Category: Gangolli

  • Sahebaan Community Forum Announces Recognition Awards for Meritorious Muslim Students of DK and Udupi

    Padubidri/Udupi: The Sahebaan Community Forum (SCF) has announced the Sahebaan Recognition Awards to honor outstanding academic performers from the Muslim community residing in Dakshina Kannada and Udupi districts. The awards aim to celebrate students who have secured 90% and above marks in their 10th or 12th-grade board examinations during the academic year 2024–2025.

    The awards will be presented during the Sahebaan Community Forum Family Gathering, scheduled to be held on 15th June 2025 at Padubidri, Udupi.

    Eligible students are requested to apply by filling out the application form available through the following link: https://forms.gle/8kPTxX84LCqnDVad8.

    Important: The last date for submitting applications is 5th June 2025.

    The initiative is part of SCF’s continued efforts to encourage academic excellence and recognize the achievements of young members within the community.

  • ಕಾರ್ಕಳ: ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಮರಣ; ಆಸ್ಪತ್ರೆ ಎದುರು ಸಂಬಂಧಿಕರಿಂದ ಪ್ರತಿಭಟನೆ

    ಕಾರ್ಕಳ, ಮೇ 15, 2025: ಕಾರ್ಕಳದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೊಟ್ಟೆಯಲ್ಲಿ ಗಂಟು ತೆಗೆಯಲು ನಡೆದ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಈ ಘಟನೆಯಿಂದ ಕುಪಿತಗೊಂಡ ಮೃತರ ಸಂಬಂಧಿಕರು ಆಸ್ಪತ್ರೆಯ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಮಧ್ಯಪ್ರವೇಶಕ್ಕೆ ಕಾರಣವಾಯಿತು.

    ಈ ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಸಾನೂರಿನ ನಿವಾಸಿ ಜುಬೇದಾ (54) ಎಂದು ಗುರುತಿಸಲಾಗಿದೆ.

    ಆಸ್ಪತ್ರೆಯ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಜುಬೇದಾ ಅವರು ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ವೈದ್ಯರು ಅವರ ಹೊಟ್ಟೆಯಲ್ಲಿ ಗಂಟು ರೂಪುಗೊಂಡಿರುವ ಶಂಕೆ ವ್ಯಕ್ತಪಡಿಸಿದ್ದರು. ಈ ಗಂಟು ತೆಗೆಯಲು ನಡೆಸಿದ ಶಸ್ತ್ರಚಿಕಿತ್ಸೆಯ ವೇಳೆ ಜುಬೇದಾ ಮೃತಪಟ್ಟಿದ್ದಾರೆ.

    ಜುಬೇದಾ ಅವರ ಸಾವಿನ ಬಳಿಕ, ಕೋಪಗೊಂಡ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿ, ಆಸ್ಪತ್ರೆ ಆಡಳಿತದಿಂದ ಉತ್ತರ ಕೋರಿದ್ದಾರೆ.

    ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ, ಕಾರ್ಕಳ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

  • Clarification Notice

    Dear Readers,

    We would like to inform you that our recent report concerning an incident related to a local educational institution has been temporarily unpublished.

    Although the report was based on verified sources and supporting evidence, we are currently awaiting an official statement from the institution to ensure all viewpoints are fairly represented.

    We remain committed to responsible and balanced journalism. The report may be updated once the institution provides its official response.

    Thank you for your patience and understanding.

    Gangolli News Network Team

    Update:

    School has shared the official response which can be read here : Official Statement from the institution Regarding Recent Incident

  • Mehrish and Tisha Reem Top Barakah International School’s 100% CBSE Results

    Mangaluru, May 13, 2025: Continuing its legacy of academic excellence, Barakah International School and College has achieved a 100% pass rate in the 2025 CBSE Class 10 and Class 12 examinations, showcasing outstanding performance. Top performers include:

    Class 10:

    • Mehrish Haleema (96.4%)
    • Hamna Nafeesa (96.2%)

    Class 12 (Science):

    • Tisha Reem (93%) – niece of Gangolli’s own Zahir Nakhuda

    Tisha Reem is also a former student of Touheed English Medium School in Gangolli.

    Several other students across all streams have also secured excellent results, adding to the institution’s remarkable achievement.

    Gangolli News congratulates all the toppers and the students

  • ಗಂಗೊಳ್ಳಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ; ವ್ಯಕ್ತಿಗೆ ಗಂಭೀರ ಗಾಯ

    ಗಂಗೊಳ್ಳಿ: ಮರವಂತೆ ಗ್ರಾಮದ ನಿರೋಣಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು (13/05/2025) ಮಧ್ಯಾಹ್ನ 12:00 ಗಂಟೆಗೆ ಘಟನೆಯೊಂದು ನಡೆದಿದೆ. ಪಿರ್ಯಾದಿದಾರರಾದ ಪ್ರವೀಣ್ (36), ಮರವಂತೆ ಗ್ರಾಮ, ಬೈಂದೂರು ಇವರು ಹೆದ್ದಾರಿಯ ಪಕ್ಕದಲ್ಲಿ ನಿಂತಿರುವಾಗ, ಕುಂದಾಪುರ-ಬೈಂದೂರು ಏಕಮುಖ ರಸ್ತೆಯ ಕರASIS ಐಸ್ ಪ್ಲ್ಯಾಂಟ್ ಹತ್ತಿರ GA-07-N-6963 ಕಾರಿನ ಚಾಲಕ ಗೌರೀಶ್ ತನ್ನ ಕಾರನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು, ರಸ್ತೆಯ ಪಶ್ಚಿಮ ಬದಿಯಿಂದ ಪೂರ್ವ ಬದಿಯ ಕರಾವಳಿ ಐಸ್ ಪ್ಲ್ಯಾಂಟ್ ಕಡೆಗೆ ರಸ್ತೆ ದಾಟುತ್ತಿದ್ದ ಪಿರ್ಯಾದಿದಾರರ ಚಿಕ್ಕಪ್ಪ ಕೃಷ್ಣ ಅವರಿಗೆ ಡಿಕ್ಕಿ ಹೊಡೆದಿದ್ದಾನೆ.

    ಈ ಘಟನೆಯಿಂದ ಕೃಷ್ಣ ಅವರು ರಸ್ತೆಯ ಡಿವೈಡರ್ ಬಳಿ ಬಿದ್ದು, ಬಲಗಾಲಿಗೆ ತೀವ್ರ ರಕ್ತ ಗಾಯ, ತಲೆಗೆ ಹಾಗೂ ಎದೆಗೆ ಒಳಗಿನ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಕುಂದಾಪುರ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

    ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 58/2025ರಡಿ ಕಲಂ 281, 125(A), 125(B) BNS ರಂತೆ ಪ್ರಕರಣ ದಾಖಲಾಗಿದೆ.

  • ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಮಾಸಿಕ SC/ST ಸಭೆ

    ಗಂಗೊಳ್ಳಿ: ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ 12-05-2024 ರಂದು ಠಾಣಾ ವ್ಯಾಪ್ತಿಯ ಎಲ್ಲಾ SC/ST ಮುಖಂಡರು, ಹಾಗೂ ಗ್ರಾಮಸ್ಥರನ್ನು ಠಾಣೆಗೆ ಬರಮಾಡಿಕೊಂಡು ಮಾಸಿಕ SC / ST ಸಭೆ ನಡೆಸಿ ಕುಂದು ಕೊರತೆ ವಿಚಾರಿಸಲಾಯಿತು.

    ಬ್ರಹ್ಮಾವರ

    ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕೊಕ್ಕರಣೆ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲೋನಿಗೆ ತೆರಳಿ ಮಾಸಿಕ ಕುಂದು ಕೊರತೆ ಸಭೆ ನಡೆಸಲಾಯಿತು.

    Brahamavara

    ಬೈಂದೂರು

    ಬೈಂದೂರು ಪೊಲೀಸ್ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ SC / ST ಮುಖಂಡರುಗಳ ಕುಂದು ಕೊರತೆ ಸಭೆಯನ್ನು ನಡೆಸಿ ಅವರ ಅಹವಾಲುಗಳನ್ನು ಸ್ವೀಕರಿಸಿ ನಂತರ ಸೈಬರ್ ಅಪರಾಧ ,ರಸ್ತೆ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ಸಲಹೆಗಳನ್ನು ನೀಡಲಾಯಿತು.

    Bynduru
  • ಮರವಂತೆ: ಗಾಂಜಾ ಸೇವನೆ, ಇಬ್ಬರು ಪೊಲೀಸ್ ವಶಕ್ಕೆ

    ಮರವಂತೆ, ಮೇ.10: ಮರವಂತೆ ಕಡಲ ತೀರದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಯುವಕರ ಮೇಲೆ ಪ್ರಕರಣ ದಾಖಲಾಗಿದೆ.

    10ರಂದು ಬೆಳಿಗ್ಗೆ ಗಂಗೊಳ್ಳಿ ಠಾಣೆ  ಪೊಲೀಸ್ ಉಪನಿರೀಕ್ಷಕರಾದ ಬಸವರಾಜ ಕನಶೆಟ್ಟಿ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮರವಂತೆ ಗ್ರಾಮದ ಮರವಂತೆ ಬೀಚ್ ಬಳಿ ಇಬ್ಬರು ಯುವಕರು ಗಾಂಜಾ ಸೇವಿಸುತ್ತಿರುವುದಾಗಿ ಮಾಹಿತಿ ಬಂದಂತೆ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಇಬ್ಬರೂ ಯುವಕರು ತೊದಲುತ್ತಾ ಮಾತನಾಡುತ್ತಿದ್ದು, ಅಮಲಿನಲ್ಲಿರುವುದು ಕಂಡುಬಂದಿದೆ.

    ಶರ್ಪುದ್ದೀನ್ (22ವ), ಮಹಮ್ಮದ್ ಸುಹೇಬ್ (21ವ) ಈ ಯುವಕರು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದಿದ್ದು ಅವರನ್ನು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಗಂಗೊಳ್ಳಿ  ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗಂಗೊಳ್ಳಿ: ಸುಶ್ಮಿತಾ ಗಾಣಿಗ ಅವರಿಗೆ ಶಿಕ್ಷಣ ಇಲಾಖೆ ವತಿಯಿಂದ ಸನ್ಮಾನ

    ಗಂಗೊಳ್ಳಿ : ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ೨ನೇ ರ್‍ಯಾಂಕ್ ಪಡೆಯುವ ಮೂಲಕ ಸುಶ್ಮಿತಾ ಗಾಣಿಗ ತಾಲೂಕಿಗೆ ಹಾಗೂ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಅವಳ ಈ ಸಾಧನೆ ಪ್ರಶಂಸನೀಯ ಎಂದು ಕುಂದಾಪುರ ವಲಯದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಹೇಳಿದರು.

    ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ್‍ಯಾಂಕ್ ಪಡೆದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್.ಗಾಣಿಗ ಅವರನ್ನು ಗಂಗೊಳ್ಳಿಯ ಅವರ ಮನೆಯಲ್ಲಿ ಶಿಕ್ಷಣ ಇಲಾಖೆ ಪರವಾಗಿ ಸನ್ಮಾನಿಸಿ ಅಭಿನಂದಿಸಿ ಮಾತನಾಡಿದರು.
    ಎಸ್ಸೆಸ್ಸೆಲ್ಸಿ ನೋಡೆಲ್ ಅಧಿಕಾರಿ ಶೇಖರ ಪಡುಕೋಣೆ, ಶಿಕ್ಷಣ ಸಂಯೋಜಕ ರಾಜ ಖಾರ್ವಿ ಶುಭ ಹಾರೈಸಿದರು. ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಶಿವಾನಂದ ಗಾಣಿಗ, ಮಮತಾ ಎಸ್.ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.

  • ನಾಳೆಯಿಂದ ಬಾಬಾಷಾ ಪ್ರೀಮಿಯರ್ ಲೀಗ್

    ಗಂಗೊಳ್ಳಿ: ಬಾಬಾಷಾ ಪ್ರೀಮಿಯರ್ ಲೀಗ್ 2025 ಇದರ ಆಶ್ರಯ ದಲ್ಲಿ ಐದನೇ ಬಾರಿಗೆ ಲೀಗ್ ಕಮ್ ನಾಕೌಟ್ ಮಾದ್ರಿಯ ಪಂದ್ಯಾಟ ಬಾಬಾಷಾ ಮೊಹಲ್ಲಾ ಗಂಗೊಳ್ಳಿಯಲ್ಲಿ ನಾಳೆಯಿಂದ ನಡೆಯಲಿದೆ. ಈ ಪಂದ್ಯಾಟ ನಾಳೆ 10 ಮೇ 2025 ನಿಂದ 11 ಮೇ 2025 ವರೆಗೆ ನಡೆಯಲಿದೆ.

    ಬೈಂದೂರು ವಿಧಾನಸಭಾ ಕ್ಷೇತ್ರದ 12 ತಂಡಗಳ 30 ಗಜಗಳ ಲೀಗ್ ಕಮ್ ನೌಕೌಟ್ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.

    ಪ್ರಥಮ ಬಹುಮಾನವಾಗಿ 70,777 ರೂಪಾಯಿ, ದ್ವಿತೀಯ ಬಹುಮಾನವಾಗಿ 50,555 ರೂಪಾಯಿ ಸರಣಿ ಶ್ರೇಷ್ಠವಾಗಿ ಸೈಕಲ್ ಘೋಷಿಸಲಾಗಿದೆ.

  • ತ್ರಾಸಿ-ಮರವಂತೆ ಪ್ರವಾಸೋಧ್ಯಮ ಕೇಂದ್ರವಾಗಿ ಇನ್ನಷ್ಟು ಅಭಿವೃದ್ಧಿಪಡಿಸಲು ಮುತುವರ್ಜಿ ಕ್ರಮ: ಕೇಂದ್ರ ಪ್ರವಾಸೋಧ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್

    ಕುಂದಾಪುರ: ಉಡುಪಿ ಜಿಲ್ಲೆ ಪ್ರವಾಸೋಧ್ಯಮ ಅಭಿವೃದ್ಧಿಪಡಿಸಲು ಪೂರಕವಾಗಿದೆ. ಮರವಂತೆಯಲ್ಲಿ ಒಂದೆಡೆ ಸಮುದ್ರ ಮತ್ತೊಂದೆಡೆ ನದಿ ಹಾಗೂ‌ ಮದ್ಯೆ ರಸ್ತೆಯಿದ್ದು ಇದೊಂದು ಅದ್ಭುತ ಪ್ರದೇಶ. ಇಲ್ಲಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ‌ ಸಿದ್ಧಪಡಿಸಿ ನೀಡಿದಲ್ಲಿ ಅಗತ್ಯಕ್ರಮ ವಹಿಸಲಾಗುವುದು ಎಂದು ಕೇಂದ್ರ ಪ್ರವಾಸೋಧ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದರು.

    ಗುರುವಾರ ಸಂಜೆ ತ್ರಾಸಿ- ಮರವಂತೆ ಸಮುದ್ರ ತೀರ ವೀಕ್ಷಣೆ ಬಳಿಕ ಅವರು ಇಲ್ಲಿನ ಅಭಿವೃದ್ಧಿ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದರು.

    ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಬೈಂದೂರು ಕ್ಷೇತೃದ ಕೊಲ್ಲೂರು ಸಹಿತ ಮರವಂತೆ, ಸೋಮೇಶ್ವರ ಬೀಚ್ ಅಭಿವೃದ್ಧಿಯ ಕುರಿತು ತಿಂಗಳಿನ ಹಿಂದೆ ಸ್ಥಳೀಯ ಶಾಸಕರು ಹಾಗೂ ಮುಖಂಡರ ಜೊತೆಗೆ ಕೇಂದ್ರ ಪ್ರವಾಸೋಧ್ಯಮ ಸಚಿವರನ್ನು ಭೇಟಿ ಮಾಡಲಾಗಿತ್ತು. ‘ಸಾಸಿ’ ಎನ್ನುವ ಯೋಜನೆಯಡಿ ಪಡುವರಿ-ಸೋಮೇಶ್ವರ, ಮರವಂತೆ ಹಾಗೂ ಕೊಲ್ಲೂರು ದೇವಸ್ಥಾನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬೇಡಿಕೆಯಿಟ್ಟು ಪ್ರಸ್ತಾವನೆ ಕಳಿಸಲಾಗಿತ್ತು. ಗುರುವಾರ ಕೇಂದ್ರ ಮಂತ್ರಿಗಳು ಈ ಮೂರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಸಕಾರಾತ್ಮಕ ಸ್ಪಂದನೆ ನಿರೀಕ್ಷೆಯಿದೆ ಎಂದರು.

    ಇದಕ್ಕೂ ಮೊದಲು ಕೇಂದ್ರ ಸಚಿವರು ಮರವಂತೆಯಲ್ಲಿ ಕೆಲ ತಿಂಗಳ ಹಿಂದೆ ಆರಂಭಗೊಂಡ ಸ್ಕೈ ಡೈನಿಂಗ್ ಏರಿದರು.

    ಈ ಸಂದರ್ಭ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮೀ ಎಸ್.ಆರ್., ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸ್ಥಳೀಯಾಡಳಿತ ಪ್ರತಿನಿಧಿಗಳು, ವಿವಿಧ ಇಲಾಖಾಧಿಕಾರಿಗಳು ಇದ್ದರು.