಂಗೊಳ್ಳಿ ಸರ್ಕಾರಿ ಉರ್ದು ಉನ್ನತ ಪ್ರಾಥಮಿಕ ಶಾಲೆಯನ್ನು ಉಳಿಸಿಕೊಳ್ಳಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶಾಲೆಯ ಮಾಜಿ ವಿದ್ಯಾರ್ಥಿಗಳ ಸಂಘವು ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿದೆ,” ಎಂದು ಮಾಜಿ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಅವರು ಗಂಗೊಳ್ಳಿ ಉರ್ದು ಉನ್ನತ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ, ಮೇ 23 ರಂದು ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
“ಮಾಜಿ ವಿದ್ಯಾರ್ಥಿಗಳು ಮತ್ತು ಗೋವಾದ ಉದ್ಯಮಿ ಎಂ.ಎಂ. ಇಬ್ರಾಹಿಂ ಸಹಾಯದಿಂದ ಎರಡು ಶಾಲಾ ವಾಹನಗಳನ್ನು ಒದಗಿಸಲಾಗಿದೆ. ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ, ಅಧ್ಯಯನ ಸಾಮಗ್ರಿಗಳು ಮತ್ತು ಕ್ರೀಡಾ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ವಾರ್ಷಿಕ ಶೈಕ್ಷಣಿಕ ಪ್ರವಾಸ ಮತ್ತು ಮಧ್ಯಾಹ್ನದ ಊಟವನ್ನು ಏರ್ಪಡಿಸಲಾಗಿದೆ. ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಮತ್ತು ಸಂಭಾಷಣೆಯ ಇಂಗ್ಲಿಷ್ ಕಲಿಕೆಯನ್ನು ಸಹ ಕಲಿಸಲಾಗುತ್ತಿದೆ. ಶಾಲೆಯು ಮೇ 29 ರಂದು ಪುನರಾರಂಭವಾದಾಗ ಎರಡು ಶಾಲಾ ವಾಹನಗಳನ್ನು ಉದ್ಘಾಟಿಸಲಾಗುವುದು,” ಎಂದು ಅವರು ಮತ್ತಷ್ಟು ವಿವರಿಸಿದರು.
“ಮಾಜಿ ವಿದ್ಯಾರ್ಥಿಗಳು ಮತ್ತು ದಾನಿಗಳು ಗೌರವ ಶಿಕ್ಷಕರ ವೇತನ, ಶಾಲಾ ವಾಹನಗಳ ವೆಚ್ಚ ಮತ್ತು ಶಾಲೆಯ ಇತರ ವೆಚ್ಚಗಳಿಗೆ ಕೊಡುಗೆ ನೀಡುತ್ತಿದ್ದಾರೆ. ಶಾಲೆಯ ಪೀಠೋಪಕರಣ, ಸ್ಮಾರ್ಟ್ ತರಗತಿಗಳು, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ತರಗತಿ, ಸಾಮಾನ್ಯ ನಾಗರಿಕರಿಗೆ ಐಟಿ ತರಗತಿ ಮತ್ತು ಸಂಪೂರ್ಣ ಶಾಲಾ ಕಟ್ಟಡದ ನಿರ್ಮಾಣಕ್ಕೆ ಇನ್ನೂ ಹೆಚ್ಚಿನ ಹಣದ ಅಗತ್ಯವಿದೆ,” ಎಂದು ಅವರು ಹೇಳಿದರು.
“1895 ರಲ್ಲಿ ಮುಸ್ಲಿಂ ಸಮುದಾಯದ ಪ್ರತಿ ಮಗುವಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಪ್ರಾರಂಭವಾದ ಸರ್ಕಾರಿ ಉರ್ದು ಉನ್ನತ ಪ್ರಾಥಮಿಕ ಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿದೆ. ಆದ್ದರಿಂದ, 2000 ರಲ್ಲಿ ಸ್ಥಾಪಿತವಾದ ಮಾಜಿ ವಿದ್ಯಾರ್ಥಿಗಳ ಸಂಘವು ಶಾಲೆಗೆ ಮೂಲಭೂತ ಅಗತ್ಯಗಳನ್ನು ಒದಗಿಸಿತು ಮತ್ತು ಮನೆಮನೆಗೆ ತೆರಳಿ ಪೋಷಕರಿಗೆ ಶಾಲೆಯ ಸಾಧನೆಗಳನ್ನು ವಿವರಿಸಿತು. ಈ ಅಭಿಯಾನದ ಫಲಿತಾಂಶವಾಗಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಸೇರಿದರು,” ಎಂದು ಅಬ್ದುಲ್ ಸೇರಿಸಿದರು.
ಉಪಾಧ್ಯಕ್ಷ ಶಬುದ್ದೀನ್ ಮೊಹಮ್ಮದ್ ಆವೂಫ್, ಕಾರ್ಯದರ್ಶಿ ಅಬ್ದುಲ್ ಹಾದಿ, ಖಜಾಂಚಿ ನಕುಡಾ ಮೊಹಮ್ಮದ್ ಮುತಾಹಿರ್, ಜಂಟಿ ಖಜಾಂಚಿ ಮೊಹಮ್ಮದ್ ಇಬ್ರಾಹಿಂ ಮತ್ತು ಇತರರು ಉಪಸ್ಥಿತರಿದ್ದರು.